ಸುಳ್ಯ: ತನ್ನ ವಾರ್ಡ್ ನ ಪ್ರತಿ ಮನೆಗೂ ಲಡ್ಡು ಹಂಚಿ ಗೆಲುವಿನ ಸಿಹಿ ಸಂಭ್ರಮವನ್ನು ಹಂಚಿದ್ದಾರೆ ನ.ಪಂ.ಚುನಾವಣೆಯಲ್ಲಿ 17ನೇ ವಾರ್ಡ್ ಬೋರುಗುಡ್ಡೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿ ಜಯಶಾಲಿಯಾದ ಕೆ.ಎಸ್.ಉಮ್ಮರ್.
ಶುಕ್ರವಾರ ತನ್ನ ಬೆಂಬಲಿಗರೊಂದಿಗೆ ವಾರ್ಡ್ ನ ಎಲ್ಲಾ ಮನೆಗಳಿಗೂ ಭೇಟಿ ನೀಡಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಉಮ್ಮರ್ ಮನೆ ಮಂದಿಗೆ ಸಿಹಿ ತಿಂಡಿ ನೀಡಿದರು. ಕೆಲವು ಮನೆಗಳಲ್ಲಿ ನೂತನ ಸದಸ್ಯರನ್ನು ಜನತೆ ಹೂ ಹಾರ ಹಾಕಿ ಸ್ವಾಗತಿಸಿದರು. ವಾರ್ಡ್ ನ ಅಭಿವೃದ್ಧಿಗೆ ಉತ್ತಮ ಕೆಲಸ ಮಾಡುವಂತೆ ಹಿರಿಯರು ಆಶಯ ವ್ಯಕ್ತಪಡಿಸಿದರು.
ನ.ಪಂ.ಚುನಾವಣೆಯಲ್ಲಿ ಅತ್ಯಂತ ಪೈಪೋಟಿ ನಡೆದ ಬೋರುಗುಡ್ಡೆ ವಾರ್ಡ್ ನಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿ ಉಮ್ಮರ್ ಜಯಗಳಿಸಿದ್ದರು. ಕಳೆದ ಬಾರಿ ಎಸ್.ಡಿ.ಪಿ.ಐ ಸದಸ್ಯನಾಗಿದ್ದ ಉಮ್ಮರ್ ಈ ಬಾರಿ ಪಕ್ಷದಿಂದ ದೂರ ಸರಿದು ಪಕ್ಷೇತರನಾಗಿ ಸ್ಪರ್ಧಿಸಿದ್ದರು.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…