ಸುಳ್ಯ: ತನ್ನ ವಾರ್ಡ್ ನ ಪ್ರತಿ ಮನೆಗೂ ಲಡ್ಡು ಹಂಚಿ ಗೆಲುವಿನ ಸಿಹಿ ಸಂಭ್ರಮವನ್ನು ಹಂಚಿದ್ದಾರೆ ನ.ಪಂ.ಚುನಾವಣೆಯಲ್ಲಿ 17ನೇ ವಾರ್ಡ್ ಬೋರುಗುಡ್ಡೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿ ಜಯಶಾಲಿಯಾದ ಕೆ.ಎಸ್.ಉಮ್ಮರ್.
ಶುಕ್ರವಾರ ತನ್ನ ಬೆಂಬಲಿಗರೊಂದಿಗೆ ವಾರ್ಡ್ ನ ಎಲ್ಲಾ ಮನೆಗಳಿಗೂ ಭೇಟಿ ನೀಡಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಉಮ್ಮರ್ ಮನೆ ಮಂದಿಗೆ ಸಿಹಿ ತಿಂಡಿ ನೀಡಿದರು. ಕೆಲವು ಮನೆಗಳಲ್ಲಿ ನೂತನ ಸದಸ್ಯರನ್ನು ಜನತೆ ಹೂ ಹಾರ ಹಾಕಿ ಸ್ವಾಗತಿಸಿದರು. ವಾರ್ಡ್ ನ ಅಭಿವೃದ್ಧಿಗೆ ಉತ್ತಮ ಕೆಲಸ ಮಾಡುವಂತೆ ಹಿರಿಯರು ಆಶಯ ವ್ಯಕ್ತಪಡಿಸಿದರು.
ನ.ಪಂ.ಚುನಾವಣೆಯಲ್ಲಿ ಅತ್ಯಂತ ಪೈಪೋಟಿ ನಡೆದ ಬೋರುಗುಡ್ಡೆ ವಾರ್ಡ್ ನಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿ ಉಮ್ಮರ್ ಜಯಗಳಿಸಿದ್ದರು. ಕಳೆದ ಬಾರಿ ಎಸ್.ಡಿ.ಪಿ.ಐ ಸದಸ್ಯನಾಗಿದ್ದ ಉಮ್ಮರ್ ಈ ಬಾರಿ ಪಕ್ಷದಿಂದ ದೂರ ಸರಿದು ಪಕ್ಷೇತರನಾಗಿ ಸ್ಪರ್ಧಿಸಿದ್ದರು.
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…