ಸುಳ್ಯ: ತನ್ನ ವಾರ್ಡ್ ನ ಪ್ರತಿ ಮನೆಗೂ ಲಡ್ಡು ಹಂಚಿ ಗೆಲುವಿನ ಸಿಹಿ ಸಂಭ್ರಮವನ್ನು ಹಂಚಿದ್ದಾರೆ ನ.ಪಂ.ಚುನಾವಣೆಯಲ್ಲಿ 17ನೇ ವಾರ್ಡ್ ಬೋರುಗುಡ್ಡೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿ ಜಯಶಾಲಿಯಾದ ಕೆ.ಎಸ್.ಉಮ್ಮರ್.
ಶುಕ್ರವಾರ ತನ್ನ ಬೆಂಬಲಿಗರೊಂದಿಗೆ ವಾರ್ಡ್ ನ ಎಲ್ಲಾ ಮನೆಗಳಿಗೂ ಭೇಟಿ ನೀಡಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಉಮ್ಮರ್ ಮನೆ ಮಂದಿಗೆ ಸಿಹಿ ತಿಂಡಿ ನೀಡಿದರು. ಕೆಲವು ಮನೆಗಳಲ್ಲಿ ನೂತನ ಸದಸ್ಯರನ್ನು ಜನತೆ ಹೂ ಹಾರ ಹಾಕಿ ಸ್ವಾಗತಿಸಿದರು. ವಾರ್ಡ್ ನ ಅಭಿವೃದ್ಧಿಗೆ ಉತ್ತಮ ಕೆಲಸ ಮಾಡುವಂತೆ ಹಿರಿಯರು ಆಶಯ ವ್ಯಕ್ತಪಡಿಸಿದರು.
ನ.ಪಂ.ಚುನಾವಣೆಯಲ್ಲಿ ಅತ್ಯಂತ ಪೈಪೋಟಿ ನಡೆದ ಬೋರುಗುಡ್ಡೆ ವಾರ್ಡ್ ನಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿ ಉಮ್ಮರ್ ಜಯಗಳಿಸಿದ್ದರು. ಕಳೆದ ಬಾರಿ ಎಸ್.ಡಿ.ಪಿ.ಐ ಸದಸ್ಯನಾಗಿದ್ದ ಉಮ್ಮರ್ ಈ ಬಾರಿ ಪಕ್ಷದಿಂದ ದೂರ ಸರಿದು ಪಕ್ಷೇತರನಾಗಿ ಸ್ಪರ್ಧಿಸಿದ್ದರು.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…