Advertisement
ಸುದ್ದಿಗಳು

ಟೆಸ್ಟ್ ಕ್ರಿಕೆಟ್ ಪಂದ್ಯಾಟ : ಕನ್ನಡಿಗ ಮಯಾಂಕ್​ ಅಗರ್​ವಾಲ್ ಭರ್ಜರಿ ದ್ವಿಶತಕ: ಬೃಹತ್ ಮೊತ್ತ ಪೇರಿಸಿದ ಭಾರತ

Share

ವಿಶಾಖಪಟ್ಟಣ: ಆರಂಭಿಕ ಆಟಗಾರರಾದ ಕನ್ನಡಿಗ ಮಾಯಾಂಕ್ ಅಗರ್​ವಾಲ್ ಭರ್ಜರಿ ದ್ವಿಶತಕ (215)ಮತ್ತು ರೋಹಿತ್ ಶರ್ಮ ಭರ್ಜರಿ ಶತಕದ(176) ನೆರವಿನಿಂದ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಮೊದಲ ಟೆಸ್ಟ್​ನಲ್ಲಿ ಭಾರತ ಬೃಹತ್ ಮೊತ್ತ ದಾಖಲಿಸಿದೆ.

Advertisement
Advertisement

ಏಳು ವಿಕೆಟ್ ಗೆ 502 ರನ್ ಗಳಿಸಿ ಭಾರತ ಪ್ರಥಮ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಎರಡನೇ ದಿನದ ಆಟದ ಮುಕ್ತಾಯಕ್ಕೆ ದಕ್ಷಿಣ ಆಫ್ರಿಕಾ ಮೂರು ವಿಕೆಟ್ ಕಳೆದುಕೊಂಡು 39 ರನ್ ಗಳಿಸಿದೆ. ವಿಶಾಖಪಟ್ಟಣದ ಎಸಿಎ-ವಿಡಿಸಿಎ ಮೈದಾನದಲ್ಲಿ ಬುಧವಾರ ಆರಂಭಗೊಂಡ ಪಂದ್ಯದಲ್ಲಿ ಟಾಸ್​ ಗೆದ್ದ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಯ್ಲಿ​ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು. ಹೊಸ ಆರಂಭಿಕ ಜೋಡಿಯಾಗಿ ಕಣಕ್ಕಿಳಿದ ರೋಹಿತ್​ ಶರ್ಮಾ ಮತ್ತು ಕನ್ನಡಿಗ ಮಯಾಂಕ್​ ಅಗರ್​ವಾಲ್​ ಪ್ರಥಮ ದಿನ ಪೂರ್ತಿ ಆಡಿ 59.1 ಓವರ್​ಗಳಲ್ಲಿ 202ರನ್​ ಗಳಿಸಿದ್ದರು. ರೋಹಿತ್ ಶರ್ಮ115 ರನ್​, ಮಯಾಂಕ್​ 84 ರನ್ ಗಳಿಸಿ ಅಜೇಯರಾಗಿ ಉಳಿದಿದ್ದರು.

ಗುರುವಾರ ಆಟ ಮುಂದುವರಿಸಿದ ಈ ಜೋಡಿ ಮೊದಲ ವಿಕೆಟ್ ಗೆ ಬರೋಬ್ಬರಿ 317 ರನ್​ ಗಳಿಸಿತು. ಈ ಮೂಲಕ 2004ರಲ್ಲಿ ಕಾನ್ಪುರದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ಆರಂಭಿಕ ಜೋಡಿಯಾಗಿದ್ದ ವಿರೇಂದ್ರ ಸೆಹ್ವಾಗ್ ಹಾಗೂ ಗೌತಮ್​ ಗಂಭೀರ್ ಗಳಿಸಿದ್ದ 218 ರನ್​ಗಳ ದಾಖಲೆಯನ್ನು ಮುರಿದರು. ಅದೇ ರೀತಿ 300ಕ್ಕೂ ಹೆಚ್ಚು ರನ್​ ಜೊತೆಯಾಟ ನೀಡಿದ ​ ಮೂರನೇ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಆರಂಭಿಕನಾಗಿ ಬ್ಯಾಟ್ ಮಾಡಲು ಕಣಕ್ಕೆ ಇಳಿದ ಕನ್ನಡಿಗ ಮಯಾಂಕ್ ಅಗರ್​ವಾಲ್​ ಅವರ ಮೊದಲ ದ್ವಿಶತಕ ಇದಾಗಿದ್ದು 371 ಬಾಲ್​ಗಳಲ್ಲಿ 22 ಬೌಂಡರಿ ಮತ್ತು 5 ಸಿಕ್ಸರ್ ಸಹಿತ 215 ರನ್​ ಗಳಿಸಿದರು. ರೋಹಿತ್ ಶರ್ಮಾ 244 ಬಾಲ್ ಗಳಲ್ಲಿ 23 ಬೌಂಡರಿ ಮತ್ತು 6 ಸಿಕ್ಸರ್ ನೆರವಿನಿಂದ 176 ರನ್​ ಗಳಿಸಿ ಔಟಾದರು‌. ಇನ್ನುಳಿದಂತೆ ಚೇತೇಶ್ವರ್​ ಪೂಜಾರಿ 6 ರನ್​, ವಿರಾಟ್​ ಕೊಹ್ಲಿ 20, ಅಜಿಂಕ್ಯ ರಹಾನೆ 15, ಹನುಮ ವಿಹಾರಿ 10, ವೃದ್ಧಿಮಾನ್​ ಸಾಹಾ 21 ರನ್​ ಗಳಿಸಿ ಔಟಾದರು. ರವೀಂದ್ರ ಜಡೇಜಾ (30), ರವಿಚಂದ್ರನ್​ ಅಶ್ವಿನ್​ (1) ಔಟಾಗದೆ ಉಳಿದರು.

ಮೊದಲ ಇನ್ನಿಂಗ್ಸ್​ ಆರಂಭಿಸಿದ ದ.ಆಫ್ರಿಕಾ ಎರಡನೇ ದಿನದ ಅಂತ್ಯಕ್ಕೆ 20 ಓವರ್​ಗಳಲ್ಲಿ 3 ವಿಕೆಟ್​ ನಷ್ಟಕ್ಕೆ 39 ರನ್​ ಗಳಿಸಿ ಸಂಕಷ್ಟಕ್ಕೆ ಸಿಲುಕಿದೆ. ಭಾರತದ ಪರ ರವಿಚಂದ್ರನ್ ಅಶ್ವಿನ್ ಎರಡು ಮತ್ತು ರವೀಂದ್ರ ಜಡೇಜ ಒಂದು ವಿಕೆಟ್ ಪಡೆದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

5 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

5 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago