Advertisement
ಸುದ್ದಿಗಳು

ಟೆಸ್ಟ್ ಕ್ರಿಕೆಟ್ ಪಂದ್ಯಾಟ : ಕನ್ನಡಿಗ ಮಯಾಂಕ್​ ಅಗರ್​ವಾಲ್ ಭರ್ಜರಿ ದ್ವಿಶತಕ: ಬೃಹತ್ ಮೊತ್ತ ಪೇರಿಸಿದ ಭಾರತ

Share

ವಿಶಾಖಪಟ್ಟಣ: ಆರಂಭಿಕ ಆಟಗಾರರಾದ ಕನ್ನಡಿಗ ಮಾಯಾಂಕ್ ಅಗರ್​ವಾಲ್ ಭರ್ಜರಿ ದ್ವಿಶತಕ (215)ಮತ್ತು ರೋಹಿತ್ ಶರ್ಮ ಭರ್ಜರಿ ಶತಕದ(176) ನೆರವಿನಿಂದ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಮೊದಲ ಟೆಸ್ಟ್​ನಲ್ಲಿ ಭಾರತ ಬೃಹತ್ ಮೊತ್ತ ದಾಖಲಿಸಿದೆ.

ಏಳು ವಿಕೆಟ್ ಗೆ 502 ರನ್ ಗಳಿಸಿ ಭಾರತ ಪ್ರಥಮ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಎರಡನೇ ದಿನದ ಆಟದ ಮುಕ್ತಾಯಕ್ಕೆ ದಕ್ಷಿಣ ಆಫ್ರಿಕಾ ಮೂರು ವಿಕೆಟ್ ಕಳೆದುಕೊಂಡು 39 ರನ್ ಗಳಿಸಿದೆ. ವಿಶಾಖಪಟ್ಟಣದ ಎಸಿಎ-ವಿಡಿಸಿಎ ಮೈದಾನದಲ್ಲಿ ಬುಧವಾರ ಆರಂಭಗೊಂಡ ಪಂದ್ಯದಲ್ಲಿ ಟಾಸ್​ ಗೆದ್ದ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಯ್ಲಿ​ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು. ಹೊಸ ಆರಂಭಿಕ ಜೋಡಿಯಾಗಿ ಕಣಕ್ಕಿಳಿದ ರೋಹಿತ್​ ಶರ್ಮಾ ಮತ್ತು ಕನ್ನಡಿಗ ಮಯಾಂಕ್​ ಅಗರ್​ವಾಲ್​ ಪ್ರಥಮ ದಿನ ಪೂರ್ತಿ ಆಡಿ 59.1 ಓವರ್​ಗಳಲ್ಲಿ 202ರನ್​ ಗಳಿಸಿದ್ದರು. ರೋಹಿತ್ ಶರ್ಮ115 ರನ್​, ಮಯಾಂಕ್​ 84 ರನ್ ಗಳಿಸಿ ಅಜೇಯರಾಗಿ ಉಳಿದಿದ್ದರು.

ಗುರುವಾರ ಆಟ ಮುಂದುವರಿಸಿದ ಈ ಜೋಡಿ ಮೊದಲ ವಿಕೆಟ್ ಗೆ ಬರೋಬ್ಬರಿ 317 ರನ್​ ಗಳಿಸಿತು. ಈ ಮೂಲಕ 2004ರಲ್ಲಿ ಕಾನ್ಪುರದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ಆರಂಭಿಕ ಜೋಡಿಯಾಗಿದ್ದ ವಿರೇಂದ್ರ ಸೆಹ್ವಾಗ್ ಹಾಗೂ ಗೌತಮ್​ ಗಂಭೀರ್ ಗಳಿಸಿದ್ದ 218 ರನ್​ಗಳ ದಾಖಲೆಯನ್ನು ಮುರಿದರು. ಅದೇ ರೀತಿ 300ಕ್ಕೂ ಹೆಚ್ಚು ರನ್​ ಜೊತೆಯಾಟ ನೀಡಿದ ​ ಮೂರನೇ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಆರಂಭಿಕನಾಗಿ ಬ್ಯಾಟ್ ಮಾಡಲು ಕಣಕ್ಕೆ ಇಳಿದ ಕನ್ನಡಿಗ ಮಯಾಂಕ್ ಅಗರ್​ವಾಲ್​ ಅವರ ಮೊದಲ ದ್ವಿಶತಕ ಇದಾಗಿದ್ದು 371 ಬಾಲ್​ಗಳಲ್ಲಿ 22 ಬೌಂಡರಿ ಮತ್ತು 5 ಸಿಕ್ಸರ್ ಸಹಿತ 215 ರನ್​ ಗಳಿಸಿದರು. ರೋಹಿತ್ ಶರ್ಮಾ 244 ಬಾಲ್ ಗಳಲ್ಲಿ 23 ಬೌಂಡರಿ ಮತ್ತು 6 ಸಿಕ್ಸರ್ ನೆರವಿನಿಂದ 176 ರನ್​ ಗಳಿಸಿ ಔಟಾದರು‌. ಇನ್ನುಳಿದಂತೆ ಚೇತೇಶ್ವರ್​ ಪೂಜಾರಿ 6 ರನ್​, ವಿರಾಟ್​ ಕೊಹ್ಲಿ 20, ಅಜಿಂಕ್ಯ ರಹಾನೆ 15, ಹನುಮ ವಿಹಾರಿ 10, ವೃದ್ಧಿಮಾನ್​ ಸಾಹಾ 21 ರನ್​ ಗಳಿಸಿ ಔಟಾದರು. ರವೀಂದ್ರ ಜಡೇಜಾ (30), ರವಿಚಂದ್ರನ್​ ಅಶ್ವಿನ್​ (1) ಔಟಾಗದೆ ಉಳಿದರು.

ಮೊದಲ ಇನ್ನಿಂಗ್ಸ್​ ಆರಂಭಿಸಿದ ದ.ಆಫ್ರಿಕಾ ಎರಡನೇ ದಿನದ ಅಂತ್ಯಕ್ಕೆ 20 ಓವರ್​ಗಳಲ್ಲಿ 3 ವಿಕೆಟ್​ ನಷ್ಟಕ್ಕೆ 39 ರನ್​ ಗಳಿಸಿ ಸಂಕಷ್ಟಕ್ಕೆ ಸಿಲುಕಿದೆ. ಭಾರತದ ಪರ ರವಿಚಂದ್ರನ್ ಅಶ್ವಿನ್ ಎರಡು ಮತ್ತು ರವೀಂದ್ರ ಜಡೇಜ ಒಂದು ವಿಕೆಟ್ ಪಡೆದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

6 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

7 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

13 hours ago

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

14 hours ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

16 hours ago

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…

16 hours ago