Advertisement
ಸುದ್ದಿಗಳು

ಟೆಸ್ಟ್ ಕ್ರಿಕೆಟ್ ಪಂದ್ಯಾಟ : ಕನ್ನಡಿಗ ಮಯಾಂಕ್​ ಅಗರ್​ವಾಲ್ ಭರ್ಜರಿ ದ್ವಿಶತಕ: ಬೃಹತ್ ಮೊತ್ತ ಪೇರಿಸಿದ ಭಾರತ

Share

ವಿಶಾಖಪಟ್ಟಣ: ಆರಂಭಿಕ ಆಟಗಾರರಾದ ಕನ್ನಡಿಗ ಮಾಯಾಂಕ್ ಅಗರ್​ವಾಲ್ ಭರ್ಜರಿ ದ್ವಿಶತಕ (215)ಮತ್ತು ರೋಹಿತ್ ಶರ್ಮ ಭರ್ಜರಿ ಶತಕದ(176) ನೆರವಿನಿಂದ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಮೊದಲ ಟೆಸ್ಟ್​ನಲ್ಲಿ ಭಾರತ ಬೃಹತ್ ಮೊತ್ತ ದಾಖಲಿಸಿದೆ.

ಏಳು ವಿಕೆಟ್ ಗೆ 502 ರನ್ ಗಳಿಸಿ ಭಾರತ ಪ್ರಥಮ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಎರಡನೇ ದಿನದ ಆಟದ ಮುಕ್ತಾಯಕ್ಕೆ ದಕ್ಷಿಣ ಆಫ್ರಿಕಾ ಮೂರು ವಿಕೆಟ್ ಕಳೆದುಕೊಂಡು 39 ರನ್ ಗಳಿಸಿದೆ. ವಿಶಾಖಪಟ್ಟಣದ ಎಸಿಎ-ವಿಡಿಸಿಎ ಮೈದಾನದಲ್ಲಿ ಬುಧವಾರ ಆರಂಭಗೊಂಡ ಪಂದ್ಯದಲ್ಲಿ ಟಾಸ್​ ಗೆದ್ದ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಯ್ಲಿ​ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು. ಹೊಸ ಆರಂಭಿಕ ಜೋಡಿಯಾಗಿ ಕಣಕ್ಕಿಳಿದ ರೋಹಿತ್​ ಶರ್ಮಾ ಮತ್ತು ಕನ್ನಡಿಗ ಮಯಾಂಕ್​ ಅಗರ್​ವಾಲ್​ ಪ್ರಥಮ ದಿನ ಪೂರ್ತಿ ಆಡಿ 59.1 ಓವರ್​ಗಳಲ್ಲಿ 202ರನ್​ ಗಳಿಸಿದ್ದರು. ರೋಹಿತ್ ಶರ್ಮ115 ರನ್​, ಮಯಾಂಕ್​ 84 ರನ್ ಗಳಿಸಿ ಅಜೇಯರಾಗಿ ಉಳಿದಿದ್ದರು.

ಗುರುವಾರ ಆಟ ಮುಂದುವರಿಸಿದ ಈ ಜೋಡಿ ಮೊದಲ ವಿಕೆಟ್ ಗೆ ಬರೋಬ್ಬರಿ 317 ರನ್​ ಗಳಿಸಿತು. ಈ ಮೂಲಕ 2004ರಲ್ಲಿ ಕಾನ್ಪುರದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ಆರಂಭಿಕ ಜೋಡಿಯಾಗಿದ್ದ ವಿರೇಂದ್ರ ಸೆಹ್ವಾಗ್ ಹಾಗೂ ಗೌತಮ್​ ಗಂಭೀರ್ ಗಳಿಸಿದ್ದ 218 ರನ್​ಗಳ ದಾಖಲೆಯನ್ನು ಮುರಿದರು. ಅದೇ ರೀತಿ 300ಕ್ಕೂ ಹೆಚ್ಚು ರನ್​ ಜೊತೆಯಾಟ ನೀಡಿದ ​ ಮೂರನೇ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಆರಂಭಿಕನಾಗಿ ಬ್ಯಾಟ್ ಮಾಡಲು ಕಣಕ್ಕೆ ಇಳಿದ ಕನ್ನಡಿಗ ಮಯಾಂಕ್ ಅಗರ್​ವಾಲ್​ ಅವರ ಮೊದಲ ದ್ವಿಶತಕ ಇದಾಗಿದ್ದು 371 ಬಾಲ್​ಗಳಲ್ಲಿ 22 ಬೌಂಡರಿ ಮತ್ತು 5 ಸಿಕ್ಸರ್ ಸಹಿತ 215 ರನ್​ ಗಳಿಸಿದರು. ರೋಹಿತ್ ಶರ್ಮಾ 244 ಬಾಲ್ ಗಳಲ್ಲಿ 23 ಬೌಂಡರಿ ಮತ್ತು 6 ಸಿಕ್ಸರ್ ನೆರವಿನಿಂದ 176 ರನ್​ ಗಳಿಸಿ ಔಟಾದರು‌. ಇನ್ನುಳಿದಂತೆ ಚೇತೇಶ್ವರ್​ ಪೂಜಾರಿ 6 ರನ್​, ವಿರಾಟ್​ ಕೊಹ್ಲಿ 20, ಅಜಿಂಕ್ಯ ರಹಾನೆ 15, ಹನುಮ ವಿಹಾರಿ 10, ವೃದ್ಧಿಮಾನ್​ ಸಾಹಾ 21 ರನ್​ ಗಳಿಸಿ ಔಟಾದರು. ರವೀಂದ್ರ ಜಡೇಜಾ (30), ರವಿಚಂದ್ರನ್​ ಅಶ್ವಿನ್​ (1) ಔಟಾಗದೆ ಉಳಿದರು.

ಮೊದಲ ಇನ್ನಿಂಗ್ಸ್​ ಆರಂಭಿಸಿದ ದ.ಆಫ್ರಿಕಾ ಎರಡನೇ ದಿನದ ಅಂತ್ಯಕ್ಕೆ 20 ಓವರ್​ಗಳಲ್ಲಿ 3 ವಿಕೆಟ್​ ನಷ್ಟಕ್ಕೆ 39 ರನ್​ ಗಳಿಸಿ ಸಂಕಷ್ಟಕ್ಕೆ ಸಿಲುಕಿದೆ. ಭಾರತದ ಪರ ರವಿಚಂದ್ರನ್ ಅಶ್ವಿನ್ ಎರಡು ಮತ್ತು ರವೀಂದ್ರ ಜಡೇಜ ಒಂದು ವಿಕೆಟ್ ಪಡೆದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

34 minutes ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

51 minutes ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

19 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago