ಸುಳ್ಯ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಅಡಿಯಲ್ಲಿ ಎಲ್ಲ ರೈತರಿಗೆ ವರ್ಷಕ್ಕೆ 6000 ರೂಪಾಯಿ ನೀಡಲಾಗುತ್ತದೆ. ಈಯೋಜನೆಯ ನೋಂದಾಣಿಗೆ 25 ಜೂನ್ 2019 ಕೊನೆಯ ದಿನವಾಗಿದ್ದು ಎಲ್ಲ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸಿ ಈ ಕೆಳಗಿನದಾಖಲೆಗಳನ್ನು ನೀಡಿ ನೋಂದಾವಣೆ ಮಾಡಿಕೊಳ್ಳಲು ಕೋರಲಾಗಿದೆ.
ನಗರ ಪ್ರದೇಶದ ಕೃಷಿಕರು ತೋಟಗಾರಿಕೆ ಇಲಾಖೆ ಸಂಪರ್ಕಿಸಬಹುದು.
ಆಧಾರ್ ಕಾರ್ಡ್, ಆಧಾರ್ ಅನುಮತಿ ಪತ್ರ(ಕಚೇರಿಯಲ್ಲಿ ಪಡೆದು ಅಲ್ಲೇ ಸಹಿ ಮಾಡಿ ನೀಡುವದು),ಸರ್ವೇ ನಂಬರ್ ವಿವರವನ್ನು ಆಧಾರ್ ಮೇಲೆ ಬರೆಯಬೇಕು.ಬ್ಯಾಂಕ್ ಖಾತೆಯ ಪಾಸ್ ಪುಸ್ತಕದ ಮೊದಲ ಪುಟದ ಪ್ರತಿಗಳನ್ನು ನೀಡಿ ನೋಂದಾವಣೆ ಮಾಡಬೇಕು.
ವಾರ್ಷಿಕ 6000 ಆರ್ಥಿಕ ನೆರವು ನೀಡುವ ಪ್ರಧಾನಮಂತ್ರಿ ಕಿಸಾನ್ ಯೋಜನೆಗೆ
ಎಲ್ಲಾ ರೈತರು ಅರ್ಹರಾಗಿರುತ್ತಾರೆ.
ಆದರೆ ಸರ್ಕಾರಿ ನೌಕರರು, ವಕಿಲರು, ಆದಾಯ ತೆರಿಗೆ ಪಾವತಿಸುವವರು,
ತಾಲೂಕು ಪಂಚಾಯತ್ ಸದಸ್ಯರುಗಳು ಮತ್ತು ಅಧ್ಯಕ್ಷರು , ಜಿಲ್ಲಾ ಪಂಚಾಯತ್ ಸದಸ್ಯರುಗಳು ಮತ್ತು ಅಧ್ಯಕ್ಷರು ಯೋಜನೆಯಡಿ ಬರುವುದಿಲ್ಲ ಎಂದು ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…