ಸುಳ್ಯ: ವ್ಯಾಪಕವಾಗಿ ಹರಡಿರುವ ಕೊರೊನಾ ವೈರಸ್ ಸೋಂಕು ತಡೆಯುವ ಉದ್ದೇಶ ಹಾಗೂ ಈ ಸಂಬಂಧ ನಿರಂತರವಾಗಿ ಸೇವೆಯಲ್ಲಿ ತೊಡಗಿರುವ ವೈದ್ಯರಿಂದ ತೊಡಗಿ ಎಲ್ಲಾ ವರ್ಗದ ಜನರಿಗೆ ಕೃತಜ್ಞತೆ ಸಲ್ಲಿಸಲು ಸಂಜೆ 5 ಗಂಟೆಗೆ ಚಪ್ಪಾಳೆ ತಟ್ಟುವ ಮೂಲಕ ಜನತೆ ಅಭಿನಂದನೆ ಸಲ್ಲಿಸಿದ್ದಾರೆ.
ಕೊರೊನಾ ವೈರಸ್ (ಕೋವಿಡ್ -19) ದೇಶ ಮುಕ್ತವಾಗಲು ಜನತಾ ಕರ್ಫೂನಲ್ಲಿ ಪಾಲ್ಗೊಂಡ ಜನತೆ ಸಂಜೆ 5 ಗಂಟೆಗೆ ಜನತೆ ಮನೆಯ ಬಾಲ್ಕನಿ ಹಾಗೂ ಕಿಟಕಿ ಬಳಿ ಬಂದು ಧನ್ಯವಾದ ಸಲ್ಲಿಸಿದರು. ಬೆಂಗಳೂರಿನ ಗಲ್ಲಿಗಲ್ಲಿಯಲ್ಲಿ ಗಂಟೆ, ಜಾಗಟೆ ಸದ್ದು ಮೊಳಗಿದ್ದು,ಜನತೆ ಚಪ್ಪಾಳೆ ತಟ್ಟಿ ಕೃತಜ್ಞತೆ ಸಲ್ಲಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಿಬಂದಿಗಳು ಸಂಜೆ ದೇವಸ್ಥಾನದ ಕಚೇರಿ ಮುಂಭಾಗದಲ್ಲಿ ಜಾಗಟೆ, ಚಪ್ಪಾಳೆ ಮೂಲಕ ಕೃತಜ್ಞತೆ ಸಲ್ಲಿಸಿದರು.
ಸುಳ್ಯದಲ್ಲಿ ಚಂದ್ರಶೇಖರ ದಾಮ್ಲೆ ಅವರು ಚಪ್ಪಾಳೆ ತಟ್ಟುವುದರ ಜೊತೆಗೆ ಕೊರೊನಾ ವೈರಸ್ ತೊಗಲಿಸಲು ದೇಶದ ನಾಯಕತ್ವದ ಜೊತೆ ಕೈಜೋಡಿಸೋಣ ಎಂದು ಕರೆ ನೀಡಿದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?