ಸುಳ್ಯ: ವ್ಯಾಪಕವಾಗಿ ಹರಡಿರುವ ಕೊರೊನಾ ವೈರಸ್ ಸೋಂಕು ತಡೆಯುವ ಉದ್ದೇಶ ಹಾಗೂ ಈ ಸಂಬಂಧ ನಿರಂತರವಾಗಿ ಸೇವೆಯಲ್ಲಿ ತೊಡಗಿರುವ ವೈದ್ಯರಿಂದ ತೊಡಗಿ ಎಲ್ಲಾ ವರ್ಗದ ಜನರಿಗೆ ಕೃತಜ್ಞತೆ ಸಲ್ಲಿಸಲು ಸಂಜೆ 5 ಗಂಟೆಗೆ ಚಪ್ಪಾಳೆ ತಟ್ಟುವ ಮೂಲಕ ಜನತೆ ಅಭಿನಂದನೆ ಸಲ್ಲಿಸಿದ್ದಾರೆ.
ಕೊರೊನಾ ವೈರಸ್ (ಕೋವಿಡ್ -19) ದೇಶ ಮುಕ್ತವಾಗಲು ಜನತಾ ಕರ್ಫೂನಲ್ಲಿ ಪಾಲ್ಗೊಂಡ ಜನತೆ ಸಂಜೆ 5 ಗಂಟೆಗೆ ಜನತೆ ಮನೆಯ ಬಾಲ್ಕನಿ ಹಾಗೂ ಕಿಟಕಿ ಬಳಿ ಬಂದು ಧನ್ಯವಾದ ಸಲ್ಲಿಸಿದರು. ಬೆಂಗಳೂರಿನ ಗಲ್ಲಿಗಲ್ಲಿಯಲ್ಲಿ ಗಂಟೆ, ಜಾಗಟೆ ಸದ್ದು ಮೊಳಗಿದ್ದು,ಜನತೆ ಚಪ್ಪಾಳೆ ತಟ್ಟಿ ಕೃತಜ್ಞತೆ ಸಲ್ಲಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಿಬಂದಿಗಳು ಸಂಜೆ ದೇವಸ್ಥಾನದ ಕಚೇರಿ ಮುಂಭಾಗದಲ್ಲಿ ಜಾಗಟೆ, ಚಪ್ಪಾಳೆ ಮೂಲಕ ಕೃತಜ್ಞತೆ ಸಲ್ಲಿಸಿದರು.
ಸುಳ್ಯದಲ್ಲಿ ಚಂದ್ರಶೇಖರ ದಾಮ್ಲೆ ಅವರು ಚಪ್ಪಾಳೆ ತಟ್ಟುವುದರ ಜೊತೆಗೆ ಕೊರೊನಾ ವೈರಸ್ ತೊಗಲಿಸಲು ದೇಶದ ನಾಯಕತ್ವದ ಜೊತೆ ಕೈಜೋಡಿಸೋಣ ಎಂದು ಕರೆ ನೀಡಿದರು.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…