ಸುಳ್ಯ: ವ್ಯಾಪಕವಾಗಿ ಹರಡಿರುವ ಕೊರೊನಾ ವೈರಸ್ ಸೋಂಕು ತಡೆಯುವ ಉದ್ದೇಶ ಹಾಗೂ ಈ ಸಂಬಂಧ ನಿರಂತರವಾಗಿ ಸೇವೆಯಲ್ಲಿ ತೊಡಗಿರುವ ವೈದ್ಯರಿಂದ ತೊಡಗಿ ಎಲ್ಲಾ ವರ್ಗದ ಜನರಿಗೆ ಕೃತಜ್ಞತೆ ಸಲ್ಲಿಸಲು ಸಂಜೆ 5 ಗಂಟೆಗೆ ಚಪ್ಪಾಳೆ ತಟ್ಟುವ ಮೂಲಕ ಜನತೆ ಅಭಿನಂದನೆ ಸಲ್ಲಿಸಿದ್ದಾರೆ.
ಕೊರೊನಾ ವೈರಸ್ (ಕೋವಿಡ್ -19) ದೇಶ ಮುಕ್ತವಾಗಲು ಜನತಾ ಕರ್ಫೂನಲ್ಲಿ ಪಾಲ್ಗೊಂಡ ಜನತೆ ಸಂಜೆ 5 ಗಂಟೆಗೆ ಜನತೆ ಮನೆಯ ಬಾಲ್ಕನಿ ಹಾಗೂ ಕಿಟಕಿ ಬಳಿ ಬಂದು ಧನ್ಯವಾದ ಸಲ್ಲಿಸಿದರು. ಬೆಂಗಳೂರಿನ ಗಲ್ಲಿಗಲ್ಲಿಯಲ್ಲಿ ಗಂಟೆ, ಜಾಗಟೆ ಸದ್ದು ಮೊಳಗಿದ್ದು,ಜನತೆ ಚಪ್ಪಾಳೆ ತಟ್ಟಿ ಕೃತಜ್ಞತೆ ಸಲ್ಲಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಿಬಂದಿಗಳು ಸಂಜೆ ದೇವಸ್ಥಾನದ ಕಚೇರಿ ಮುಂಭಾಗದಲ್ಲಿ ಜಾಗಟೆ, ಚಪ್ಪಾಳೆ ಮೂಲಕ ಕೃತಜ್ಞತೆ ಸಲ್ಲಿಸಿದರು.
ಸುಳ್ಯದಲ್ಲಿ ಚಂದ್ರಶೇಖರ ದಾಮ್ಲೆ ಅವರು ಚಪ್ಪಾಳೆ ತಟ್ಟುವುದರ ಜೊತೆಗೆ ಕೊರೊನಾ ವೈರಸ್ ತೊಗಲಿಸಲು ದೇಶದ ನಾಯಕತ್ವದ ಜೊತೆ ಕೈಜೋಡಿಸೋಣ ಎಂದು ಕರೆ ನೀಡಿದರು.
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…
ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…
ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…