ಸುಳ್ಯ: ವ್ಯಾಪಕವಾಗಿ ಹರಡಿರುವ ಕೊರೊನಾ ವೈರಸ್ ಸೋಂಕು ತಡೆಯುವ ಉದ್ದೇಶ ಹಾಗೂ ಈ ಸಂಬಂಧ ನಿರಂತರವಾಗಿ ಸೇವೆಯಲ್ಲಿ ತೊಡಗಿರುವ ವೈದ್ಯರಿಂದ ತೊಡಗಿ ಎಲ್ಲಾ ವರ್ಗದ ಜನರಿಗೆ ಕೃತಜ್ಞತೆ ಸಲ್ಲಿಸಲು ಸಂಜೆ 5 ಗಂಟೆಗೆ ಚಪ್ಪಾಳೆ ತಟ್ಟುವ ಮೂಲಕ ಜನತೆ ಅಭಿನಂದನೆ ಸಲ್ಲಿಸಿದ್ದಾರೆ.
ಕೊರೊನಾ ವೈರಸ್ (ಕೋವಿಡ್ -19) ದೇಶ ಮುಕ್ತವಾಗಲು ಜನತಾ ಕರ್ಫೂನಲ್ಲಿ ಪಾಲ್ಗೊಂಡ ಜನತೆ ಸಂಜೆ 5 ಗಂಟೆಗೆ ಜನತೆ ಮನೆಯ ಬಾಲ್ಕನಿ ಹಾಗೂ ಕಿಟಕಿ ಬಳಿ ಬಂದು ಧನ್ಯವಾದ ಸಲ್ಲಿಸಿದರು. ಬೆಂಗಳೂರಿನ ಗಲ್ಲಿಗಲ್ಲಿಯಲ್ಲಿ ಗಂಟೆ, ಜಾಗಟೆ ಸದ್ದು ಮೊಳಗಿದ್ದು,ಜನತೆ ಚಪ್ಪಾಳೆ ತಟ್ಟಿ ಕೃತಜ್ಞತೆ ಸಲ್ಲಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಿಬಂದಿಗಳು ಸಂಜೆ ದೇವಸ್ಥಾನದ ಕಚೇರಿ ಮುಂಭಾಗದಲ್ಲಿ ಜಾಗಟೆ, ಚಪ್ಪಾಳೆ ಮೂಲಕ ಕೃತಜ್ಞತೆ ಸಲ್ಲಿಸಿದರು.
ಸುಳ್ಯದಲ್ಲಿ ಚಂದ್ರಶೇಖರ ದಾಮ್ಲೆ ಅವರು ಚಪ್ಪಾಳೆ ತಟ್ಟುವುದರ ಜೊತೆಗೆ ಕೊರೊನಾ ವೈರಸ್ ತೊಗಲಿಸಲು ದೇಶದ ನಾಯಕತ್ವದ ಜೊತೆ ಕೈಜೋಡಿಸೋಣ ಎಂದು ಕರೆ ನೀಡಿದರು.
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…