Advertisement
ಮಾಹಿತಿ

ಪ್ರಧಾನ್ ಮಂತ್ರಿ ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

Share

ಬೆಳ್ಳಾರೆ: ಭಾರತ ಸರ್ಕಾರದ ರಾಷ್ಟ್ರೀಯ ಕೌಶಲ್ಯ ಪರಿಷತ್ತು ಮತ್ತು ಕಮ್ಯುನಿಟಿ ಪಾಲಿಟೆಕ್ನಿಕ್ ಸಂಸ್ಥೆ ಬೆಳ್ಳಾರೆ ಇದರ ಜಂಟಿ ಆಶ್ರಯದಲ್ಲಿ ಸಾರ್ವಜನಿಕರಿಗೆ ಹಾಗು ರಜೆಯ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಬಗೆಯ ಉಚಿತ ವೃತ್ತಿ ತರಬೇತಿಯನ್ನು ಆಯೋಜಿಸಲಾಗಿದೆ.

ಇದರೊಂದಿಗೆ ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆಯಡಿ ಅಧಿಕೃತ ಪಾಲುದಾರಿಕಾ ತರಬೇತಿ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿರುವ ಈ ಸಂಸ್ಥೆಯಲ್ಲಿ ಇನ್ನಿತರ ಉಚಿತ ಕೌಶಲ್ಯ ತರಬೇತಿಯನ್ನು ಆಯೋಜಿಸಲಾಗಿದೆ. ತರಬೇತಿಗಳು ಸಂಪೂರ್ಣ ಉಚಿತವಿದ್ದು, ಯಾವುದೇ ತರಬೇತಿ ಶುಲ್ಕವಿರುವುದಿಲ್ಲ. ತರಬೇತಿಯ ನಂತರ ಭಾರತ ಸರ್ಕಾರದ ಪ್ರಮಾಣ ಪತ್ರವನ್ನು ನೀಡಲಾಗುವುದು.

ತರಬೇತಿ ಅವಧಿಯಲ್ಲಿ ಬೇಸಿಕ್ ಕಂಪ್ಯೂಟರ್ ಅಪ್ಲಿಕೇಷನ್, ಡಿಟಿಪಿ, ಟ್ಯಾಲಿ ಬ್ಯಾಂಕಿಂಗ್ ಮತ್ತು ಅಕೌಂಟಿಂಗ್, ಟೈಲರಿಂಗ್ ಟೆಕ್ನಾಲಜಿ, ಫ್ಯಾಶನ್ ಡಿಸೈನಿಂಗ್, ಕಸೂತಿ ಬ್ಯೂಟೀಷಿಯನ್, ಸಾಫ್ಟ್ ಸ್ಕಿಲ್ಸ್, ಬ್ಯುಸಿನೆಸ್ ಹಾಗು ಕಾಮರ್ಸ್ ತರಬೇತಿಗಳನ್ನು ಆಯೋಜಿಸಲಾಗಿದೆ.

ಆಸಕ್ತರು ಕನಿಷ್ಠ 16ವರ್ಷದ ವಯೋಮಿತಿಯೊಳಗಿನವರಾಗಿದ್ದು, 8ನೇ ತರಗತಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿದವರು ಟೈಲರಿಂಗ್ ತರಬೇತಿಗೆ ಹಾಗು 10ನೇ ತರಗತಿ ಮೇಲ್ಪಟ್ಟವರು ಕಂಪ್ಯೂಟರ್ ಹಾಗು ಇತರ ತರಬೇತಿಗಳಿಗೆ ಅರ್ಹರಾಗಿರುತ್ತಾರೆ. ಅದರೊಂದಿಗೆ ಸಿದ್ಧ ಉಡುಪು ತಯಾರಿಕಾ ತರಬೇತಿಯಲ್ಲಿ ಆಯ್ದ ಅಭ್ಯರ್ಥಿಗಳಿಗೆ 3500 ರೂಪಾಯಿಗಳ ಶಿಷ್ಯ ವೇತನ ನೀಡಲಾಗುವುದು. ಭಾರತ ಸರ್ಕಾರದ ಈ ಮಹತ್ವಾಕಾಂಕ್ಷೆಯಾದ ಗ್ರಾಮೀಣ ಪ್ರದೇಶಗಳಿಗೆ ಕೊಡಮಾಡುವ ಈ ವಿಶೇಷ ಯೋಜನಾ ಸವಲತ್ತುಗಳನ್ನು ಸಾರ್ವಜನಿಕರು ಪಡೆದುಕೊಳ್ಳಬಹುದಾಗಿದೆ. ತರಬೇತಿಗೆ ಎಲ್ಲರಿಗೂ ಮುಕ್ತವಾದ ಅವಕಾಶವಿದೆ.

ಆಸಕ್ತ ಅಭ್ಯರ್ಥಿಗಳು ಮೇಲೆ ತಿಳಿಸಿದ ವಿಷಯಗಳಿಗೆ ಸಂಬಂಧಿಸಿದಂತೆ ಇತ್ತೀಚಿನ 7 ಭಾವಚಿತ್ರ, ವಿದ್ಯಾರ್ಹತೆಯ ಅಂಕಪಟ್ಟಿಯ ನಕಲು ಪ್ರತಿ, ಪರಿಶಿಷ್ಠ ಜಾತಿ ಹಾಗು ಪರಿಶಿಷ್ಠ ಪಂಗಡಕ್ಕೆ ಸೇರಿದವರಾಗಿದ್ದರೆ ಜಾತಿ ಪ್ರಮಾಣ ಪತ್ರ ಹಾಗು ಪಡಿತರ ಚೀಟಿಯ ನಕಲು ಪ್ರತಿಯೊಂದಿಗೆ ಬೆಳ್ಳಾರೆಯ ವಿಜಯ ಬ್ಯಾಂಕ್ ಕಟ್ಟಡದ ಕಮ್ಯುನಿಟಿ ಪಾಲಿಟೆಕ್ನಿಕ್ ಉಚಿತ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ಪ್ರಾಂಶುಪಾಲರನ್ನು ನೇರವಾಗಿ ಭೇಟಿಯಾಗಬಹುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

6 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

6 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago