ಮಂಗಳೂರು: ಕೇಂದ್ರ ಸರಕಾದಿಂದ ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ವೃದ್ಧಾಪ್ಯ ಪಿಂಚಣಿ ಯೋಜನೆಯನ್ನು 18 ರಿಂದ 40 ವರ್ಷದೊಳಗಿನ ಸಣ್ಣ ಮತ್ತು ಅತಿಸಣ್ಣ ರೈತರಿಗಾಗಿ ಜಾರಿಗೆ ತರಲಾಗಿದೆ.
ಈ ಯೋಜನೆಯಡಿ ಪ್ರವೇಶ ಪಡೆಯುವ ಸಣ್ಣ ಮತ್ತು ಅತಿಸಣ್ಣ ರೈತರು – ಪ್ರತಿ ತಿಂಗಳಿಗೆ ನಿಗದಿಪಡಿಸಿದ ವಿಮಾಕಂತು ರೂ.55 ರಿಂದ ರೂ.200 ರವರೆಗೆ ಪಾವತಿಸಬೇಕು. 60 ವರ್ಷ ದಾಟಿದ ನಂತರ ಪ್ರತಿ ತಿಂಗಳು ಕನಿಷ್ಠ ಪಿಂಚಣಿ ರೂ.3000 ದೊರೆಯುವುದು. ಪ್ರೀಮಿಯಂ ಮೊತ್ತದಲ್ಲಿ 50% ಪಾಲಿನ ಮೊತ್ತವನ್ನು ಕೇಂದ್ರ ಸರಕಾರ ಪಾವತಿಸುತ್ತದೆ. ಪಿಂಚಣಿಯನ್ನು ಪಾವತಿಸುವ ಜವಾಬ್ದಾರಿ ಎಲ್.ಐ.ಸಿ.ಯದ್ದಾಗಿರುತ್ತದೆ.
ಪ್ರಧಾನಮಂತ್ರಿ ಕಿಸಾನ್ ಮಾನ್ ಧನ್ ವೃದ್ಧಾಪ್ಯ ಪಿಂಚಣಿ ಯೋಜನೆಯು ರೈತ ಸಮುದಾಯಕ್ಕೆ ಉಪಯುಕ್ತವಾದ ಯೋಜನೆಯಾಗಿರುವುದರಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಂಡು ಸದರಿ ಯೋಜನೆಯ ಲಾಭವನ್ನು ಪಡೆಯಲು ಕೋರಿದೆ. ರೈತರು ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರದಲ್ಲಿ ಉಚಿತವಾಗಿ ದಾಖಲಾತಿ ಮಾಡುವ ಮೂಲಕ ಯೋಜನೆಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.
ಹೆಚ್ಚಿನ ವಿವರಗಳಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ , ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಜಂಟಿ ಕೃಷಿ ನಿರ್ದೇಶಕರು, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ಈಗಿನಂತೆ ಮಾರ್ಚ್ 4 ಅಥವಾ 5 ರಿಂದ ಮೋಡದ ವಾತಾವರಣ ಹೆಚ್ಚಿರುವ ಸಾಧ್ಯತೆಗಳಿದ್ದು,…
ಅಭಿವೃದ್ಧಿ ಸವಾಲುಗಳ ನಡುವೆಯೂ ದೇಶದ ಎಲ್ಲ ತೈಲ ಉತ್ಪಾದನಾ ಕಂಪನಿಗಳು 2045ರ ವೇಳೆಗೆ…
ಕಾಫಿ ಸಂಶೋಧನೆ ಮತ್ತು ಅಭಿವೃದ್ಧಿ, ತಂತ್ರಜ್ಞಾನ ವಿಸ್ತರಣೆ, ಮಾರುಕಟ್ಟೆ ಅಭಿವೃದ್ಧಿಯಲ್ಲಿ ಕಾಫಿ ಮಂಡಳಿ…
ರೈತ ಉತ್ಪಾದಕ ಸಂಸ್ಥೆಗಳು ರೈತರು ಮತ್ತು ಇಲಾಖೆಯ ನಡುವೆ ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ…
ದಕ್ಷಿಣ ಕನ್ನಡದ ಸುಳ್ಯದಲ್ಲಿ 40.4 ಡಿಗ್ರಿ ಸೆಲ್ಸಿಯಸ್, ಉಪ್ಪಿನಂಗಡಿಯಲ್ಲಿ 39.6, ಪಾಣೆ ಮಂಗಳೂರಿನಲ್ಲಿ …
ಕೃಷಿಯಲ್ಲಿ ತೊಡಗಿರುವವರಲ್ಲಿ ಶೇಕಡಾ 80ರಷ್ಟು ಮಂದಿ ಸಣ್ಣ ರೈತರು. ಈ ಸಮುದಾಯ ಮಾರುಕಟ್ಟೆ…