ಮಂಗಳೂರು: ಕೇಂದ್ರ ಸರಕಾದಿಂದ ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ವೃದ್ಧಾಪ್ಯ ಪಿಂಚಣಿ ಯೋಜನೆಯನ್ನು 18 ರಿಂದ 40 ವರ್ಷದೊಳಗಿನ ಸಣ್ಣ ಮತ್ತು ಅತಿಸಣ್ಣ ರೈತರಿಗಾಗಿ ಜಾರಿಗೆ ತರಲಾಗಿದೆ.
ಈ ಯೋಜನೆಯಡಿ ಪ್ರವೇಶ ಪಡೆಯುವ ಸಣ್ಣ ಮತ್ತು ಅತಿಸಣ್ಣ ರೈತರು – ಪ್ರತಿ ತಿಂಗಳಿಗೆ ನಿಗದಿಪಡಿಸಿದ ವಿಮಾಕಂತು ರೂ.55 ರಿಂದ ರೂ.200 ರವರೆಗೆ ಪಾವತಿಸಬೇಕು. 60 ವರ್ಷ ದಾಟಿದ ನಂತರ ಪ್ರತಿ ತಿಂಗಳು ಕನಿಷ್ಠ ಪಿಂಚಣಿ ರೂ.3000 ದೊರೆಯುವುದು. ಪ್ರೀಮಿಯಂ ಮೊತ್ತದಲ್ಲಿ 50% ಪಾಲಿನ ಮೊತ್ತವನ್ನು ಕೇಂದ್ರ ಸರಕಾರ ಪಾವತಿಸುತ್ತದೆ. ಪಿಂಚಣಿಯನ್ನು ಪಾವತಿಸುವ ಜವಾಬ್ದಾರಿ ಎಲ್.ಐ.ಸಿ.ಯದ್ದಾಗಿರುತ್ತದೆ.
ಪ್ರಧಾನಮಂತ್ರಿ ಕಿಸಾನ್ ಮಾನ್ ಧನ್ ವೃದ್ಧಾಪ್ಯ ಪಿಂಚಣಿ ಯೋಜನೆಯು ರೈತ ಸಮುದಾಯಕ್ಕೆ ಉಪಯುಕ್ತವಾದ ಯೋಜನೆಯಾಗಿರುವುದರಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಂಡು ಸದರಿ ಯೋಜನೆಯ ಲಾಭವನ್ನು ಪಡೆಯಲು ಕೋರಿದೆ. ರೈತರು ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರದಲ್ಲಿ ಉಚಿತವಾಗಿ ದಾಖಲಾತಿ ಮಾಡುವ ಮೂಲಕ ಯೋಜನೆಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.
ಹೆಚ್ಚಿನ ವಿವರಗಳಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ , ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಜಂಟಿ ಕೃಷಿ ನಿರ್ದೇಶಕರು, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…