MIRROR FOCUS

ಪ್ರಪಂಚದಲ್ಲೆಲ್ಲಾ ಚಂಡಮಾರುತದ ಭೀತಿ…! ವಾತಾವರಣದ ಉಷ್ಣತೆ ಏರಿಕೆ ಪ್ರಭಾವವೇ …? : ಭಾರತ ಈ ಬಾರಿ ಕಾಣುತ್ತಿದೆ 7 ನೇ ಚಂಡಮಾರುತ..!

Share

ಭಾರತ ಈಗ 7 ನೇ ಚಂಡಮಾರುತ ಬುಲ್ ಬುಲ್ ಈಗ ಕಾಣುತ್ತಿದೆ. ಇಡೀ ಪ್ರಪಂಚದಲ್ಲಿ  ಕೂಡಾ ಚಂಡಮಾರುತ ಕಾಣುತ್ತಲೇ ಇದೆ.  ಕೆನಡಾ ಕರಾವಳಿ ಭೀಕರ ಚಂಡಮಾರುತವನ್ನು ಈಗ ಕಾಣುತ್ತಿದೆ. ಈಚೆಗೆ 2 ವರ್ಷ ವರ್ಷಗಳಿಂದ ಹೀಗೇಕೆ ಎಂಬ ಪ್ರಶ್ನೆ ಕಾಡಲು ಆರಂಭಿಸಿದೆ. ವಾತಾವರಣದ ಉಷ್ಣತೆ ಏರಿಕೆಯೇ ಇದಕ್ಕೆ ಕಾರಣವೇ ಎಂಬ ಸಂದೇಹದಿಂದ ಈಗ ಹವಾಮಾನ ಅಧ್ಯಯನಕಾರರು ಪರಿಶೀಲನೆ ಮಾಡುತ್ತಿದ್ದಾರೆ.

ಸಾಧಾರಣ 3, 4 ದಿನಗಳ ಹಿಂದೆ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತ ಈಗ ಮಹಾ ಚಂಡಮಾರುತವಾಗಿ ಪರಿವರ್ತಿತವಾಗಿದೆ ಮುಂದೆ ಇನ್ನೆರಡು ಮೂರು ದಿನಗಳಲ್ಲಿ ಒಡಿಸ್ಸಾ ಕರಾವಳಿ ಭಾಗಗಳಿಗೆ ಮುನ್ನುಗ್ಗುವ ಮುನ್ಸೂಚೆನೆ ಇದೆ.

ಲೆಕ್ಕಾಚಾರದ ಪ್ರಕಾರ 2018 ರಲ್ಲಿ ಒಟ್ಟಾಗಿ 7 ಚಂಡಮಾರುತಗಳನ್ನು ಭಾರತ ಕಂಡಿದೆ. ಆಗಲೇ ವರದಿಯ ಪ್ರಕಾರ ಸುಮಾರು 35 ವರ್ಷದ ದಾಖಲೆಯನ್ನು ಹಿಂದಿಕ್ಕಿತ್ತು. ಆದರೆ ಈಗ 2019 ರಲ್ಲಿ ಭಾರತ 7 ನೇ ಚಂಡಮಾರುತವನ್ನು ಬುಲ್ ಬುಲ್ ಹೆಸರಿನಲ್ಲಿ ಕಾಣುತ್ತಿದೆ. ಈ ವರ್ಷ ಕೊನೆಗೊಳ್ಳಲು ಇನ್ನೂ ಸುಮಾರು ಒಂದುವರೆ ತಿಂಗಳ ಅವಧಿ ಇದೆ. ಹಾಗಾದರೆ 2019 ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿಯಬಹುದೇ ಎಂಬುದಕ್ಕೆ ಕಾಲವೇ ಉತ್ತರಿಸಬೇಕು.

ಇನ್ನು ಪ್ರಪಂಚದ ಉಳಿದ ಕರಾವಳಿ ಭಾಗಗಳಲ್ಲಿಯೂ ಪರಿಸ್ಥಿತಿ ಭಿನ್ನವಾಗಿಲ್ಲ. ಫಿಲಿಪ್ಪೀನ್ಸ್, ಜಪಾನ್, ರಷ್ಯಾ ಹಾಗೂ ಉತ್ತರ ಅಮೇರಿಕಾ ಮತ್ತು ಕೆನಡಾ ಕರಾವಳಿ ಭಾಗಗಳಲ್ಲೂ ಚಂಡಮಾರುತದ ಆತಂಕದಲ್ಲೇ ಇವೆ. ಸಮುದ್ರದ ವಾತಾವರಣ 29-30 ಡಿಗ್ರಿ ಸೆಲ್ಸಿಯಸ್ ಗಿಂತ ಜಾಸ್ತಿ ಆದರೆ ವಾಯುಭಾರ ಕುಸಿತ ಅಥವಾ ಚಂಡಮಾರುತ ಉಂಟಾಗುವ ಸಂಭವ ಅಧಿಕವಾಗಿರುತ್ತದೆ ಎಂದು ಅಧ್ಯಯನ ವರದಿಗಳು ಹೇಳುತ್ತಿವೆ. ಅಂದರೆ ಇದಕ್ಕೆಲ್ಲಾ ಜಾಗತಿಕ ತಾಪಮಾನ ಏರಿಕೆಯೇ ಕಾರಣವೇ ಎಂಬುದರ ಬಗ್ಗೆ ಈಗ ಅಧ್ಯಯನಗಳು ನಡೆಯುತ್ತಿವೆ. ಹೀಗಾಗಿ ತಾಪಮಾನ ಏರಿಕೆ ತಡೆಗೆ ಏನು ಕ್ರಮ ಎಂಬುದರ ಬಗ್ಗೆಯೂ ಅಧ್ಯಯನಗಳು ನಡೆಯುತ್ತಿದೆ.

ಬರಹ :

ಸಾಯಿಶೇಖರ್ , ಕರಿಕಳ
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ

ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…

20 minutes ago

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…

26 minutes ago

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

16 hours ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

16 hours ago

ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕರಣಗಳು | ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣ ದಾಖಲು |

ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…

17 hours ago

ಬೆಳ್ಳಿ ಧರಿಸುವುದು ಎಲ್ಲಾ ರಾಶಿಯವರಿಗೆ ಉತ್ತಮವೇ…? | ಯಾವೆಲ್ಲಾ ರಾಶಿಗಳಿಗಳಿಗೆ ಹಾನಿ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

17 hours ago