Advertisement
MIRROR FOCUS

ಪ್ರಪಂಚದಲ್ಲೆಲ್ಲಾ ಚಂಡಮಾರುತದ ಭೀತಿ…! ವಾತಾವರಣದ ಉಷ್ಣತೆ ಏರಿಕೆ ಪ್ರಭಾವವೇ …? : ಭಾರತ ಈ ಬಾರಿ ಕಾಣುತ್ತಿದೆ 7 ನೇ ಚಂಡಮಾರುತ..!

Share

ಭಾರತ ಈಗ 7 ನೇ ಚಂಡಮಾರುತ ಬುಲ್ ಬುಲ್ ಈಗ ಕಾಣುತ್ತಿದೆ. ಇಡೀ ಪ್ರಪಂಚದಲ್ಲಿ  ಕೂಡಾ ಚಂಡಮಾರುತ ಕಾಣುತ್ತಲೇ ಇದೆ.  ಕೆನಡಾ ಕರಾವಳಿ ಭೀಕರ ಚಂಡಮಾರುತವನ್ನು ಈಗ ಕಾಣುತ್ತಿದೆ. ಈಚೆಗೆ 2 ವರ್ಷ ವರ್ಷಗಳಿಂದ ಹೀಗೇಕೆ ಎಂಬ ಪ್ರಶ್ನೆ ಕಾಡಲು ಆರಂಭಿಸಿದೆ. ವಾತಾವರಣದ ಉಷ್ಣತೆ ಏರಿಕೆಯೇ ಇದಕ್ಕೆ ಕಾರಣವೇ ಎಂಬ ಸಂದೇಹದಿಂದ ಈಗ ಹವಾಮಾನ ಅಧ್ಯಯನಕಾರರು ಪರಿಶೀಲನೆ ಮಾಡುತ್ತಿದ್ದಾರೆ.

ಸಾಧಾರಣ 3, 4 ದಿನಗಳ ಹಿಂದೆ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತ ಈಗ ಮಹಾ ಚಂಡಮಾರುತವಾಗಿ ಪರಿವರ್ತಿತವಾಗಿದೆ ಮುಂದೆ ಇನ್ನೆರಡು ಮೂರು ದಿನಗಳಲ್ಲಿ ಒಡಿಸ್ಸಾ ಕರಾವಳಿ ಭಾಗಗಳಿಗೆ ಮುನ್ನುಗ್ಗುವ ಮುನ್ಸೂಚೆನೆ ಇದೆ.

ಲೆಕ್ಕಾಚಾರದ ಪ್ರಕಾರ 2018 ರಲ್ಲಿ ಒಟ್ಟಾಗಿ 7 ಚಂಡಮಾರುತಗಳನ್ನು ಭಾರತ ಕಂಡಿದೆ. ಆಗಲೇ ವರದಿಯ ಪ್ರಕಾರ ಸುಮಾರು 35 ವರ್ಷದ ದಾಖಲೆಯನ್ನು ಹಿಂದಿಕ್ಕಿತ್ತು. ಆದರೆ ಈಗ 2019 ರಲ್ಲಿ ಭಾರತ 7 ನೇ ಚಂಡಮಾರುತವನ್ನು ಬುಲ್ ಬುಲ್ ಹೆಸರಿನಲ್ಲಿ ಕಾಣುತ್ತಿದೆ. ಈ ವರ್ಷ ಕೊನೆಗೊಳ್ಳಲು ಇನ್ನೂ ಸುಮಾರು ಒಂದುವರೆ ತಿಂಗಳ ಅವಧಿ ಇದೆ. ಹಾಗಾದರೆ 2019 ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿಯಬಹುದೇ ಎಂಬುದಕ್ಕೆ ಕಾಲವೇ ಉತ್ತರಿಸಬೇಕು.

ಇನ್ನು ಪ್ರಪಂಚದ ಉಳಿದ ಕರಾವಳಿ ಭಾಗಗಳಲ್ಲಿಯೂ ಪರಿಸ್ಥಿತಿ ಭಿನ್ನವಾಗಿಲ್ಲ. ಫಿಲಿಪ್ಪೀನ್ಸ್, ಜಪಾನ್, ರಷ್ಯಾ ಹಾಗೂ ಉತ್ತರ ಅಮೇರಿಕಾ ಮತ್ತು ಕೆನಡಾ ಕರಾವಳಿ ಭಾಗಗಳಲ್ಲೂ ಚಂಡಮಾರುತದ ಆತಂಕದಲ್ಲೇ ಇವೆ. ಸಮುದ್ರದ ವಾತಾವರಣ 29-30 ಡಿಗ್ರಿ ಸೆಲ್ಸಿಯಸ್ ಗಿಂತ ಜಾಸ್ತಿ ಆದರೆ ವಾಯುಭಾರ ಕುಸಿತ ಅಥವಾ ಚಂಡಮಾರುತ ಉಂಟಾಗುವ ಸಂಭವ ಅಧಿಕವಾಗಿರುತ್ತದೆ ಎಂದು ಅಧ್ಯಯನ ವರದಿಗಳು ಹೇಳುತ್ತಿವೆ. ಅಂದರೆ ಇದಕ್ಕೆಲ್ಲಾ ಜಾಗತಿಕ ತಾಪಮಾನ ಏರಿಕೆಯೇ ಕಾರಣವೇ ಎಂಬುದರ ಬಗ್ಗೆ ಈಗ ಅಧ್ಯಯನಗಳು ನಡೆಯುತ್ತಿವೆ. ಹೀಗಾಗಿ ತಾಪಮಾನ ಏರಿಕೆ ತಡೆಗೆ ಏನು ಕ್ರಮ ಎಂಬುದರ ಬಗ್ಗೆಯೂ ಅಧ್ಯಯನಗಳು ನಡೆಯುತ್ತಿದೆ.

ಬರಹ :

ಸಾಯಿಶೇಖರ್ , ಕರಿಕಳ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

12 hours ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

12 hours ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

21 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

22 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

22 hours ago