MIRROR FOCUS

ಪ್ರಪಂಚದಲ್ಲೆಲ್ಲಾ ಚಂಡಮಾರುತದ ಭೀತಿ…! ವಾತಾವರಣದ ಉಷ್ಣತೆ ಏರಿಕೆ ಪ್ರಭಾವವೇ …? : ಭಾರತ ಈ ಬಾರಿ ಕಾಣುತ್ತಿದೆ 7 ನೇ ಚಂಡಮಾರುತ..!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತ ಈಗ 7 ನೇ ಚಂಡಮಾರುತ ಬುಲ್ ಬುಲ್ ಈಗ ಕಾಣುತ್ತಿದೆ. ಇಡೀ ಪ್ರಪಂಚದಲ್ಲಿ  ಕೂಡಾ ಚಂಡಮಾರುತ ಕಾಣುತ್ತಲೇ ಇದೆ.  ಕೆನಡಾ ಕರಾವಳಿ ಭೀಕರ ಚಂಡಮಾರುತವನ್ನು ಈಗ ಕಾಣುತ್ತಿದೆ. ಈಚೆಗೆ 2 ವರ್ಷ ವರ್ಷಗಳಿಂದ ಹೀಗೇಕೆ ಎಂಬ ಪ್ರಶ್ನೆ ಕಾಡಲು ಆರಂಭಿಸಿದೆ. ವಾತಾವರಣದ ಉಷ್ಣತೆ ಏರಿಕೆಯೇ ಇದಕ್ಕೆ ಕಾರಣವೇ ಎಂಬ ಸಂದೇಹದಿಂದ ಈಗ ಹವಾಮಾನ ಅಧ್ಯಯನಕಾರರು ಪರಿಶೀಲನೆ ಮಾಡುತ್ತಿದ್ದಾರೆ.

Advertisement
Advertisement

ಸಾಧಾರಣ 3, 4 ದಿನಗಳ ಹಿಂದೆ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತ ಈಗ ಮಹಾ ಚಂಡಮಾರುತವಾಗಿ ಪರಿವರ್ತಿತವಾಗಿದೆ ಮುಂದೆ ಇನ್ನೆರಡು ಮೂರು ದಿನಗಳಲ್ಲಿ ಒಡಿಸ್ಸಾ ಕರಾವಳಿ ಭಾಗಗಳಿಗೆ ಮುನ್ನುಗ್ಗುವ ಮುನ್ಸೂಚೆನೆ ಇದೆ.

ಲೆಕ್ಕಾಚಾರದ ಪ್ರಕಾರ 2018 ರಲ್ಲಿ ಒಟ್ಟಾಗಿ 7 ಚಂಡಮಾರುತಗಳನ್ನು ಭಾರತ ಕಂಡಿದೆ. ಆಗಲೇ ವರದಿಯ ಪ್ರಕಾರ ಸುಮಾರು 35 ವರ್ಷದ ದಾಖಲೆಯನ್ನು ಹಿಂದಿಕ್ಕಿತ್ತು. ಆದರೆ ಈಗ 2019 ರಲ್ಲಿ ಭಾರತ 7 ನೇ ಚಂಡಮಾರುತವನ್ನು ಬುಲ್ ಬುಲ್ ಹೆಸರಿನಲ್ಲಿ ಕಾಣುತ್ತಿದೆ. ಈ ವರ್ಷ ಕೊನೆಗೊಳ್ಳಲು ಇನ್ನೂ ಸುಮಾರು ಒಂದುವರೆ ತಿಂಗಳ ಅವಧಿ ಇದೆ. ಹಾಗಾದರೆ 2019 ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿಯಬಹುದೇ ಎಂಬುದಕ್ಕೆ ಕಾಲವೇ ಉತ್ತರಿಸಬೇಕು.

Advertisement

ಇನ್ನು ಪ್ರಪಂಚದ ಉಳಿದ ಕರಾವಳಿ ಭಾಗಗಳಲ್ಲಿಯೂ ಪರಿಸ್ಥಿತಿ ಭಿನ್ನವಾಗಿಲ್ಲ. ಫಿಲಿಪ್ಪೀನ್ಸ್, ಜಪಾನ್, ರಷ್ಯಾ ಹಾಗೂ ಉತ್ತರ ಅಮೇರಿಕಾ ಮತ್ತು ಕೆನಡಾ ಕರಾವಳಿ ಭಾಗಗಳಲ್ಲೂ ಚಂಡಮಾರುತದ ಆತಂಕದಲ್ಲೇ ಇವೆ. ಸಮುದ್ರದ ವಾತಾವರಣ 29-30 ಡಿಗ್ರಿ ಸೆಲ್ಸಿಯಸ್ ಗಿಂತ ಜಾಸ್ತಿ ಆದರೆ ವಾಯುಭಾರ ಕುಸಿತ ಅಥವಾ ಚಂಡಮಾರುತ ಉಂಟಾಗುವ ಸಂಭವ ಅಧಿಕವಾಗಿರುತ್ತದೆ ಎಂದು ಅಧ್ಯಯನ ವರದಿಗಳು ಹೇಳುತ್ತಿವೆ. ಅಂದರೆ ಇದಕ್ಕೆಲ್ಲಾ ಜಾಗತಿಕ ತಾಪಮಾನ ಏರಿಕೆಯೇ ಕಾರಣವೇ ಎಂಬುದರ ಬಗ್ಗೆ ಈಗ ಅಧ್ಯಯನಗಳು ನಡೆಯುತ್ತಿವೆ. ಹೀಗಾಗಿ ತಾಪಮಾನ ಏರಿಕೆ ತಡೆಗೆ ಏನು ಕ್ರಮ ಎಂಬುದರ ಬಗ್ಗೆಯೂ ಅಧ್ಯಯನಗಳು ನಡೆಯುತ್ತಿದೆ.

ಬರಹ :

ಸಾಯಿಶೇಖರ್ , ಕರಿಕಳ
Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಿಮ್ಮ ಚಿತ್ರ – ನಮ್ಮ ಬೆಳಕು | ಅನಿರುದ್ಧ ಪಿ |

ಮಕ್ಕಳ ಉತ್ಸಾಹಕ್ಕೆ ಒಂದು ವೇದಿಕೆ. ಕಲೆಯ ಮೂಲಕ ಮಕ್ಕಳ ಮನಸ್ಸನ್ನು ಅರಳಿಸಲು ,…

9 hours ago

ನಿಮ್ಮ ಚಿತ್ರ – ನಮ್ಮ ಬೆಳಕು | ಅನಿರುದ್ಧ ಪಿ |

ಅನಿರುದ್ಧ ಪಿ, 7 ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆ ಸುಬ್ರಹ್ಮಣ್ಯ |…

9 hours ago

ಗ್ರಾಮೀಣ ಭಾಗದ ದುರವಸ್ಥೆ ನೋಡಿ…! ನೀರಿನ ಪೈಪಿನ ಸಂಕಷ್ಟ ಜನತೆಗೆ..! ಇಲಾಖೆಗಳು ಎಲ್ಲಿದ್ದಾವೆ..?

ಇಲಾಖೆಗಳ ಬೇಜವಾಬ್ದಾರಿ ಕಾರಣದಿಂದ ಇಂದು ಗ್ರಾಮೀಣ ಭಾಗದ ಜನರು ಸಂಕಷ್ಟ ಪಡುವಂತಾಗಿದೆ. ಇಲಾಖೆಗಳು…

13 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆ | ಮತ್ಸ್ಯ ಸಂಪದ ಯೋಜನೆಗೆ ಅರ್ಜಿ ಆಹ್ವಾನ

ಮೀನುಗಾರಿಕೆ ಇಲಾಖೆ ವತಿಯಿಂದ ಮತ್ಸ್ಯ ಸಂಪದ ಯೋಜನೆಯಡಿ ಒಳನಾಡು ಮೀನುಗಾರಿಕೆಗೆ ಸಂಬಂಧಿಸಿದ ಯೋಜನೆಗಳಾದ…

15 hours ago

ಹಿಮಾಚಲ ಪ್ರದೇಶದಲ್ಲಿ12 ಗಂಟೆಗಳಿಂದ ಭಾರೀ ಮಳೆ | ರಾಜ್ಯದಲ್ಲಿ ರೆಡ್ ಅಲರ್ಟ್ |

ಹಿಮಾಚಲ ಪ್ರದೇಶದ ಹಲವಾರು ಭಾಗಗಳಲ್ಲಿ ಈಗಾಗಲೇ ಸುರಿದ ಮಳೆ ಹಾನಿಯನ್ನುಂಟು ಮಾಡಿದೆ. ಹೆಚ್ಚಿನ…

15 hours ago

ಬೈಂದೂರಿನಲ್ಲಿ ಗಮನಸೆಳೆದ ಹಲಸು ಹಾಗೂ ಕೃಷಿ ಮೇಳ | ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿವು

ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿಯಲು ಸಾಧ್ಯ,ರೈತರು ತಮ್ಮ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿಕೊಂಡು…

20 hours ago