Advertisement
MIRROR FOCUS

ಪ್ರಪಂಚದಲ್ಲೆಲ್ಲಾ ಚಂಡಮಾರುತದ ಭೀತಿ…! ವಾತಾವರಣದ ಉಷ್ಣತೆ ಏರಿಕೆ ಪ್ರಭಾವವೇ …? : ಭಾರತ ಈ ಬಾರಿ ಕಾಣುತ್ತಿದೆ 7 ನೇ ಚಂಡಮಾರುತ..!

Share

ಭಾರತ ಈಗ 7 ನೇ ಚಂಡಮಾರುತ ಬುಲ್ ಬುಲ್ ಈಗ ಕಾಣುತ್ತಿದೆ. ಇಡೀ ಪ್ರಪಂಚದಲ್ಲಿ  ಕೂಡಾ ಚಂಡಮಾರುತ ಕಾಣುತ್ತಲೇ ಇದೆ.  ಕೆನಡಾ ಕರಾವಳಿ ಭೀಕರ ಚಂಡಮಾರುತವನ್ನು ಈಗ ಕಾಣುತ್ತಿದೆ. ಈಚೆಗೆ 2 ವರ್ಷ ವರ್ಷಗಳಿಂದ ಹೀಗೇಕೆ ಎಂಬ ಪ್ರಶ್ನೆ ಕಾಡಲು ಆರಂಭಿಸಿದೆ. ವಾತಾವರಣದ ಉಷ್ಣತೆ ಏರಿಕೆಯೇ ಇದಕ್ಕೆ ಕಾರಣವೇ ಎಂಬ ಸಂದೇಹದಿಂದ ಈಗ ಹವಾಮಾನ ಅಧ್ಯಯನಕಾರರು ಪರಿಶೀಲನೆ ಮಾಡುತ್ತಿದ್ದಾರೆ.

ಸಾಧಾರಣ 3, 4 ದಿನಗಳ ಹಿಂದೆ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತ ಈಗ ಮಹಾ ಚಂಡಮಾರುತವಾಗಿ ಪರಿವರ್ತಿತವಾಗಿದೆ ಮುಂದೆ ಇನ್ನೆರಡು ಮೂರು ದಿನಗಳಲ್ಲಿ ಒಡಿಸ್ಸಾ ಕರಾವಳಿ ಭಾಗಗಳಿಗೆ ಮುನ್ನುಗ್ಗುವ ಮುನ್ಸೂಚೆನೆ ಇದೆ.

ಲೆಕ್ಕಾಚಾರದ ಪ್ರಕಾರ 2018 ರಲ್ಲಿ ಒಟ್ಟಾಗಿ 7 ಚಂಡಮಾರುತಗಳನ್ನು ಭಾರತ ಕಂಡಿದೆ. ಆಗಲೇ ವರದಿಯ ಪ್ರಕಾರ ಸುಮಾರು 35 ವರ್ಷದ ದಾಖಲೆಯನ್ನು ಹಿಂದಿಕ್ಕಿತ್ತು. ಆದರೆ ಈಗ 2019 ರಲ್ಲಿ ಭಾರತ 7 ನೇ ಚಂಡಮಾರುತವನ್ನು ಬುಲ್ ಬುಲ್ ಹೆಸರಿನಲ್ಲಿ ಕಾಣುತ್ತಿದೆ. ಈ ವರ್ಷ ಕೊನೆಗೊಳ್ಳಲು ಇನ್ನೂ ಸುಮಾರು ಒಂದುವರೆ ತಿಂಗಳ ಅವಧಿ ಇದೆ. ಹಾಗಾದರೆ 2019 ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿಯಬಹುದೇ ಎಂಬುದಕ್ಕೆ ಕಾಲವೇ ಉತ್ತರಿಸಬೇಕು.

ಇನ್ನು ಪ್ರಪಂಚದ ಉಳಿದ ಕರಾವಳಿ ಭಾಗಗಳಲ್ಲಿಯೂ ಪರಿಸ್ಥಿತಿ ಭಿನ್ನವಾಗಿಲ್ಲ. ಫಿಲಿಪ್ಪೀನ್ಸ್, ಜಪಾನ್, ರಷ್ಯಾ ಹಾಗೂ ಉತ್ತರ ಅಮೇರಿಕಾ ಮತ್ತು ಕೆನಡಾ ಕರಾವಳಿ ಭಾಗಗಳಲ್ಲೂ ಚಂಡಮಾರುತದ ಆತಂಕದಲ್ಲೇ ಇವೆ. ಸಮುದ್ರದ ವಾತಾವರಣ 29-30 ಡಿಗ್ರಿ ಸೆಲ್ಸಿಯಸ್ ಗಿಂತ ಜಾಸ್ತಿ ಆದರೆ ವಾಯುಭಾರ ಕುಸಿತ ಅಥವಾ ಚಂಡಮಾರುತ ಉಂಟಾಗುವ ಸಂಭವ ಅಧಿಕವಾಗಿರುತ್ತದೆ ಎಂದು ಅಧ್ಯಯನ ವರದಿಗಳು ಹೇಳುತ್ತಿವೆ. ಅಂದರೆ ಇದಕ್ಕೆಲ್ಲಾ ಜಾಗತಿಕ ತಾಪಮಾನ ಏರಿಕೆಯೇ ಕಾರಣವೇ ಎಂಬುದರ ಬಗ್ಗೆ ಈಗ ಅಧ್ಯಯನಗಳು ನಡೆಯುತ್ತಿವೆ. ಹೀಗಾಗಿ ತಾಪಮಾನ ಏರಿಕೆ ತಡೆಗೆ ಏನು ಕ್ರಮ ಎಂಬುದರ ಬಗ್ಗೆಯೂ ಅಧ್ಯಯನಗಳು ನಡೆಯುತ್ತಿದೆ.

ಬರಹ :

ಸಾಯಿಶೇಖರ್ , ಕರಿಕಳ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

6 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

12 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

22 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

1 day ago