Advertisement
MIRROR FOCUS

ಪ್ರಪಂಚದಲ್ಲೆಲ್ಲಾ ಚಂಡಮಾರುತದ ಭೀತಿ…! ವಾತಾವರಣದ ಉಷ್ಣತೆ ಏರಿಕೆ ಪ್ರಭಾವವೇ …? : ಭಾರತ ಈ ಬಾರಿ ಕಾಣುತ್ತಿದೆ 7 ನೇ ಚಂಡಮಾರುತ..!

Share

ಭಾರತ ಈಗ 7 ನೇ ಚಂಡಮಾರುತ ಬುಲ್ ಬುಲ್ ಈಗ ಕಾಣುತ್ತಿದೆ. ಇಡೀ ಪ್ರಪಂಚದಲ್ಲಿ  ಕೂಡಾ ಚಂಡಮಾರುತ ಕಾಣುತ್ತಲೇ ಇದೆ.  ಕೆನಡಾ ಕರಾವಳಿ ಭೀಕರ ಚಂಡಮಾರುತವನ್ನು ಈಗ ಕಾಣುತ್ತಿದೆ. ಈಚೆಗೆ 2 ವರ್ಷ ವರ್ಷಗಳಿಂದ ಹೀಗೇಕೆ ಎಂಬ ಪ್ರಶ್ನೆ ಕಾಡಲು ಆರಂಭಿಸಿದೆ. ವಾತಾವರಣದ ಉಷ್ಣತೆ ಏರಿಕೆಯೇ ಇದಕ್ಕೆ ಕಾರಣವೇ ಎಂಬ ಸಂದೇಹದಿಂದ ಈಗ ಹವಾಮಾನ ಅಧ್ಯಯನಕಾರರು ಪರಿಶೀಲನೆ ಮಾಡುತ್ತಿದ್ದಾರೆ.

ಸಾಧಾರಣ 3, 4 ದಿನಗಳ ಹಿಂದೆ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತ ಈಗ ಮಹಾ ಚಂಡಮಾರುತವಾಗಿ ಪರಿವರ್ತಿತವಾಗಿದೆ ಮುಂದೆ ಇನ್ನೆರಡು ಮೂರು ದಿನಗಳಲ್ಲಿ ಒಡಿಸ್ಸಾ ಕರಾವಳಿ ಭಾಗಗಳಿಗೆ ಮುನ್ನುಗ್ಗುವ ಮುನ್ಸೂಚೆನೆ ಇದೆ.

ಲೆಕ್ಕಾಚಾರದ ಪ್ರಕಾರ 2018 ರಲ್ಲಿ ಒಟ್ಟಾಗಿ 7 ಚಂಡಮಾರುತಗಳನ್ನು ಭಾರತ ಕಂಡಿದೆ. ಆಗಲೇ ವರದಿಯ ಪ್ರಕಾರ ಸುಮಾರು 35 ವರ್ಷದ ದಾಖಲೆಯನ್ನು ಹಿಂದಿಕ್ಕಿತ್ತು. ಆದರೆ ಈಗ 2019 ರಲ್ಲಿ ಭಾರತ 7 ನೇ ಚಂಡಮಾರುತವನ್ನು ಬುಲ್ ಬುಲ್ ಹೆಸರಿನಲ್ಲಿ ಕಾಣುತ್ತಿದೆ. ಈ ವರ್ಷ ಕೊನೆಗೊಳ್ಳಲು ಇನ್ನೂ ಸುಮಾರು ಒಂದುವರೆ ತಿಂಗಳ ಅವಧಿ ಇದೆ. ಹಾಗಾದರೆ 2019 ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿಯಬಹುದೇ ಎಂಬುದಕ್ಕೆ ಕಾಲವೇ ಉತ್ತರಿಸಬೇಕು.

ಇನ್ನು ಪ್ರಪಂಚದ ಉಳಿದ ಕರಾವಳಿ ಭಾಗಗಳಲ್ಲಿಯೂ ಪರಿಸ್ಥಿತಿ ಭಿನ್ನವಾಗಿಲ್ಲ. ಫಿಲಿಪ್ಪೀನ್ಸ್, ಜಪಾನ್, ರಷ್ಯಾ ಹಾಗೂ ಉತ್ತರ ಅಮೇರಿಕಾ ಮತ್ತು ಕೆನಡಾ ಕರಾವಳಿ ಭಾಗಗಳಲ್ಲೂ ಚಂಡಮಾರುತದ ಆತಂಕದಲ್ಲೇ ಇವೆ. ಸಮುದ್ರದ ವಾತಾವರಣ 29-30 ಡಿಗ್ರಿ ಸೆಲ್ಸಿಯಸ್ ಗಿಂತ ಜಾಸ್ತಿ ಆದರೆ ವಾಯುಭಾರ ಕುಸಿತ ಅಥವಾ ಚಂಡಮಾರುತ ಉಂಟಾಗುವ ಸಂಭವ ಅಧಿಕವಾಗಿರುತ್ತದೆ ಎಂದು ಅಧ್ಯಯನ ವರದಿಗಳು ಹೇಳುತ್ತಿವೆ. ಅಂದರೆ ಇದಕ್ಕೆಲ್ಲಾ ಜಾಗತಿಕ ತಾಪಮಾನ ಏರಿಕೆಯೇ ಕಾರಣವೇ ಎಂಬುದರ ಬಗ್ಗೆ ಈಗ ಅಧ್ಯಯನಗಳು ನಡೆಯುತ್ತಿವೆ. ಹೀಗಾಗಿ ತಾಪಮಾನ ಏರಿಕೆ ತಡೆಗೆ ಏನು ಕ್ರಮ ಎಂಬುದರ ಬಗ್ಗೆಯೂ ಅಧ್ಯಯನಗಳು ನಡೆಯುತ್ತಿದೆ.

ಬರಹ :

ಸಾಯಿಶೇಖರ್ , ಕರಿಕಳ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

20 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago