ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಸಚಿವ ಸ್ಥಾನ ಕೈತಪ್ಪಿದ ಆಕಾಂಕ್ಷಿಗಳ ಅಸಮಾಧಾನ ಭುಗಿಲೆದ್ದಿದೆ. ಪಕ್ಷ ನಿಷ್ಠರು, ಹಿರಿಯರನ್ನು ಕಡೆಗಣಿಸಲಾಗಿದೆ ಎಂಬ ಆಕ್ಷೇಪ ಕೇಳಿಬರುತ್ತಿದೆ.
ಈ ನಡುವೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸುಳ್ಯ ಶಾಸಕ ಎಸ್.ಅಂಗಾರ, ಬಸನಗೌಡ ಪಾಟೀಲ್ ಯತ್ನಾಳ್, ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ರೇಣುಕಾಚಾರ್ಯ, ಜಿ.ಎಚ್.ತಿಪ್ಪಾರೆಡ್ಡಿ ಸೇರಿದಂತೆ ಹಲವು ಹಿರಿಯ ಮತ್ತು ಪ್ರಮುಖ ಬಿಜೆಪಿ ನಾಯಕರು ಗೈರುಹಾಜರಾಗಿದ್ದರು.
ರಾಜುಗೌಡ, ಪ್ರಭು ಪಾಟೀಲ್ ಸೇರಿದಂತೆ ಹತ್ತು ಹೆಚ್ಚು ಮಂದಿ ಸಚಿವ ಆಕಾಂಕ್ಷಿ ಶಾಸಕರು ಹಾಗೂ ಮುಖಂಡರು ಬಿಜೆಪಿ ವರಿಷ್ಠರ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಇದು ತನ್ನ ಕ್ಷೇತ್ರದ ಜನತೆಗೆ ಮಾಡಿರುವ ಅನ್ಯಾಯ ಎಂದು ಶಾಸಕ ಅಂಗಾರ ಪ್ರತಿಕ್ರಿಯೆ ನೀಡಿದ್ದಾರೆ.
ಈ ಮಧ್ಯೆ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದ ಶಾಸಕ ಎಸ್.ಅಂಗಾರ, ಬಾಲಚಂದ್ರ ಜಾರಕಿಹೊಳಿ, ರಾಜುಗೌಡ, ಸಿ.ಪಿ.ಯೋಗೇಶ್ವರ್ ಸೇರಿದಂತೆ ಹಲವು ಸ್ಥಾನಕಾಂಕ್ಷಿ ಶಾಸಕರ ಗೈರುಹಾಜರಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಎದ್ದು ಕಾಣುತ್ತಿತ್ತು.
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…