ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಸಚಿವ ಸ್ಥಾನ ಕೈತಪ್ಪಿದ ಆಕಾಂಕ್ಷಿಗಳ ಅಸಮಾಧಾನ ಭುಗಿಲೆದ್ದಿದೆ. ಪಕ್ಷ ನಿಷ್ಠರು, ಹಿರಿಯರನ್ನು ಕಡೆಗಣಿಸಲಾಗಿದೆ ಎಂಬ ಆಕ್ಷೇಪ ಕೇಳಿಬರುತ್ತಿದೆ.
ಈ ನಡುವೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸುಳ್ಯ ಶಾಸಕ ಎಸ್.ಅಂಗಾರ, ಬಸನಗೌಡ ಪಾಟೀಲ್ ಯತ್ನಾಳ್, ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ರೇಣುಕಾಚಾರ್ಯ, ಜಿ.ಎಚ್.ತಿಪ್ಪಾರೆಡ್ಡಿ ಸೇರಿದಂತೆ ಹಲವು ಹಿರಿಯ ಮತ್ತು ಪ್ರಮುಖ ಬಿಜೆಪಿ ನಾಯಕರು ಗೈರುಹಾಜರಾಗಿದ್ದರು.
ರಾಜುಗೌಡ, ಪ್ರಭು ಪಾಟೀಲ್ ಸೇರಿದಂತೆ ಹತ್ತು ಹೆಚ್ಚು ಮಂದಿ ಸಚಿವ ಆಕಾಂಕ್ಷಿ ಶಾಸಕರು ಹಾಗೂ ಮುಖಂಡರು ಬಿಜೆಪಿ ವರಿಷ್ಠರ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಇದು ತನ್ನ ಕ್ಷೇತ್ರದ ಜನತೆಗೆ ಮಾಡಿರುವ ಅನ್ಯಾಯ ಎಂದು ಶಾಸಕ ಅಂಗಾರ ಪ್ರತಿಕ್ರಿಯೆ ನೀಡಿದ್ದಾರೆ.
ಈ ಮಧ್ಯೆ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದ ಶಾಸಕ ಎಸ್.ಅಂಗಾರ, ಬಾಲಚಂದ್ರ ಜಾರಕಿಹೊಳಿ, ರಾಜುಗೌಡ, ಸಿ.ಪಿ.ಯೋಗೇಶ್ವರ್ ಸೇರಿದಂತೆ ಹಲವು ಸ್ಥಾನಕಾಂಕ್ಷಿ ಶಾಸಕರ ಗೈರುಹಾಜರಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಎದ್ದು ಕಾಣುತ್ತಿತ್ತು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…