ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಸಚಿವ ಸ್ಥಾನ ಕೈತಪ್ಪಿದ ಆಕಾಂಕ್ಷಿಗಳ ಅಸಮಾಧಾನ ಭುಗಿಲೆದ್ದಿದೆ. ಪಕ್ಷ ನಿಷ್ಠರು, ಹಿರಿಯರನ್ನು ಕಡೆಗಣಿಸಲಾಗಿದೆ ಎಂಬ ಆಕ್ಷೇಪ ಕೇಳಿಬರುತ್ತಿದೆ.
ಈ ನಡುವೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸುಳ್ಯ ಶಾಸಕ ಎಸ್.ಅಂಗಾರ, ಬಸನಗೌಡ ಪಾಟೀಲ್ ಯತ್ನಾಳ್, ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ರೇಣುಕಾಚಾರ್ಯ, ಜಿ.ಎಚ್.ತಿಪ್ಪಾರೆಡ್ಡಿ ಸೇರಿದಂತೆ ಹಲವು ಹಿರಿಯ ಮತ್ತು ಪ್ರಮುಖ ಬಿಜೆಪಿ ನಾಯಕರು ಗೈರುಹಾಜರಾಗಿದ್ದರು.
ರಾಜುಗೌಡ, ಪ್ರಭು ಪಾಟೀಲ್ ಸೇರಿದಂತೆ ಹತ್ತು ಹೆಚ್ಚು ಮಂದಿ ಸಚಿವ ಆಕಾಂಕ್ಷಿ ಶಾಸಕರು ಹಾಗೂ ಮುಖಂಡರು ಬಿಜೆಪಿ ವರಿಷ್ಠರ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಇದು ತನ್ನ ಕ್ಷೇತ್ರದ ಜನತೆಗೆ ಮಾಡಿರುವ ಅನ್ಯಾಯ ಎಂದು ಶಾಸಕ ಅಂಗಾರ ಪ್ರತಿಕ್ರಿಯೆ ನೀಡಿದ್ದಾರೆ.
ಈ ಮಧ್ಯೆ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದ ಶಾಸಕ ಎಸ್.ಅಂಗಾರ, ಬಾಲಚಂದ್ರ ಜಾರಕಿಹೊಳಿ, ರಾಜುಗೌಡ, ಸಿ.ಪಿ.ಯೋಗೇಶ್ವರ್ ಸೇರಿದಂತೆ ಹಲವು ಸ್ಥಾನಕಾಂಕ್ಷಿ ಶಾಸಕರ ಗೈರುಹಾಜರಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಎದ್ದು ಕಾಣುತ್ತಿತ್ತು.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…