ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಸಚಿವ ಸ್ಥಾನ ಕೈತಪ್ಪಿದ ಆಕಾಂಕ್ಷಿಗಳ ಅಸಮಾಧಾನ ಭುಗಿಲೆದ್ದಿದೆ. ಪಕ್ಷ ನಿಷ್ಠರು, ಹಿರಿಯರನ್ನು ಕಡೆಗಣಿಸಲಾಗಿದೆ ಎಂಬ ಆಕ್ಷೇಪ ಕೇಳಿಬರುತ್ತಿದೆ.
ಈ ನಡುವೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸುಳ್ಯ ಶಾಸಕ ಎಸ್.ಅಂಗಾರ, ಬಸನಗೌಡ ಪಾಟೀಲ್ ಯತ್ನಾಳ್, ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ರೇಣುಕಾಚಾರ್ಯ, ಜಿ.ಎಚ್.ತಿಪ್ಪಾರೆಡ್ಡಿ ಸೇರಿದಂತೆ ಹಲವು ಹಿರಿಯ ಮತ್ತು ಪ್ರಮುಖ ಬಿಜೆಪಿ ನಾಯಕರು ಗೈರುಹಾಜರಾಗಿದ್ದರು.
ರಾಜುಗೌಡ, ಪ್ರಭು ಪಾಟೀಲ್ ಸೇರಿದಂತೆ ಹತ್ತು ಹೆಚ್ಚು ಮಂದಿ ಸಚಿವ ಆಕಾಂಕ್ಷಿ ಶಾಸಕರು ಹಾಗೂ ಮುಖಂಡರು ಬಿಜೆಪಿ ವರಿಷ್ಠರ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಇದು ತನ್ನ ಕ್ಷೇತ್ರದ ಜನತೆಗೆ ಮಾಡಿರುವ ಅನ್ಯಾಯ ಎಂದು ಶಾಸಕ ಅಂಗಾರ ಪ್ರತಿಕ್ರಿಯೆ ನೀಡಿದ್ದಾರೆ.
ಈ ಮಧ್ಯೆ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದ ಶಾಸಕ ಎಸ್.ಅಂಗಾರ, ಬಾಲಚಂದ್ರ ಜಾರಕಿಹೊಳಿ, ರಾಜುಗೌಡ, ಸಿ.ಪಿ.ಯೋಗೇಶ್ವರ್ ಸೇರಿದಂತೆ ಹಲವು ಸ್ಥಾನಕಾಂಕ್ಷಿ ಶಾಸಕರ ಗೈರುಹಾಜರಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಎದ್ದು ಕಾಣುತ್ತಿತ್ತು.
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…