Advertisement
ಜಿಲ್ಲೆ

ಪ್ರಯಾಣಿಕರ ಸ್ಪಂದನೆ ಇಲ್ಲದ ನರಿಮೊಗರು ರೈಲ್ವೇ ನಿಲ್ದಾಣ

Share

ಸವಣೂರು: ಪುತ್ತೂರು ತಾಲೂಕು ಕೇಂದ್ರದಿಂದ 13ಕಿ.ಮೀ. ದೂರದಲ್ಲಿರುವ ನರಿಮೊಗರು ರೈಲ್ವೇ ನಿಲ್ದಾಣವು ಸಿಗ್ನಲ್ ವ್ಯವಸ್ಥೆ ಸಹಿತ ಪೂರ್ಣಕಾಲಿಕ ಸ್ಟೇಷನ್ ಮಾಸ್ಟರ್ ಇರುವ ರೈಲ್ವೇ ನಿಲ್ದಾಣವಾದರೂ ಈ ರೈಲ್ವೇ ನಿಲ್ದಾಣವು ಪ್ರಯಾಣಿಕರ ಸ್ಪಂದನೆ ಇಲ್ಲದ ರೈಲ್ವೇ ನಿಲ್ದಾಣವಾಗಿದೆ. ಈ ರೈಲು ನಿಲ್ದಾಣದಲ್ಲಿ ಮಂಗಳೂರು-ಸುಬ್ರಹ್ಮಣ್ಯ ರಸ್ತೆ ಲೋಕಲ್ ರೈಲ್‍ಗೆ ಮಾತ್ರ ನಿಲುಗಡೆ ಇದೆ. ದೂರ ಪ್ರಯಾಣದ ಪ್ರಯಾಣಿಕ ರೈಲು ಬಂಡಿಗಳು ಇಲ್ಲಿ ನಿಲುಗಡೆಗೊಳ್ಳುತ್ತಿಲ್ಲ.

ಮಂಗಳೂರು-ಹಾಸನ ರೈಲು ಮಾರ್ಗ ನಿರ್ಮಾಣ ಸಂದರ್ಭ ಮೀಟರ್‍ಗೇಜ್ ಹಳಿ ಇತ್ತು. 1974ರ ದಶಕದಲ್ಲಿ ಮಂಗಳೂರು-ಸುಬ್ರಹ್ಮಣ್ಯ ರಸ್ತೆ ಲೋಕಲ್ ರೈಲು ಬಂಡಿಯ ಓಡಾಟ ಆರಂಭವಾಯಿತು. ಆ ಕಾಲದಲ್ಲಿ ಕಲ್ಲಿದ್ದಲು ಬಳಸಿ ಚಾಲನೆ ಮಾಡುವ ರೈಲ್ವೇ ಇಂಜಿನ್ ಬಳಕೆಯಲ್ಲಿತ್ತು. ಈ ರೈಲ್ವೇ ಇಂಜಿನ್‍ಗಳಿಗೆ ಅಲ್ಲಲ್ಲಿ ನೀರು ತುಂಬಿಸುವ ವ್ಯವಸ್ಥೆ ಬೇಕಾಗಿತ್ತು. ಈ ಕಾರಣದಿಂದ ಪುತ್ತೂರು-ಸುಬ್ರಹ್ಮಣ್ಯ ರಸ್ತೆ ರೈಲ್ವೇ ನಿಲ್ದಾಣ ನಡುವಣ ಇಂಜಿನ್‍ಗಳಿಗೆ ನೀರು ತುಂಬಿಸುವ ಅಗತ್ಯಕ್ಕಾಗಿ ನರಿಮೊಗರಿನಲ್ಲಿ ರೈಲ್ವೇ ನಿಲ್ದಾಣ ಮತ್ತು ನೀರು ತುಂಬಿಸುವ ವ್ಯವಸ್ಥೆಯನ್ನು ಆರಂಭಿಸಲಾಗಿತ್ತು. ರೈಲು ಇಂಜಿನ್‍ಗಳು ನೀರು ತುಂಬಿಸಿಕೊಳ್ಳಲು ಇಲ್ಲಿ ನಿಲುಗಡೆಯಾಗುವ ಕಾರಣ ನರಿಮೊಗರು ರೈಲು ನಿಲ್ದಾಣವನ್ನು ಪೂರ್ಣ ಪ್ರಮಾಣದ ರೈಲು ನಿಲ್ದಾಣವನ್ನಾಗಿ ನಿರ್ಮಾಣ ಮಾಡಲಾಗಿದೆ.

ಎಲ್ಲಾ ರೈಲುಗಳಿಗೆ ನಿಲುಗಡೆ:
ಮೀಟರ್‍ಗೇಜ್ ಹಳಿಗಳಲ್ಲಿ ರೈಲು ಬಂಡಿ ಓಡುತ್ತಿದ್ದ ಸಂದರ್ಭ ನರಿಮೊಗರು ರೈಲು ನಿಲ್ದಾಣದಲ್ಲಿ ಲೋಕಲ್ ರೈಲು ಬಂಡಿಗಳ ಸಹಿತ ಎಲ್ಲಾ ರೈಲು ಬಂಡಿಗಳಿಗೆ ನಿಲುಗಡೆ ನೀಡಲಾಗುತ್ತಿತ್ತು. ಮೀಟರ್‍ಗೇಜ್ ಹಳಿಗಳಲ್ಲಿ 1984ರ ಬಳಿಕ ಡೀಸೆಲ್ ಇಂಜಿನ್‍ಗಳ ಓಡಾಟ ಆರಂಭವಾದ ಬಳಿಕವೂ ನರಿಮೊಗರು ರೈಲ್ವೇ ನಿಲ್ದಾಣದಲ್ಲಿ ಎಲ್ಲಾ ರೈಲು ಬಂಡಿಗಳಿಗೆ ನಿಲುಗಡೆ ನೀಡಲಾಗುತ್ತಿತ್ತು. ಮೀಟರ್‍ಗೇಜ್ ಹಳಿಗಳನ್ನು ಬ್ರಾಡ್‍ಗೇಜ್ ಹಳಿಗಳಾಗಿ ಪರಿವರ್ತನೆ ಮಾಡುವ ಸಂದರ್ಭ ನರಿಮೊಗರು ರೈಲ್ವೇ ನಿಲ್ದಾಣವನ್ನು ಆಧುನೀಕರಣಗೊಳಿಸಲಾಗಿತ್ತು. ಬ್ರಾಡ್‍ಗೇಜ್ ಹಳಿಗಳ ಮೇಲೆ ರೈಲು ಬಂಡಿಗಳ ಓಡಾಟ ಆರಂಭವಾದ ಬಳಿಕ ದೂರ ಪ್ರಯಾಣದ ರೈಲು ಬಂಡಿಗಳಿಗೆ ನರಿಮೊಗರು ನಿಲ್ದಾಣದಲ್ಲಿ ನಿಲುಗಡೆ ರದ್ದುಪಡಿಸಲಾಯಿತು.

ಕಾರಣ ಏನು?
ನರಿಮೊಗರು ರೈಲ್ವೇ ನಿಲ್ದಾಣದಿಂದ ದೂರ ಪ್ರಯಾಣದ ರೈಲುಗಳಿಗೆ ಹತ್ತುವ ಮತ್ತು ಇಳಿಯುವ ಪ್ರಯಾಣಿಕರ ಸಂಖ್ಯೆಯ ಕೊರತೆ, ರೈಲ್ವೇ ನಿಲ್ದಾಣದ ಆದಾಯದ ಕೊರತೆಯ ಕಾರಣ ನೀಡಿ ದೂರ ಪ್ರಯಾಣದ ರೈಲು ಬಂಡಿಗಳ ನಿಲುಗಡೆ ಸ್ಥಗಿತವಾಯಿತು. ಈಗ ಮಂಗಳೂರು-ಸುಬ್ರಹ್ಮಣ್ಯ ರಸ್ತೆ ಲೋಕಲ್ ರೈಲು ಬಂಡಿಗೆ ನರಿಮೊಗರು ರೈಲ್ವೇ ನಿಲ್ದಾಣಬದಲ್ಲಿ ನಿಲುಗಡೆ ಇದ್ದರೂ ಪ್ರತಿನಿತ್ಯ ಇಲ್ಲಿಂದ ರೈಲು ಬಂಡಿಯನ್ನು ಏರುವ ಪ್ರಯಾಣಿಕರ ಸಂಖ್ಯೆ 10ನ್ನು ಮೀರುವುದಿಲ್ಲ. ಆದರೆ ಲೋಕಲ್ ರೈಲು ಬಂಡಿಯಾದ ಕಾರಣ ರೈಲ್ವೇ ಇಲಾಖೆ ರೈಲು ಬಂಡಿಯ ನಿಲುಗಡೆಯನ್ನು ಸ್ಥಗಿತಗೊಳಿಸಿಲ್ಲ. ಅಲ್ಲದೇ, ಇಲಾಖಾ ಸಮೀಕ್ಷೆಯಂತೆ ಈ ರೈಲು ನಿಲ್ದಾಣಕ್ಕೆ ಪ್ರಯಾಣಿಕರ ಸ್ಪಂದನೆ ಇಲ್ಲ ಎಂಬ ವರದಿ ಇಲಾಖೆಯ ಕೈ ಸೇರಿದೆ.

ಕ್ರಾಸಿಂಗ್ ನಿಲ್ದಾಣ
ಸ್ಟೇಷನ್ ಮಾಸ್ಟರ್ ಇರುವ ಪೂರ್ಣಪ್ರಮಾಣದ ರೈಲು ನಿಲ್ದಾಣವಾದ ಕಾರಣ ನರಿಮೊಗರು ರೈಲು ನಿಲ್ದಾಣವನ್ನು ಗೂಡ್ಸ್ ರೈಲುಗಳ ಕ್ರಾಸಿಂಗ್ ನಿಲ್ದಾಣವನ್ನಾಗಿ ಬಳಸಲಾಗುತ್ತಿದೆ. ಯಾವುದೇ ಕಾರಣಕ್ಕೂ ಈ ರೈಲು ನಿಲ್ದಾಣದಲ್ಲಿ ದೂರಪ್ರಯಾಣದ ರೈಲು ಬಂಡಿಗಳಿಗೆ ನಿಲುಗಡೆ ನೀಡಲು ಸಾಧ್ಯವಿಲ್ಲ ಎಂಬ ಅಭಿಪ್ರಾಯಕ್ಕೆ ರೈಲ್ವೇ ಇಲಾಖೆ ಬಂದಿದೆ. ಆಧುನೀಕರಣಗೊಂಡಿರುವ ಈ ರೈಲ್ವೇ ನಿಲ್ದಾಣವನ್ನು ಮುಚ್ಚುವ ಬದಲು ಕ್ರಾಸಿಂಗ್ ರೈಲ್ವೇ ನಿಲ್ದಾನವನ್ನಾಗಿ ಇಲಾಖೆ ಬಳಸುತ್ತಿದೆ. ಮಂಗಳೂರು-ಹಾಸನ ರೈಲು ಮಾರ್ಗದಲ್ಲಿ ಗೂಡ್ಸ್ ಬಂಡಿಗಳ ಓಡಾಟ ಹೆಚ್ಚಾಗಿರುವುದರಿಂದ ಇಲಾಖೆಗೆ ಕ್ರಾಸಿಂಗ್ ನಿಲ್ದಾಣಗಳ ಅಗತ್ಯವು ಹೆಚ್ಚಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

View Comments

  • ನರಿಮೊಗರು ರೈಲ್ವೆ ಸ್ಟೇಷನ್ ಹೋಗುವ ರೋಡ್ ಸರಿ ಇಲ್ಲ... ಸ್ಟೇಷನ್ ಇದೆ ಎಂಧು ಬೋರ್ಡ್ ಇಲ್ಲ....

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

10 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

16 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

16 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

16 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

16 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

16 hours ago