Advertisement
ಸುದ್ದಿಗಳು

ಪ್ರವಾಹದಲ್ಲಿ ಪತ್ರಕರ್ತನ ಮನೆಗೆ ಹಾನಿ :ಪರಿಹಾರಕ್ಕೆ ಕಾರ್ಯನಿರತ ಪತ್ರಕರ್ತರದಿಂದ ಡಿಸಿ ಗೆ ಮನವಿ

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಟಿವಿ 9 ವಾಹಿನಿಯ ವೀಡಿಯೊ ಜರ್ನಲಿಸ್ಟ್ ರಾಜೇಶ್ ಅವರ ಮನೆಗೆ ಪ್ರವಾಹದಲ್ಲಿ ತೀವ್ರ ಹಾನಿ ಉಂಟಾಗಿದ್ದು  ಪರಿಹಾರ ನೀಡುವಂತೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಅವರಿಗೆ ಮನವಿ ಸಲ್ಲಿಸಲಾಯಿತು.

Advertisement

ಬೆಳ್ತಂಗಡಿಯಲ್ಲಿ ಉಂಟಾದ ಪ್ರವಾಹದಲ್ಲಿ ಸಿಲುಕಿ ರಾಜೇಶ್ ಅವರ ಕಿಲ್ಲೂರಿನ ಮನೆಗೆ ತೀವ್ರ ಹಾನಿ ಉಂಟಾಗಿತ್ತು. ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು 5 ಲಕ್ಷ ರೂಪಾಯಿ ಪರಿಹಾರದ ಭರವಸೆ ನೀಡಿದರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಆರ್.ಸಿ.ಭಟ್, ಭಾಸ್ಕರ್ ರೈ ಕಟ್ಟ ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿಗಳಿಗೆ ಅಭಿನಂದನೆ:

ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 10 ದಿನಗಳಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿಯನ್ನು ಎದುರಿಸಿ ಹಗಲು ರಾತ್ರಿ ಎನ್ನದೆ ನೆರೆ ಸಂತ್ರಸ್ತರ ಸಂಕಷ್ಟಗಳಿಗೆ ಸ್ಪಂದಿಸಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಅಭಿನಂದಿಸಲಾಯಿತು .

ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಈ ಬಾರಿ ಮಳೆಗಾಲಕ್ಕೆ ಮುನ್ನವೇ ಪ್ರಾಕೃತಿಕ ವಿಕೋಪದಿಂದ ಎದುರಾಗಬಹುದಾದ ಸಮಸ್ಯೆಗಳ ಅಪಾಯದ ಕುರಿತು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿತ್ತು . ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಜೂನ್ ತಿಂಗಳಿನಲ್ಲಿ ಮಂಗಳೂರಿಗೆ ಆಗಮಿಸಿತ್ತು . 10 ಬೋಟ್ ಗಳನ್ನೂ ಕೂಡಾ ಸಿದ್ಧಪಡಿಸಲಾಗಿತ್ತು . ಹೀಗಾಗಿ ಭಾರಿ ಪ್ರಮಾಣದ ನೆರೆ ಬಂದರೂ ಹೆಚ್ಚಿನ ಸಾವು ನೋವುಗಳು ಆಗದಂತೆ ಕ್ರಮ ಕೈಗೊಳ್ಳಲು ಸಹಾಯಕವಾಯಿತು ಎಂದು ಹೇಳಿದರು.ಡೆಂಘೆ ಜ್ವರ ಸೇರಿದಂತೆ ಇನ್ನಿತರ ಸಾಂಕ್ರಾಮಿಕ ರೋಗಗಳು ಹರಡದಂತೆ ಸಾರ್ವಜನಿಕರಲ್ಲಿ ಜಾಗ್ರತಿ ಮೂಡಿಸುವ ಕೆಲಸ ಇನ್ನೂ ಆಗಬೇಕಾಗಿದೆ .ತಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆಯೂ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

3 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

7 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

8 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

8 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

19 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago