ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಟಿವಿ 9 ವಾಹಿನಿಯ ವೀಡಿಯೊ ಜರ್ನಲಿಸ್ಟ್ ರಾಜೇಶ್ ಅವರ ಮನೆಗೆ ಪ್ರವಾಹದಲ್ಲಿ ತೀವ್ರ ಹಾನಿ ಉಂಟಾಗಿದ್ದು ಪರಿಹಾರ ನೀಡುವಂತೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಅವರಿಗೆ ಮನವಿ ಸಲ್ಲಿಸಲಾಯಿತು.
ಬೆಳ್ತಂಗಡಿಯಲ್ಲಿ ಉಂಟಾದ ಪ್ರವಾಹದಲ್ಲಿ ಸಿಲುಕಿ ರಾಜೇಶ್ ಅವರ ಕಿಲ್ಲೂರಿನ ಮನೆಗೆ ತೀವ್ರ ಹಾನಿ ಉಂಟಾಗಿತ್ತು. ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು 5 ಲಕ್ಷ ರೂಪಾಯಿ ಪರಿಹಾರದ ಭರವಸೆ ನೀಡಿದರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಆರ್.ಸಿ.ಭಟ್, ಭಾಸ್ಕರ್ ರೈ ಕಟ್ಟ ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿಗಳಿಗೆ ಅಭಿನಂದನೆ:
ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 10 ದಿನಗಳಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿಯನ್ನು ಎದುರಿಸಿ ಹಗಲು ರಾತ್ರಿ ಎನ್ನದೆ ನೆರೆ ಸಂತ್ರಸ್ತರ ಸಂಕಷ್ಟಗಳಿಗೆ ಸ್ಪಂದಿಸಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಅಭಿನಂದಿಸಲಾಯಿತು .
ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಈ ಬಾರಿ ಮಳೆಗಾಲಕ್ಕೆ ಮುನ್ನವೇ ಪ್ರಾಕೃತಿಕ ವಿಕೋಪದಿಂದ ಎದುರಾಗಬಹುದಾದ ಸಮಸ್ಯೆಗಳ ಅಪಾಯದ ಕುರಿತು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿತ್ತು . ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಜೂನ್ ತಿಂಗಳಿನಲ್ಲಿ ಮಂಗಳೂರಿಗೆ ಆಗಮಿಸಿತ್ತು . 10 ಬೋಟ್ ಗಳನ್ನೂ ಕೂಡಾ ಸಿದ್ಧಪಡಿಸಲಾಗಿತ್ತು . ಹೀಗಾಗಿ ಭಾರಿ ಪ್ರಮಾಣದ ನೆರೆ ಬಂದರೂ ಹೆಚ್ಚಿನ ಸಾವು ನೋವುಗಳು ಆಗದಂತೆ ಕ್ರಮ ಕೈಗೊಳ್ಳಲು ಸಹಾಯಕವಾಯಿತು ಎಂದು ಹೇಳಿದರು.ಡೆಂಘೆ ಜ್ವರ ಸೇರಿದಂತೆ ಇನ್ನಿತರ ಸಾಂಕ್ರಾಮಿಕ ರೋಗಗಳು ಹರಡದಂತೆ ಸಾರ್ವಜನಿಕರಲ್ಲಿ ಜಾಗ್ರತಿ ಮೂಡಿಸುವ ಕೆಲಸ ಇನ್ನೂ ಆಗಬೇಕಾಗಿದೆ .ತಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆಯೂ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…