ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಟಿವಿ 9 ವಾಹಿನಿಯ ವೀಡಿಯೊ ಜರ್ನಲಿಸ್ಟ್ ರಾಜೇಶ್ ಅವರ ಮನೆಗೆ ಪ್ರವಾಹದಲ್ಲಿ ತೀವ್ರ ಹಾನಿ ಉಂಟಾಗಿದ್ದು ಪರಿಹಾರ ನೀಡುವಂತೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಅವರಿಗೆ ಮನವಿ ಸಲ್ಲಿಸಲಾಯಿತು.
ಬೆಳ್ತಂಗಡಿಯಲ್ಲಿ ಉಂಟಾದ ಪ್ರವಾಹದಲ್ಲಿ ಸಿಲುಕಿ ರಾಜೇಶ್ ಅವರ ಕಿಲ್ಲೂರಿನ ಮನೆಗೆ ತೀವ್ರ ಹಾನಿ ಉಂಟಾಗಿತ್ತು. ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು 5 ಲಕ್ಷ ರೂಪಾಯಿ ಪರಿಹಾರದ ಭರವಸೆ ನೀಡಿದರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಆರ್.ಸಿ.ಭಟ್, ಭಾಸ್ಕರ್ ರೈ ಕಟ್ಟ ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿಗಳಿಗೆ ಅಭಿನಂದನೆ:
ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 10 ದಿನಗಳಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿಯನ್ನು ಎದುರಿಸಿ ಹಗಲು ರಾತ್ರಿ ಎನ್ನದೆ ನೆರೆ ಸಂತ್ರಸ್ತರ ಸಂಕಷ್ಟಗಳಿಗೆ ಸ್ಪಂದಿಸಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಅಭಿನಂದಿಸಲಾಯಿತು .
ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಈ ಬಾರಿ ಮಳೆಗಾಲಕ್ಕೆ ಮುನ್ನವೇ ಪ್ರಾಕೃತಿಕ ವಿಕೋಪದಿಂದ ಎದುರಾಗಬಹುದಾದ ಸಮಸ್ಯೆಗಳ ಅಪಾಯದ ಕುರಿತು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿತ್ತು . ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಜೂನ್ ತಿಂಗಳಿನಲ್ಲಿ ಮಂಗಳೂರಿಗೆ ಆಗಮಿಸಿತ್ತು . 10 ಬೋಟ್ ಗಳನ್ನೂ ಕೂಡಾ ಸಿದ್ಧಪಡಿಸಲಾಗಿತ್ತು . ಹೀಗಾಗಿ ಭಾರಿ ಪ್ರಮಾಣದ ನೆರೆ ಬಂದರೂ ಹೆಚ್ಚಿನ ಸಾವು ನೋವುಗಳು ಆಗದಂತೆ ಕ್ರಮ ಕೈಗೊಳ್ಳಲು ಸಹಾಯಕವಾಯಿತು ಎಂದು ಹೇಳಿದರು.ಡೆಂಘೆ ಜ್ವರ ಸೇರಿದಂತೆ ಇನ್ನಿತರ ಸಾಂಕ್ರಾಮಿಕ ರೋಗಗಳು ಹರಡದಂತೆ ಸಾರ್ವಜನಿಕರಲ್ಲಿ ಜಾಗ್ರತಿ ಮೂಡಿಸುವ ಕೆಲಸ ಇನ್ನೂ ಆಗಬೇಕಾಗಿದೆ .ತಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆಯೂ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…