Advertisement
ರಾಷ್ಟ್ರೀಯ

ಪ್ರವಾಹ ಪರಿಹಾರ- ರಾಜ್ಯಕ್ಕೆ 1869.85 ಕೋಟಿ ರೂ ಬಿಡುಗಡೆ ಮಾಡಿದ ಕೇಂದ್ರ ಸರಕಾರ

Share

ನವದೆಹಲಿ: ಪ್ರವಾಹದಿಂದ ಅಪಾರ ಪ್ರಮಾಣದ ನಷ್ಟ ಅನುಭವಿಸಿದ್ದ ರಾಜ್ಯಕ್ಕೆ ಕೇಂದ್ರ ಸರಕಾರ ಎರಡನೆಯ ಕಂತಿನ ಪರಿಹಾರ ಬಿಡುಗಡೆ ಘೋಷಣೆ ಮಾಡಿದೆ.

ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸೋಮವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ  ಏಳು ರಾಜ್ಯಗಳಿಗೆ 5,908 ಕೋಟಿ ರೂ ಅಧಿಕ ಅತಿವೃಷ್ಟಿ ಪರಿಹಾರ ನೀಡಲು ಅನುಮತಿ ನೀಡಲಾಗಿದೆ. ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ತುಮಕೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಅತಿವೃಷ್ಟಿಯಿಂದ ಉಂಟಾದ ನಷ್ಟಕ್ಕೆ ಕೇಂದ್ರ ಸರ್ಕಾರ ಸೂಕ್ತ ಪರಿಹಾರ ನೀಡಿಲ್ಲ ಎಂದು ತಿಳಿಸಿದ್ದರು.

Advertisement

ಅತಿವೃಷ್ಟಿಯಿಂದ ತೀವ್ರ ಹಾನಿ ಅನುಭವಿಸಿರುವ ಕರ್ನಾಟಕದ ಪ್ರವಾಹ ಪರಿಹಾರ ನಿಧಿಗೆ ಎರಡನೆಯ ಹಂತದಲ್ಲಿ 1869.85 ಕೋಟಿ ರೂ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಮೊದಲ ಹಂತದಲ್ಲಿ ರಾಜ್ಯ ಹೆಚ್ಚಿನ ಪರಿಹಾರ ಕೋರಿದ್ದರೂ ಕೇಂದ್ರ ಸರ್ಕಾರ ಕೇವಲ 1200 ಕೋಟಿ ರೂ ಬಿಡುಗಡೆ ಮಾಡಿತ್ತು.

ಮಧ್ಯಪ್ರದೇಶಕ್ಕೆ 1749.73 ಕೋಟಿ ರೂ., ಮಹಾರಾಷ್ಟ್ರಕ್ಕೆ 956.93 ಕೋಟಿ ರೂ., ಅಸ್ಸಾಂಗೆ 616.63 ಕೋಟಿ ರೂ, ಹಿಮಾಚಲ ಪ್ರದೇಶಕ್ಕೆ 284.93 ಕೋಟಿ ರೂ, ತ್ರಿಪುರಾಕ್ಕೆ 63.32 ಕೋಟಿ ರೂ ಮತ್ತು ಉತ್ತರ ಪ್ರದೇಶಕ್ಕೆ 367.17 ಕೋಟಿ ರೂ. ಪ್ರವಾಹ ಪರಿಹಾರ ನಿಧಿಗೆ ಬಿಡುಗಡೆ ಮಾಡಲು ಅನುಮೋದನೆ ನೀಡಲಾಗಿದೆ. 35 ಸಾವಿರ ಕೋಟಿಗೂ ಅಧಿಕ ನಷ್ಟ ರಾಜ್ಯದಲ್ಲಿ ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್‌ನಲ್ಲಿ ಮಳೆಯಿಂದ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು. ಆಸ್ತಿಪಾಸ್ತಿ ಕಳೆದುಕೊಂಡಿದ್ದರು. ಅತಿವೃಷ್ಟಿಯಿಂದಾಗಿ 35 ಸಾವಿರ ಕೋಟಿಗೂ ಅಧಿಕ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

1 day ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

1 day ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

2 days ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

2 days ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

3 days ago