ಸುಳ್ಯ: ದ.ಕ.ಜಿಲ್ಲಾ ಪಂಚಯತ್, ಕೃಷಿ ಇಲಾಖೆ ವತಿಯಿಂದ ನಡೆಯುವ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಎಂಬ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪ್ರಶಸ್ತಿ ವಿಜೇತ ಕೃಷಿಕರನ್ನು ಸನ್ಮಾನಿಸಲಾಯಿತು.
ಆತ್ಮಯೋಜನೆಯಡಿ 2017-18 ನೇ ಸಾಲಿನಲ್ಲಿ ರಾಜ್ಯ ಮಟ್ಟದಲ್ಲಿ ಶ್ರೇಷ್ಠ ಕೃಷಿಕ ಪ್ರಶಸ್ತಿ ಪಡೆದ ಗೋವಿಂದರಾಜ್ ಭಾರದ್ವಾಜ್, 2018-19ನೇ ಸಾಲಿನಲ್ಲಿ ಜಿಲ್ಲಾಮಟ್ಟದಲ್ಲಿ ಶ್ರೇಷ್ಠ ಪ್ರಶಸ್ತಿ ಪಡೆದ ಪುರುಷೋತ್ತಮ ಗೌಡ, ತಾಲೂಕು ಮಟ್ಟದಲ್ಲಿ ಶ್ರೇಷ್ಠ ಮಟ್ಟದ ಕೃಷಿಕರಾದ ಪ್ರಶಸ್ತಿ ಬೆಳ್ಯಪ್ಪ ಮುಡೂರು, ಈಶ್ವರಪ್ಪ ಗೌಡ, 2017-18ನೇ ಸಾಲಿನಲ್ಲಿ ಭತ್ತದ ಬೆಳೆಯಲ್ಲಿ ಪ್ರಥಮ ಸ್ಥಾನ ಪಡೆದ ರವಿಶಂಕರ್, ದ್ವಿತೀಯ ಸ್ಥಾನ ಪಡೆದ ರಾಜೇಶ್ ಪಡ್ಪು, ತೃತೀಯ ಸ್ಥಾನ ಪಡೆದ ಹೇಮಾವತಿ ಅವರನ್ನು ಸನ್ಮಾನಿಸಲಾಯಿತು. ಶಾಸಕ ಎಸ್.ಅಂಗಾರ ಸನ್ಮಾನ ನೆರವೇರಿಸಿದರು.
ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಸದಸ್ಯರಾದ ಹರೀಶ್ ಕಂಜಿಪಿಲಿ, ಎಸ್.ಎನ್.ಮನ್ಮಥ, ಪುಷ್ಪಾವತಿ ಬಾಳಿಲ, ಎ.ಪಿ.ಎಂ.ಸಿ. ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಉಪಾಧ್ಯಕ್ಷ ಸಂತೋಷ್ ಜಾಕೆ, ಕೃಷಿಕ ಸಮಾಜದ ಅಧ್ಯಕ್ಷ ಅಡ್ಡಂತ್ತಡ್ಕ ದೇರಣ್ಣ ಗೌಡ, ಕೃಷಿ ಸಹಾಯಕ ನಿರ್ದೇಶಕ ಕೆ.ಜಿ.ಪಾಲಿಚಂದ್ರ, ತಾಂತ್ರಿಕ ಕೃಷಿ ಅಧಿಕಾರಿ ಮೋಹನ್ ನಂಗಾರು ಉಪಸ್ಥಿತರಿದ್ದರು.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…