ಸುಳ್ಯ: ಪ್ರಾಕೃತಿಕ ವಿಕೋಪ ಉಂಟಾದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ವಿಧಾನ ಪರಿಷತ್ ಸದಸ್ಯ ಹಾಗು ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸುಳ್ಯ ತಾಲೂಕು ಕಚೇರಿಯಲ್ಲಿ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ತುರ್ತು ಅಗತ್ಯಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಆರು ಕೋಟಿ ರೂವನ್ನು ನೀಡಲಾಗಿದ್ದು ಪ್ರತಿ ತಾಲೂಕಿಗೆ 25 ಲಕ್ಷದಂತೆ ಹಣ ಬರಲಿದೆ. ಪ್ರಾಕೃತಿಕ ವಿಕೋಪ ಉಂಟಾದಲ್ಲಿ ಸಂತ್ರಸ್ತರಾದವರಿಗೆ ಎಲ್ಲಾ ನೆರವನ್ನೂ ಕೂಡಲೇ ಒದಗಿಸುವಂತೆ ಐವನ್ ಡಿಸೋಜ ಹೇಳಿದರು.
ಪ್ರಕೃತಿ ವಿಕೋಪದಿಂದ ಮನೆ ಮತ್ತಿತರ ಹಾನಿ ಉಂಟಾದರೆ ಭಾಗಶ: ಹಾನಿ ಎಂದು ವರದಿ ನೀಡಿದರೆ ಸಂತ್ರಸ್ತರಿಗೆ ಅನ್ಯಾಯ ಆಗುತ್ತದೆ ಎಂದು ಶಾಸಕ ಎಸ್.ಅಂಗಾರ ಹೇಳಿದರು. ಈ ಕುರಿತು ಚರ್ಚೆ ನಡೆದು ಮನೆ ಮತ್ತಿತರ ಹಾನಿ ಉಂಟಾದರೆ ಅವರಿಗೆ ಗರಿಷ್ಠ ಪರಿಹಾರ ಒದಗಿಸಬೇಕು ಮತ್ತು ಬೇರೆ ಯೋಜನೆಗಳಲ್ಲಿ ಸೇರಿಸಿ ಮನೆ ನಿರ್ಮಾಣ ಮಾಡಿ ಕೊಡಲು ಕ್ರಮ ಕೈಗೊಳ್ಳಬೇಕು ಎಂದು ಐವನ್ ಡಿಸೋಜ ಸೂಚಿಸಿದರು.
ವಿವಾಹದ ವಿಳಂಬ, ಸಂತಾನದ ಕೊರತೆ, ಮತ್ತು ಆರ್ಥಿಕ ಅಡೆತಡೆಗಳಿಗೆ ಕಾರಣವಾಗಬಹುದು. ಸರ್ಪಸಂಸ್ಕಾರವು ಈ…
ಆಗಸ್ಟ್ 2ನೇ ವಾರದಲ್ಲಿ ತಮಿಳುನಾಡು ಕರಾವಳಿಯ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ…
ಅಮಾಯಕ ನಾಗರಿಕರನ್ನು ಬಲಿಗೆ ಹಾಕುವ ಕಾನೂನು ಡಿಜಿಟಲ್ ಸಿಗ್ನೇಜರಿದ್ದು ಮಾತ್ರವಲ್ಲ, ಇನ್ನು ಅನೇಕ…
ಯೂರಿಯಾ ಗೊಬ್ಬರ ಅಭಾವದ ನಡುವೆಯೇ ರಾಜ್ಯದಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಕಾಡಾನೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ…
ಕೊಡಗು ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಸುಮಾರು…