ಸುಳ್ಯ: ಪ್ರಾಕೃತಿಕ ವಿಕೋಪ ಉಂಟಾದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ವಿಧಾನ ಪರಿಷತ್ ಸದಸ್ಯ ಹಾಗು ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸುಳ್ಯ ತಾಲೂಕು ಕಚೇರಿಯಲ್ಲಿ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ತುರ್ತು ಅಗತ್ಯಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಆರು ಕೋಟಿ ರೂವನ್ನು ನೀಡಲಾಗಿದ್ದು ಪ್ರತಿ ತಾಲೂಕಿಗೆ 25 ಲಕ್ಷದಂತೆ ಹಣ ಬರಲಿದೆ. ಪ್ರಾಕೃತಿಕ ವಿಕೋಪ ಉಂಟಾದಲ್ಲಿ ಸಂತ್ರಸ್ತರಾದವರಿಗೆ ಎಲ್ಲಾ ನೆರವನ್ನೂ ಕೂಡಲೇ ಒದಗಿಸುವಂತೆ ಐವನ್ ಡಿಸೋಜ ಹೇಳಿದರು.
ಪ್ರಕೃತಿ ವಿಕೋಪದಿಂದ ಮನೆ ಮತ್ತಿತರ ಹಾನಿ ಉಂಟಾದರೆ ಭಾಗಶ: ಹಾನಿ ಎಂದು ವರದಿ ನೀಡಿದರೆ ಸಂತ್ರಸ್ತರಿಗೆ ಅನ್ಯಾಯ ಆಗುತ್ತದೆ ಎಂದು ಶಾಸಕ ಎಸ್.ಅಂಗಾರ ಹೇಳಿದರು. ಈ ಕುರಿತು ಚರ್ಚೆ ನಡೆದು ಮನೆ ಮತ್ತಿತರ ಹಾನಿ ಉಂಟಾದರೆ ಅವರಿಗೆ ಗರಿಷ್ಠ ಪರಿಹಾರ ಒದಗಿಸಬೇಕು ಮತ್ತು ಬೇರೆ ಯೋಜನೆಗಳಲ್ಲಿ ಸೇರಿಸಿ ಮನೆ ನಿರ್ಮಾಣ ಮಾಡಿ ಕೊಡಲು ಕ್ರಮ ಕೈಗೊಳ್ಳಬೇಕು ಎಂದು ಐವನ್ ಡಿಸೋಜ ಸೂಚಿಸಿದರು.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…