ಸುಳ್ಯ: ಪ್ರಾಕೃತಿಕ ವಿಕೋಪ ಉಂಟಾದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ವಿಧಾನ ಪರಿಷತ್ ಸದಸ್ಯ ಹಾಗು ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸುಳ್ಯ ತಾಲೂಕು ಕಚೇರಿಯಲ್ಲಿ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ತುರ್ತು ಅಗತ್ಯಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಆರು ಕೋಟಿ ರೂವನ್ನು ನೀಡಲಾಗಿದ್ದು ಪ್ರತಿ ತಾಲೂಕಿಗೆ 25 ಲಕ್ಷದಂತೆ ಹಣ ಬರಲಿದೆ. ಪ್ರಾಕೃತಿಕ ವಿಕೋಪ ಉಂಟಾದಲ್ಲಿ ಸಂತ್ರಸ್ತರಾದವರಿಗೆ ಎಲ್ಲಾ ನೆರವನ್ನೂ ಕೂಡಲೇ ಒದಗಿಸುವಂತೆ ಐವನ್ ಡಿಸೋಜ ಹೇಳಿದರು.
ಪ್ರಕೃತಿ ವಿಕೋಪದಿಂದ ಮನೆ ಮತ್ತಿತರ ಹಾನಿ ಉಂಟಾದರೆ ಭಾಗಶ: ಹಾನಿ ಎಂದು ವರದಿ ನೀಡಿದರೆ ಸಂತ್ರಸ್ತರಿಗೆ ಅನ್ಯಾಯ ಆಗುತ್ತದೆ ಎಂದು ಶಾಸಕ ಎಸ್.ಅಂಗಾರ ಹೇಳಿದರು. ಈ ಕುರಿತು ಚರ್ಚೆ ನಡೆದು ಮನೆ ಮತ್ತಿತರ ಹಾನಿ ಉಂಟಾದರೆ ಅವರಿಗೆ ಗರಿಷ್ಠ ಪರಿಹಾರ ಒದಗಿಸಬೇಕು ಮತ್ತು ಬೇರೆ ಯೋಜನೆಗಳಲ್ಲಿ ಸೇರಿಸಿ ಮನೆ ನಿರ್ಮಾಣ ಮಾಡಿ ಕೊಡಲು ಕ್ರಮ ಕೈಗೊಳ್ಳಬೇಕು ಎಂದು ಐವನ್ ಡಿಸೋಜ ಸೂಚಿಸಿದರು.
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…