ಸುಳ್ಯ: ಪ್ರಾಕೃತಿಕ ವಿಕೋಪ ಉಂಟಾದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ವಿಧಾನ ಪರಿಷತ್ ಸದಸ್ಯ ಹಾಗು ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸುಳ್ಯ ತಾಲೂಕು ಕಚೇರಿಯಲ್ಲಿ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ತುರ್ತು ಅಗತ್ಯಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಆರು ಕೋಟಿ ರೂವನ್ನು ನೀಡಲಾಗಿದ್ದು ಪ್ರತಿ ತಾಲೂಕಿಗೆ 25 ಲಕ್ಷದಂತೆ ಹಣ ಬರಲಿದೆ. ಪ್ರಾಕೃತಿಕ ವಿಕೋಪ ಉಂಟಾದಲ್ಲಿ ಸಂತ್ರಸ್ತರಾದವರಿಗೆ ಎಲ್ಲಾ ನೆರವನ್ನೂ ಕೂಡಲೇ ಒದಗಿಸುವಂತೆ ಐವನ್ ಡಿಸೋಜ ಹೇಳಿದರು.
ಪ್ರಕೃತಿ ವಿಕೋಪದಿಂದ ಮನೆ ಮತ್ತಿತರ ಹಾನಿ ಉಂಟಾದರೆ ಭಾಗಶ: ಹಾನಿ ಎಂದು ವರದಿ ನೀಡಿದರೆ ಸಂತ್ರಸ್ತರಿಗೆ ಅನ್ಯಾಯ ಆಗುತ್ತದೆ ಎಂದು ಶಾಸಕ ಎಸ್.ಅಂಗಾರ ಹೇಳಿದರು. ಈ ಕುರಿತು ಚರ್ಚೆ ನಡೆದು ಮನೆ ಮತ್ತಿತರ ಹಾನಿ ಉಂಟಾದರೆ ಅವರಿಗೆ ಗರಿಷ್ಠ ಪರಿಹಾರ ಒದಗಿಸಬೇಕು ಮತ್ತು ಬೇರೆ ಯೋಜನೆಗಳಲ್ಲಿ ಸೇರಿಸಿ ಮನೆ ನಿರ್ಮಾಣ ಮಾಡಿ ಕೊಡಲು ಕ್ರಮ ಕೈಗೊಳ್ಳಬೇಕು ಎಂದು ಐವನ್ ಡಿಸೋಜ ಸೂಚಿಸಿದರು.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…