Advertisement
ಸುದ್ದಿಗಳು

ಪ್ರಾಚಾರ್ಯ ದಿ|ಎಂ.ಮಹಾಬಲ ಶೆಟ್ಟಿ ಅವರಿಗೆ ನುಡಿ ನಮನ

Share

ಸುಬ್ರಹ್ಮಣ್ಯ:ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಕ್ಕೊಳಪಟ್ಟ ಎಸ್‍ಎಸ್‍ಪಿಯು ಕಾಲೇಜಿನ ಸ್ಥಾಪಕ ಪ್ರಾಂಶುಪಾಲ ದಿ.ಎಂ.ಮಹಾಬಲ ಶೆಟ್ಟಿ ಅವರಿಗೆ ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ  ಶ್ರದ್ಧಾಂಜಲಿ ಮತ್ತು ನುಡಿನಮನ  ಕಾರ್ಯಕ್ರಮ ನಡೆಯಿತು.

Advertisement

ಕಾರ್ಯಕ್ರಮದಲ್ಲಿ ಮಾತನಾಡಿದ ಎಸ್‍ಎಸ್‍ಪಿಯು ಕಾಲೇಜಿನ ನಿವೃತ್ತ ಕನ್ನಡ ಉಪನ್ಯಾಸಕ ವಿದ್ವಾನ್ ಕೇಶವ ಭಟ್, ಬದುಕನ್ನು ಕಾಯಕವನ್ನಾಗಿಸಿದ ಕಾಯಕ ಯೋಗಿ ಸ್ಥಾಪಕ ಪ್ರಾಂಶುಪಾಲರು. ಮನಸ್ಸಿನಲ್ಲಿ ಯೋಚಿಸಿದನ್ನು ಮೈಗೂಡಿಸಿಕೊಂಡು ನಡೆದ ಶ್ರಮಜೀವಿ. ಅಂತೆಯೇ ಬದುಕಿನುದ್ದಕ್ಕೂ ಉತ್ತಮ ಗುಣಗಳನ್ನು ಮೈಗೂಡಿಸಿಕೊಂಡವರು. ಬದುಕಿನ ಶ್ರೇಷ್ಠ ರೀತಿಯಲ್ಲಿ ಬಾಳಿದ ಮಹಾಬಲ ಶೆಟ್ಟಿಯವರು ಓರ್ವ ತಪಸ್ವಿ.ವಿದ್ಯಾರ್ಥಿಗಳ ಬದುಕಿನ ಉಜ್ವಲತೆಗೆ ಅಮೋಘ ಕೊಡುಗೆ ನೀಡಿದ ಅವರು ಶಿಷ್ಯರ ಔನತ್ಯಕ್ಕೆ ದಾರಿದೀಪವಾಗಿದ್ದರು ಎಂದರು.

ಎಸ್‍ಎಸ್‍ಪಿಯು ಕಾಲೇಜಿನ ಪ್ರಾಂಶುಪಾಲೆ ಸಾವಿತ್ರಿ.ಕೆ, ಪ್ರೌಢಶಾಲಾ ವಿಭಾಗದ ಮುಖ್ಯಗುರು ಕೆ.ಯಶವಂತ ರೈ, ನಿವೃತ್ತ ಪ್ರಾಂಶುಪಾಲರಾದ ರಾಮಶರ್ಮ, ಎಸ್.ಎನ್.ಭಟ್, ವಸಂತ ಶೆಟ್ಟಿ, ನಿವೃತ್ತ ಉಪನ್ಯಾಸಕರಾದ ಮುತ್ತಯ್ಯ ಮಾಸ್ತರ್, ಕುಶಾಲಪ್ಪ ಮಾಸ್ತರ್, ಡಾ.ಕೆ.ಎಸ್.ಎನ್.ಉಡುಪ, ನಿವೃತ್ತ ಬೋಧಕೇತರ ಸಿಬ್ಬಂಧಿ ದುಗ್ಗಪ್ಪ ಅಗ್ರಹಾರ, ಉಪನ್ಯಾಸಕ ವಿಶ್ವನಾಥ ನಡುತೋಟ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಎನ್.ಎಸ್, ಪೂರ್ವಾಧ್ಯಕ್ಷ ಕಿಶೋರ್ ಕುಮಾರ್ ಕೂಜುಗೋಡು, ಮೊದಲಾದವರು ನುಡಿನಮನ ಸಲ್ಲಿಸಿದರು.

ಉಪಪ್ರಾಂಶುಪಾಲೆ ರೇಖಾರಾಣಿ ಸೋಮಶೇಖರ್, ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಸೋಮಶೇಖರ ನಾಯಕ್, ಹಿರಿಯ ಉಪನ್ಯಾಸಕ ಎ.ಆರ್.ಮುಲ್ಲಾ, ಹಿರಿಯ ಸಹಶಿಕ್ಷಕ ಎಂ.ಕೃಷ್ಣ ಭಟ್, ಕಛೇರಿ ಅಧೀಕ್ಷಕಿ ವಸಂತಿ.ಬಿ.ಶೆಟ್ಟಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಲೋಕೇಶ್ವರ ಡಿ.ಆರ್, ಪ್ರೌಢಶಾಲಾ ವಿಭಾಗದ ಶಿಕ್ಷಕ ರಕ್ಷಕ ಸಂಘದ ಸದಸ್ಯ ನಾಗಸುಬ್ರಹ್ಮಣ್ಯ ಭಟ್, ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಲೋಕೇಶ್ ಬಿ.ಎನ್, ಜೇಸಿಸ್‍ನ ನಿಕಟಪೂರ್ವ ರಾಷ್ಟ್ರೀಯ ನಿರ್ದೇಶಕ ಚಂದ್ರಶೇಖರ ನಾಯರ್, ಹಿರಿಯ ವಿದ್ಯಾರ್ಥಿಗಳಾದ ಪ್ರಕಾಶ್ ಸುಬ್ರಹ್ಮಣ್ಯ, ನಿತಿನ್ ಭಟ್, ದಿನೇಶ್ ಎಸ್.ಎನ್, ಸಿಬ್ಬಂಧಿ ಮಹೇಶ್ ಕೆ.ಎಚ್ ಸೇರಿದಂತೆ ಉಪನ್ಯಾಸಕರು, ಶಿಕ್ಷಕರು, ಬೋಧಕೇತರ ಸಿಬ್ಬಂಧಿಗಳು ಗುರುಗಳಾದ ದಿ| ಎಂ.ಮಹಾಬಲ ಶೆಟ್ಟಿ ಅವರ ಭಾವಚಿತ್ರಕ್ಕೆ ಪುಪ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು. ಬಳಿಕ ಮೌನ ಪ್ರಾರ್ಥನೆ ಸಮರ್ಪಿಸಲಾಯಿತು.

ಉಪನ್ಯಾಸಕ ರತ್ನಾಕರ ಎಸ್ ಕಾರ್ಯಕ್ರಮ ನಿರೂಪಿಸಿದರು.ಕನ್ನಡ ಉಪನ್ಯಾಸಕ ಕುಸುಮಾಧರ ಕಮಿಲ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

17 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago