Advertisement
ಸುದ್ದಿಗಳು

ಪ್ರಾಚಾರ್ಯ ದಿ|ಎಂ.ಮಹಾಬಲ ಶೆಟ್ಟಿ ಅವರಿಗೆ ನುಡಿ ನಮನ

Share

ಸುಬ್ರಹ್ಮಣ್ಯ:ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಕ್ಕೊಳಪಟ್ಟ ಎಸ್‍ಎಸ್‍ಪಿಯು ಕಾಲೇಜಿನ ಸ್ಥಾಪಕ ಪ್ರಾಂಶುಪಾಲ ದಿ.ಎಂ.ಮಹಾಬಲ ಶೆಟ್ಟಿ ಅವರಿಗೆ ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ  ಶ್ರದ್ಧಾಂಜಲಿ ಮತ್ತು ನುಡಿನಮನ  ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಎಸ್‍ಎಸ್‍ಪಿಯು ಕಾಲೇಜಿನ ನಿವೃತ್ತ ಕನ್ನಡ ಉಪನ್ಯಾಸಕ ವಿದ್ವಾನ್ ಕೇಶವ ಭಟ್, ಬದುಕನ್ನು ಕಾಯಕವನ್ನಾಗಿಸಿದ ಕಾಯಕ ಯೋಗಿ ಸ್ಥಾಪಕ ಪ್ರಾಂಶುಪಾಲರು. ಮನಸ್ಸಿನಲ್ಲಿ ಯೋಚಿಸಿದನ್ನು ಮೈಗೂಡಿಸಿಕೊಂಡು ನಡೆದ ಶ್ರಮಜೀವಿ. ಅಂತೆಯೇ ಬದುಕಿನುದ್ದಕ್ಕೂ ಉತ್ತಮ ಗುಣಗಳನ್ನು ಮೈಗೂಡಿಸಿಕೊಂಡವರು. ಬದುಕಿನ ಶ್ರೇಷ್ಠ ರೀತಿಯಲ್ಲಿ ಬಾಳಿದ ಮಹಾಬಲ ಶೆಟ್ಟಿಯವರು ಓರ್ವ ತಪಸ್ವಿ.ವಿದ್ಯಾರ್ಥಿಗಳ ಬದುಕಿನ ಉಜ್ವಲತೆಗೆ ಅಮೋಘ ಕೊಡುಗೆ ನೀಡಿದ ಅವರು ಶಿಷ್ಯರ ಔನತ್ಯಕ್ಕೆ ದಾರಿದೀಪವಾಗಿದ್ದರು ಎಂದರು.

ಎಸ್‍ಎಸ್‍ಪಿಯು ಕಾಲೇಜಿನ ಪ್ರಾಂಶುಪಾಲೆ ಸಾವಿತ್ರಿ.ಕೆ, ಪ್ರೌಢಶಾಲಾ ವಿಭಾಗದ ಮುಖ್ಯಗುರು ಕೆ.ಯಶವಂತ ರೈ, ನಿವೃತ್ತ ಪ್ರಾಂಶುಪಾಲರಾದ ರಾಮಶರ್ಮ, ಎಸ್.ಎನ್.ಭಟ್, ವಸಂತ ಶೆಟ್ಟಿ, ನಿವೃತ್ತ ಉಪನ್ಯಾಸಕರಾದ ಮುತ್ತಯ್ಯ ಮಾಸ್ತರ್, ಕುಶಾಲಪ್ಪ ಮಾಸ್ತರ್, ಡಾ.ಕೆ.ಎಸ್.ಎನ್.ಉಡುಪ, ನಿವೃತ್ತ ಬೋಧಕೇತರ ಸಿಬ್ಬಂಧಿ ದುಗ್ಗಪ್ಪ ಅಗ್ರಹಾರ, ಉಪನ್ಯಾಸಕ ವಿಶ್ವನಾಥ ನಡುತೋಟ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಎನ್.ಎಸ್, ಪೂರ್ವಾಧ್ಯಕ್ಷ ಕಿಶೋರ್ ಕುಮಾರ್ ಕೂಜುಗೋಡು, ಮೊದಲಾದವರು ನುಡಿನಮನ ಸಲ್ಲಿಸಿದರು.

ಉಪಪ್ರಾಂಶುಪಾಲೆ ರೇಖಾರಾಣಿ ಸೋಮಶೇಖರ್, ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಸೋಮಶೇಖರ ನಾಯಕ್, ಹಿರಿಯ ಉಪನ್ಯಾಸಕ ಎ.ಆರ್.ಮುಲ್ಲಾ, ಹಿರಿಯ ಸಹಶಿಕ್ಷಕ ಎಂ.ಕೃಷ್ಣ ಭಟ್, ಕಛೇರಿ ಅಧೀಕ್ಷಕಿ ವಸಂತಿ.ಬಿ.ಶೆಟ್ಟಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಲೋಕೇಶ್ವರ ಡಿ.ಆರ್, ಪ್ರೌಢಶಾಲಾ ವಿಭಾಗದ ಶಿಕ್ಷಕ ರಕ್ಷಕ ಸಂಘದ ಸದಸ್ಯ ನಾಗಸುಬ್ರಹ್ಮಣ್ಯ ಭಟ್, ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಲೋಕೇಶ್ ಬಿ.ಎನ್, ಜೇಸಿಸ್‍ನ ನಿಕಟಪೂರ್ವ ರಾಷ್ಟ್ರೀಯ ನಿರ್ದೇಶಕ ಚಂದ್ರಶೇಖರ ನಾಯರ್, ಹಿರಿಯ ವಿದ್ಯಾರ್ಥಿಗಳಾದ ಪ್ರಕಾಶ್ ಸುಬ್ರಹ್ಮಣ್ಯ, ನಿತಿನ್ ಭಟ್, ದಿನೇಶ್ ಎಸ್.ಎನ್, ಸಿಬ್ಬಂಧಿ ಮಹೇಶ್ ಕೆ.ಎಚ್ ಸೇರಿದಂತೆ ಉಪನ್ಯಾಸಕರು, ಶಿಕ್ಷಕರು, ಬೋಧಕೇತರ ಸಿಬ್ಬಂಧಿಗಳು ಗುರುಗಳಾದ ದಿ| ಎಂ.ಮಹಾಬಲ ಶೆಟ್ಟಿ ಅವರ ಭಾವಚಿತ್ರಕ್ಕೆ ಪುಪ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು. ಬಳಿಕ ಮೌನ ಪ್ರಾರ್ಥನೆ ಸಮರ್ಪಿಸಲಾಯಿತು.

ಉಪನ್ಯಾಸಕ ರತ್ನಾಕರ ಎಸ್ ಕಾರ್ಯಕ್ರಮ ನಿರೂಪಿಸಿದರು.ಕನ್ನಡ ಉಪನ್ಯಾಸಕ ಕುಸುಮಾಧರ ಕಮಿಲ ವಂದಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

7 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

14 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

23 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

1 day ago