ಬೆಂಗಳೂರು: 2009ರಲ್ಲಿ ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟದೊಂದಿಗೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಮಾಡಿಕೊಂಡ ಮುಕ್ತ ವ್ಯಾಪಾರ ಒಪ್ಪಂದ, ಸಮಾನತೆಯ ತತ್ವಕ್ಕೆ ವಿರೋಧವಾಗಿತ್ತು. ಈಗ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಚಾಣಾಕ್ಷ, ಕುಟಿಲ ಸಂಧಾನಗಳಿಗೆ ಮಣಿಯದೇ ಭಾರತದ ಆತಂಕ ಮತ್ತು ಸವಾಲುಗಳನ್ನು ಒಕ್ಕೂಟದ ರಾಷ್ಟ್ರಗಳಿಗೆ ಮನನ ಮಾಡಿಕೊಡಲು ಪ್ರಯತ್ನಿಸಿದ್ದಾರೆ. ಒಪ್ಪದಿದ್ದಾಗ ದೇಶದ ಹಿತಾಸಕ್ತಿಗಳನ್ನು ರಾಜಿ ಮಾಡಿಕೊಳ್ಳದೆ ಒಡಂಬಡಿಕೆಯಿಂದ ಹೊರಬಂದಿರುವುದು ನವ ಭಾರತದ ಆತ್ಮ ಶಕ್ತಿ ಸಂಕೇತವಾಗಿದೆ. ಭಾರತದ ನೆಚ್ಚಿನ ಪ್ರಧಾನಿ ಮೋದಿಯವರ ಈ ಐತಿಹಾಸಿಕ ನಿರ್ಧಾರವನ್ನು ಸ್ವಾಗತಿಸುತ್ತೇನೆ ಮತ್ತು ಅವರನ್ನು ಅಭಿನಂದಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ದೇಶದ ರೈತರ, ಬಡವರ ಮತ್ತು ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಹಿತಾಸಕ್ತಿಗಳನ್ನು ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿಯವರು ಯಾವತ್ತೂ ಬದ್ಧವಾಗಿದ್ದಾರೆ ಎಂಬುದಕ್ಕೆ ಈ ನಡೆಯೇ ಸಾಕ್ಷಿಯಾಗಿದೆ. 2009ರಲ್ಲಿ ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟದೊಂದಿಗೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಮಾಡಿಕೊಂಡ ಮುಕ್ತ ವ್ಯಾಪಾರ ಒಪ್ಪಂದ ಮಾನತೆಯ ತತ್ವಕ್ಕೆ ವಿರೋಧವಾಗಿತ್ತು. ಈ ಪ್ರಮಾದದಿಂದ ಹಾನಿಯೇ ಹೊರತು ಬೇರೆನೂ ಆಗಿಲ್ಲ. ಆದರೆ, ಈ ಬಾರಿ ಪ್ರಧಾನಿ ನರೇಂದ್ರ ಮೋದಿಯವರು ಈ ಪ್ರಮಾದವನ್ನು ಸರಿಪಡಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.