ಬೆಂಗಳೂರು: 2009ರಲ್ಲಿ ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟದೊಂದಿಗೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಮಾಡಿಕೊಂಡ ಮುಕ್ತ ವ್ಯಾಪಾರ ಒಪ್ಪಂದ, ಸಮಾನತೆಯ ತತ್ವಕ್ಕೆ ವಿರೋಧವಾಗಿತ್ತು. ಈಗ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಚಾಣಾಕ್ಷ, ಕುಟಿಲ ಸಂಧಾನಗಳಿಗೆ ಮಣಿಯದೇ ಭಾರತದ ಆತಂಕ ಮತ್ತು ಸವಾಲುಗಳನ್ನು ಒಕ್ಕೂಟದ ರಾಷ್ಟ್ರಗಳಿಗೆ ಮನನ ಮಾಡಿಕೊಡಲು ಪ್ರಯತ್ನಿಸಿದ್ದಾರೆ. ಒಪ್ಪದಿದ್ದಾಗ ದೇಶದ ಹಿತಾಸಕ್ತಿಗಳನ್ನು ರಾಜಿ ಮಾಡಿಕೊಳ್ಳದೆ ಒಡಂಬಡಿಕೆಯಿಂದ ಹೊರಬಂದಿರುವುದು ನವ ಭಾರತದ ಆತ್ಮ ಶಕ್ತಿ ಸಂಕೇತವಾಗಿದೆ. ಭಾರತದ ನೆಚ್ಚಿನ ಪ್ರಧಾನಿ ಮೋದಿಯವರ ಈ ಐತಿಹಾಸಿಕ ನಿರ್ಧಾರವನ್ನು ಸ್ವಾಗತಿಸುತ್ತೇನೆ ಮತ್ತು ಅವರನ್ನು ಅಭಿನಂದಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ದೇಶದ ರೈತರ, ಬಡವರ ಮತ್ತು ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಹಿತಾಸಕ್ತಿಗಳನ್ನು ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿಯವರು ಯಾವತ್ತೂ ಬದ್ಧವಾಗಿದ್ದಾರೆ ಎಂಬುದಕ್ಕೆ ಈ ನಡೆಯೇ ಸಾಕ್ಷಿಯಾಗಿದೆ. 2009ರಲ್ಲಿ ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟದೊಂದಿಗೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಮಾಡಿಕೊಂಡ ಮುಕ್ತ ವ್ಯಾಪಾರ ಒಪ್ಪಂದ ಮಾನತೆಯ ತತ್ವಕ್ಕೆ ವಿರೋಧವಾಗಿತ್ತು. ಈ ಪ್ರಮಾದದಿಂದ ಹಾನಿಯೇ ಹೊರತು ಬೇರೆನೂ ಆಗಿಲ್ಲ. ಆದರೆ, ಈ ಬಾರಿ ಪ್ರಧಾನಿ ನರೇಂದ್ರ ಮೋದಿಯವರು ಈ ಪ್ರಮಾದವನ್ನು ಸರಿಪಡಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…