ಬೆಂಗಳೂರು: 2009ರಲ್ಲಿ ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟದೊಂದಿಗೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಮಾಡಿಕೊಂಡ ಮುಕ್ತ ವ್ಯಾಪಾರ ಒಪ್ಪಂದ, ಸಮಾನತೆಯ ತತ್ವಕ್ಕೆ ವಿರೋಧವಾಗಿತ್ತು. ಈಗ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಚಾಣಾಕ್ಷ, ಕುಟಿಲ ಸಂಧಾನಗಳಿಗೆ ಮಣಿಯದೇ ಭಾರತದ ಆತಂಕ ಮತ್ತು ಸವಾಲುಗಳನ್ನು ಒಕ್ಕೂಟದ ರಾಷ್ಟ್ರಗಳಿಗೆ ಮನನ ಮಾಡಿಕೊಡಲು ಪ್ರಯತ್ನಿಸಿದ್ದಾರೆ. ಒಪ್ಪದಿದ್ದಾಗ ದೇಶದ ಹಿತಾಸಕ್ತಿಗಳನ್ನು ರಾಜಿ ಮಾಡಿಕೊಳ್ಳದೆ ಒಡಂಬಡಿಕೆಯಿಂದ ಹೊರಬಂದಿರುವುದು ನವ ಭಾರತದ ಆತ್ಮ ಶಕ್ತಿ ಸಂಕೇತವಾಗಿದೆ. ಭಾರತದ ನೆಚ್ಚಿನ ಪ್ರಧಾನಿ ಮೋದಿಯವರ ಈ ಐತಿಹಾಸಿಕ ನಿರ್ಧಾರವನ್ನು ಸ್ವಾಗತಿಸುತ್ತೇನೆ ಮತ್ತು ಅವರನ್ನು ಅಭಿನಂದಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ದೇಶದ ರೈತರ, ಬಡವರ ಮತ್ತು ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಹಿತಾಸಕ್ತಿಗಳನ್ನು ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿಯವರು ಯಾವತ್ತೂ ಬದ್ಧವಾಗಿದ್ದಾರೆ ಎಂಬುದಕ್ಕೆ ಈ ನಡೆಯೇ ಸಾಕ್ಷಿಯಾಗಿದೆ. 2009ರಲ್ಲಿ ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟದೊಂದಿಗೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಮಾಡಿಕೊಂಡ ಮುಕ್ತ ವ್ಯಾಪಾರ ಒಪ್ಪಂದ ಮಾನತೆಯ ತತ್ವಕ್ಕೆ ವಿರೋಧವಾಗಿತ್ತು. ಈ ಪ್ರಮಾದದಿಂದ ಹಾನಿಯೇ ಹೊರತು ಬೇರೆನೂ ಆಗಿಲ್ಲ. ಆದರೆ, ಈ ಬಾರಿ ಪ್ರಧಾನಿ ನರೇಂದ್ರ ಮೋದಿಯವರು ಈ ಪ್ರಮಾದವನ್ನು ಸರಿಪಡಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…