ಬೆಳ್ಳಾರೆ: ನಮ್ಮ ಜೀವಿತಾವಧಿಯಲ್ಲಿ ಪ್ರಾಮಾಣಿಕತೆಯಿಂದ ಸಮುದಾಯದ ಪ್ರೀತಿಗೆ ನಾವೆಲ್ಲರೂ ಭಾಜನರಾಗೋಣ. ರೋಟರಿಯು ವಿದ್ಯಾರ್ಥಿಗಳ ಸಬಲೀಕರಣಕ್ಕೆ ಉನ್ನತಮಟ್ಟದಲ್ಲಿ ಶ್ರಮಿಸುತ್ತಿದ್ದು, ಇದಕ್ಕೆ ಕೈಜೋಡಿಸುತ್ತಿರುವ ಸದಾಶಿವ ಚಾರಿಟೇಬಲ್ ಟ್ರಸ್ಟ್ ಮುಂದಾಳತ್ವ ಅಭಿನಂದನಾರ್ಹ ಎಂದು ರೋಟರಿ ಜಿಲ್ಲಾ 3181ರ ಟಿ.ಇ.ಎ.ಚಿ.ಹೆಚ್ ಜಿಲ್ಲಾ ಚೇರ್ಮನ್ ರಾಮಕೃಷ್ಣ ಮಲ್ಲಾರ ಹೇಳಿದರು.
ಶ್ರೀ ಸದಾಶಿವ ಚಾರಿಟೇಬಲ್ ಟ್ರಸ್ಟ್ ಹಾಗು ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇವುಗಳ ಜಂಟಿ ಆಶ್ರಯದಲ್ಲಿ ನಡೆದ ಬೆಳ್ಳಾರೆ ಕೆಪಿಎಸ್ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ಬಿ.ನರಸಿಂಹ ಜೋಶಿ ರೋಟರಿ ಸಂಸ್ಥೆಯ ಕಾರ್ಯವೈಖರಿಯನ್ನು ಮಕ್ಕಳಿಗೆ ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ಳಾರೆ ಶ್ರೀ ಸದಾಶಿವ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಜೋಶಿ ವಹಿಸಿದರು. ವೇದಿಕೆಯಲ್ಲಿ ಕೆಪಿಎಸ್ ಪ್ರಾಂಶುಪಾಲೆ ಹಸೀನಾ ಬಾನು, ಉಪಪ್ರಾಂಶುಪಾಲೆ ಉಮಾಕುಮಾರಿ, ಡಾ| ಶ್ರೇಯಸ್ ಭಾರಧ್ವಾಜ್ ಉಪಸ್ಥಿತರಿದ್ದರು. ಬಿ. ಸುಬ್ರಹ್ಮಣ್ಯ ಜೋಶಿ ಸ್ವಾಗತಿಸಿ, ಶ್ರೀರಾಮ್ ಪಾಟಾಜೆ ವಂದಿಸಿದರು. ಉಪನ್ಯಾಸಕ ರಾಮಚಂದ್ರ ಮುಗುಳಿ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಅರ್ಹ 60 ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು ಬೆಳ್ಳಾರೆ ಶ್ರೀ ಸದಾಶಿವ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬಿ.ಸುಬ್ರಹ್ಮಣ್ಯ ಜೋಶಿ ವಿತರಿಸಿದರು.
ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ನಿರ್ವಹಣೆ ಹಾಗೂ ಕಾಡ್ಗಿಚ್ಚು ನಿರ್ವಹಣೆ…
ಭಾರತವು ಕಾಫಿ ಉತ್ಪಾದನೆಯಲ್ಲಿ ಏಳನೇ ಅತಿ ದೊಡ್ಡ ಮತ್ತು ಜಾಗತಿಕವಾಗಿ ಐದನೇ ಅತಿ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ.…
ಕಳೆದ ಕೆಲವು ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದೆ.…
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ…
ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…