ಬೆಳ್ಳಾರೆ: ನಮ್ಮ ಜೀವಿತಾವಧಿಯಲ್ಲಿ ಪ್ರಾಮಾಣಿಕತೆಯಿಂದ ಸಮುದಾಯದ ಪ್ರೀತಿಗೆ ನಾವೆಲ್ಲರೂ ಭಾಜನರಾಗೋಣ. ರೋಟರಿಯು ವಿದ್ಯಾರ್ಥಿಗಳ ಸಬಲೀಕರಣಕ್ಕೆ ಉನ್ನತಮಟ್ಟದಲ್ಲಿ ಶ್ರಮಿಸುತ್ತಿದ್ದು, ಇದಕ್ಕೆ ಕೈಜೋಡಿಸುತ್ತಿರುವ ಸದಾಶಿವ ಚಾರಿಟೇಬಲ್ ಟ್ರಸ್ಟ್ ಮುಂದಾಳತ್ವ ಅಭಿನಂದನಾರ್ಹ ಎಂದು ರೋಟರಿ ಜಿಲ್ಲಾ 3181ರ ಟಿ.ಇ.ಎ.ಚಿ.ಹೆಚ್ ಜಿಲ್ಲಾ ಚೇರ್ಮನ್ ರಾಮಕೃಷ್ಣ ಮಲ್ಲಾರ ಹೇಳಿದರು.
ಶ್ರೀ ಸದಾಶಿವ ಚಾರಿಟೇಬಲ್ ಟ್ರಸ್ಟ್ ಹಾಗು ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇವುಗಳ ಜಂಟಿ ಆಶ್ರಯದಲ್ಲಿ ನಡೆದ ಬೆಳ್ಳಾರೆ ಕೆಪಿಎಸ್ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ಬಿ.ನರಸಿಂಹ ಜೋಶಿ ರೋಟರಿ ಸಂಸ್ಥೆಯ ಕಾರ್ಯವೈಖರಿಯನ್ನು ಮಕ್ಕಳಿಗೆ ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ಳಾರೆ ಶ್ರೀ ಸದಾಶಿವ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಜೋಶಿ ವಹಿಸಿದರು. ವೇದಿಕೆಯಲ್ಲಿ ಕೆಪಿಎಸ್ ಪ್ರಾಂಶುಪಾಲೆ ಹಸೀನಾ ಬಾನು, ಉಪಪ್ರಾಂಶುಪಾಲೆ ಉಮಾಕುಮಾರಿ, ಡಾ| ಶ್ರೇಯಸ್ ಭಾರಧ್ವಾಜ್ ಉಪಸ್ಥಿತರಿದ್ದರು. ಬಿ. ಸುಬ್ರಹ್ಮಣ್ಯ ಜೋಶಿ ಸ್ವಾಗತಿಸಿ, ಶ್ರೀರಾಮ್ ಪಾಟಾಜೆ ವಂದಿಸಿದರು. ಉಪನ್ಯಾಸಕ ರಾಮಚಂದ್ರ ಮುಗುಳಿ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಅರ್ಹ 60 ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು ಬೆಳ್ಳಾರೆ ಶ್ರೀ ಸದಾಶಿವ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬಿ.ಸುಬ್ರಹ್ಮಣ್ಯ ಜೋಶಿ ವಿತರಿಸಿದರು.
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…