ಬೆಳ್ಳಾರೆ: ನಮ್ಮ ಜೀವಿತಾವಧಿಯಲ್ಲಿ ಪ್ರಾಮಾಣಿಕತೆಯಿಂದ ಸಮುದಾಯದ ಪ್ರೀತಿಗೆ ನಾವೆಲ್ಲರೂ ಭಾಜನರಾಗೋಣ. ರೋಟರಿಯು ವಿದ್ಯಾರ್ಥಿಗಳ ಸಬಲೀಕರಣಕ್ಕೆ ಉನ್ನತಮಟ್ಟದಲ್ಲಿ ಶ್ರಮಿಸುತ್ತಿದ್ದು, ಇದಕ್ಕೆ ಕೈಜೋಡಿಸುತ್ತಿರುವ ಸದಾಶಿವ ಚಾರಿಟೇಬಲ್ ಟ್ರಸ್ಟ್ ಮುಂದಾಳತ್ವ ಅಭಿನಂದನಾರ್ಹ ಎಂದು ರೋಟರಿ ಜಿಲ್ಲಾ 3181ರ ಟಿ.ಇ.ಎ.ಚಿ.ಹೆಚ್ ಜಿಲ್ಲಾ ಚೇರ್ಮನ್ ರಾಮಕೃಷ್ಣ ಮಲ್ಲಾರ ಹೇಳಿದರು.
ಶ್ರೀ ಸದಾಶಿವ ಚಾರಿಟೇಬಲ್ ಟ್ರಸ್ಟ್ ಹಾಗು ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇವುಗಳ ಜಂಟಿ ಆಶ್ರಯದಲ್ಲಿ ನಡೆದ ಬೆಳ್ಳಾರೆ ಕೆಪಿಎಸ್ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ಬಿ.ನರಸಿಂಹ ಜೋಶಿ ರೋಟರಿ ಸಂಸ್ಥೆಯ ಕಾರ್ಯವೈಖರಿಯನ್ನು ಮಕ್ಕಳಿಗೆ ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ಳಾರೆ ಶ್ರೀ ಸದಾಶಿವ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಜೋಶಿ ವಹಿಸಿದರು. ವೇದಿಕೆಯಲ್ಲಿ ಕೆಪಿಎಸ್ ಪ್ರಾಂಶುಪಾಲೆ ಹಸೀನಾ ಬಾನು, ಉಪಪ್ರಾಂಶುಪಾಲೆ ಉಮಾಕುಮಾರಿ, ಡಾ| ಶ್ರೇಯಸ್ ಭಾರಧ್ವಾಜ್ ಉಪಸ್ಥಿತರಿದ್ದರು. ಬಿ. ಸುಬ್ರಹ್ಮಣ್ಯ ಜೋಶಿ ಸ್ವಾಗತಿಸಿ, ಶ್ರೀರಾಮ್ ಪಾಟಾಜೆ ವಂದಿಸಿದರು. ಉಪನ್ಯಾಸಕ ರಾಮಚಂದ್ರ ಮುಗುಳಿ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಅರ್ಹ 60 ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು ಬೆಳ್ಳಾರೆ ಶ್ರೀ ಸದಾಶಿವ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬಿ.ಸುಬ್ರಹ್ಮಣ್ಯ ಜೋಶಿ ವಿತರಿಸಿದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…