Advertisement
ಅಪರಾಧ

ಪ್ರೇಮ ವ್ಯವಹಾರ ಮನೆಯವರಿಗೆ ಗೊತ್ತಾಗುತ್ತದೆ ಎಂದು ಸುಳ್ಳು ಕತೆ ಕಟ್ಟಿದ….!

Share

ವಿಟ್ಲ: ಪ್ರೇಮ ವ್ಯವಹಾರ ಮನೆಯವರಿಗೆ ಗೊತ್ತಾಗುತ್ತದೆ ಎಂದು ಭಯಪಟ್ಟು ಯಾರೋ ಅಪರಿಚಿತ ಮುಸುಕುದಾರಿಗಳು ತನ್ನ ಬೈಕನ್ನು ಅಡ್ಡಗಟ್ಟಿ ಬ್ಲೇಡ್ ನಿಂದ ಹಲ್ಲೆ ಮಾಡಿರುತ್ತಾರೆ ಎಂದು ಸುಳ್ಳು ಪ್ರಕರಣ ದಾಖಲಿಸಿರುವ ಪ್ರಕರಣವನ್ನು ವಿಟ್ಲ ಪೊಲೀಸರು ಬೆಳಕಿಗೆ ತಂದಿದ್ದಾರೆ.

ಮಂಗಳವಾರ  ಸಾಲೆತ್ತೂರು ಕುಂಚಿತಡ್ಕ ನಿವಾಸಿ 19 ವರ್ಷದ  ಮಹಮದ್ ಸಫ್ವಾನ್ ಎಂಬುವರ ಮೇಲೆ ಅಪರಿಚಿತರು ಬ್ಲೇಡ್ ದಾಳಿ ಮಾಡಿರುತ್ತಾರೆ ಎಂದು  ವಿಟ್ಲ ಠಾಣೆಯಲ್ಲಿ ನೀಡಿದ ದೂರಿನಂತೆ  ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದರು. ಈ ಸಂದರ್ಭ ಪೊಲೀಸರು ಮಹಮದ್ ಸಫ್ವಾನ್ ನ ಗಾಯದ ಬಗ್ಗೆ ಅನುಮಾನಗೊಂಡು ಆತನ ಕುಟುಂಬಿಕರಲ್ಲಿ ವಿಚಾರಿಸಿದಾಗ,  ಇತ್ತೀಚಿನ ದಿನಗಳಲ್ಲಿ ಆತನ ವರ್ತನೆಯಲ್ಲಿ ಬದಲಾವಣೆ ಇರುವ ಬಗ್ಗೆ ತಿಳಿಸಿದ್ದು ಆತನನ್ನು ವಿಚಾರಣೆಗೊಳಪಡಿಸಿದರು. ಈ ಸಂದರ್ಭ ಸತ್ಯ ಬಯಲಾಯಿತು,  ದೂರುದಾರನು ಪ್ರೇಮ ವೈಫಲ್ಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ತಾನೆ ಬ್ಲೇಡ್ ಖರೀದಿಸಿ ರಾತ್ರಿ ಸುಮಾರು 8-30 ಗಂಟೆ ಸುಮಾರಿಗೆ ಮನೆ ಹತ್ತಿರದ ವಾಟರ್ ಟ್ಯಾಂಕ್ ಬಳಿ ಎಡಗೈಗೆ ಕುಯ್ದುಕೊಂಡಿರುವುದಾಗಿ ತಿಳಿದುಬಂದಿತು.  ತನಗಾದ ಗಾಯದಿಂದ ತನ್ನ ಪ್ರೇಮ ವ್ಯವಹಾರ ಮನೆಯವರಿಗೆ ಗೊತ್ತಾಗುತ್ತದೆ ಎಂದು ಭಯಪಟ್ಟು ಯಾರೋ ಅಪರಿಚಿತ ಮುಸುಕುದಾರಿಗಳು ತನ್ನ ಬೈಕನ್ನು ಅಡ್ಡಗಟ್ಟಿ ಬ್ಲೇಡ್ ನಿಂದ ಹಲ್ಲೆ ಮಾಡಿರುತ್ತಾರೆ ಎಂದು ಸುಳ್ಳು ಪ್ರಕರಣ ದಾಖಲಿಸಿರುವುದಾಗಿ ತಿಳಿಯಿತು.

ಈ ಪ್ರಕರಣ ತೀವ್ರ ಸಂಚಲನ ಮೂಡಿಸಿತ್ತು ಅಲ್ಲದೆ ಸಾಮಾಜಿಕ ಸಾಮರಸ್ಯದ ಮೇಲೂ ಪರಿಣಾಮ ಬೀರುವ ಹಂತದಲ್ಲಿತ್ತು. ಹೀಗಾಗಿ ಪೊಲೀಸರು

ಸಾಲೆತ್ತೂರು ಪರಿಸರವು ಶಾಂತಿ ಮತ್ತು ಸಾಮರಸ್ಯದಿಂದಿದ್ದು ಮಹಮದ್ ಸಫ್ವಾನ್ ತನ್ನ ವೈಯಕ್ತಿಕ ವಿಚಾರಗಳಿಗಾಗಿ ಕಾನೂನನ್ನು ದುರ್ಬಳಕೆ ಮಾಡಿಕೊಂಡು ಪೊಲೀಸ್ ಇಲಾಖೆಗೆ ತಪ್ಪು ಮಾಹಿತಿ ನೀಡಿರುವ ಬಗ್ಗೆ ಮಹಮದ್ ಸಫ್ವಾನ್ 19 ವರ್ಷ ಎಂಬುವನ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

21 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

21 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

21 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

22 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

2 days ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

2 days ago