ಅಪರಾಧ

ಪ್ರೇಮ ವ್ಯವಹಾರ ಮನೆಯವರಿಗೆ ಗೊತ್ತಾಗುತ್ತದೆ ಎಂದು ಸುಳ್ಳು ಕತೆ ಕಟ್ಟಿದ….!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಿಟ್ಲ: ಪ್ರೇಮ ವ್ಯವಹಾರ ಮನೆಯವರಿಗೆ ಗೊತ್ತಾಗುತ್ತದೆ ಎಂದು ಭಯಪಟ್ಟು ಯಾರೋ ಅಪರಿಚಿತ ಮುಸುಕುದಾರಿಗಳು ತನ್ನ ಬೈಕನ್ನು ಅಡ್ಡಗಟ್ಟಿ ಬ್ಲೇಡ್ ನಿಂದ ಹಲ್ಲೆ ಮಾಡಿರುತ್ತಾರೆ ಎಂದು ಸುಳ್ಳು ಪ್ರಕರಣ ದಾಖಲಿಸಿರುವ ಪ್ರಕರಣವನ್ನು ವಿಟ್ಲ ಪೊಲೀಸರು ಬೆಳಕಿಗೆ ತಂದಿದ್ದಾರೆ.

Advertisement
Advertisement

ಮಂಗಳವಾರ  ಸಾಲೆತ್ತೂರು ಕುಂಚಿತಡ್ಕ ನಿವಾಸಿ 19 ವರ್ಷದ  ಮಹಮದ್ ಸಫ್ವಾನ್ ಎಂಬುವರ ಮೇಲೆ ಅಪರಿಚಿತರು ಬ್ಲೇಡ್ ದಾಳಿ ಮಾಡಿರುತ್ತಾರೆ ಎಂದು  ವಿಟ್ಲ ಠಾಣೆಯಲ್ಲಿ ನೀಡಿದ ದೂರಿನಂತೆ  ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದರು. ಈ ಸಂದರ್ಭ ಪೊಲೀಸರು ಮಹಮದ್ ಸಫ್ವಾನ್ ನ ಗಾಯದ ಬಗ್ಗೆ ಅನುಮಾನಗೊಂಡು ಆತನ ಕುಟುಂಬಿಕರಲ್ಲಿ ವಿಚಾರಿಸಿದಾಗ,  ಇತ್ತೀಚಿನ ದಿನಗಳಲ್ಲಿ ಆತನ ವರ್ತನೆಯಲ್ಲಿ ಬದಲಾವಣೆ ಇರುವ ಬಗ್ಗೆ ತಿಳಿಸಿದ್ದು ಆತನನ್ನು ವಿಚಾರಣೆಗೊಳಪಡಿಸಿದರು. ಈ ಸಂದರ್ಭ ಸತ್ಯ ಬಯಲಾಯಿತು,  ದೂರುದಾರನು ಪ್ರೇಮ ವೈಫಲ್ಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ತಾನೆ ಬ್ಲೇಡ್ ಖರೀದಿಸಿ ರಾತ್ರಿ ಸುಮಾರು 8-30 ಗಂಟೆ ಸುಮಾರಿಗೆ ಮನೆ ಹತ್ತಿರದ ವಾಟರ್ ಟ್ಯಾಂಕ್ ಬಳಿ ಎಡಗೈಗೆ ಕುಯ್ದುಕೊಂಡಿರುವುದಾಗಿ ತಿಳಿದುಬಂದಿತು.  ತನಗಾದ ಗಾಯದಿಂದ ತನ್ನ ಪ್ರೇಮ ವ್ಯವಹಾರ ಮನೆಯವರಿಗೆ ಗೊತ್ತಾಗುತ್ತದೆ ಎಂದು ಭಯಪಟ್ಟು ಯಾರೋ ಅಪರಿಚಿತ ಮುಸುಕುದಾರಿಗಳು ತನ್ನ ಬೈಕನ್ನು ಅಡ್ಡಗಟ್ಟಿ ಬ್ಲೇಡ್ ನಿಂದ ಹಲ್ಲೆ ಮಾಡಿರುತ್ತಾರೆ ಎಂದು ಸುಳ್ಳು ಪ್ರಕರಣ ದಾಖಲಿಸಿರುವುದಾಗಿ ತಿಳಿಯಿತು.

ಈ ಪ್ರಕರಣ ತೀವ್ರ ಸಂಚಲನ ಮೂಡಿಸಿತ್ತು ಅಲ್ಲದೆ ಸಾಮಾಜಿಕ ಸಾಮರಸ್ಯದ ಮೇಲೂ ಪರಿಣಾಮ ಬೀರುವ ಹಂತದಲ್ಲಿತ್ತು. ಹೀಗಾಗಿ ಪೊಲೀಸರು

ಸಾಲೆತ್ತೂರು ಪರಿಸರವು ಶಾಂತಿ ಮತ್ತು ಸಾಮರಸ್ಯದಿಂದಿದ್ದು ಮಹಮದ್ ಸಫ್ವಾನ್ ತನ್ನ ವೈಯಕ್ತಿಕ ವಿಚಾರಗಳಿಗಾಗಿ ಕಾನೂನನ್ನು ದುರ್ಬಳಕೆ ಮಾಡಿಕೊಂಡು ಪೊಲೀಸ್ ಇಲಾಖೆಗೆ ತಪ್ಪು ಮಾಹಿತಿ ನೀಡಿರುವ ಬಗ್ಗೆ ಮಹಮದ್ ಸಫ್ವಾನ್ 19 ವರ್ಷ ಎಂಬುವನ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

8 hours ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

9 hours ago

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

13 hours ago

ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…

17 hours ago

ಶನಿ ಬುಧರಿಂದ ನವಪಂಚಮ ರಾಜಯೋಗ

2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…

17 hours ago

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

1 day ago