Advertisement
ಅಪರಾಧ

ಪ್ರೇಮ ವ್ಯವಹಾರ ಮನೆಯವರಿಗೆ ಗೊತ್ತಾಗುತ್ತದೆ ಎಂದು ಸುಳ್ಳು ಕತೆ ಕಟ್ಟಿದ….!

Share

ವಿಟ್ಲ: ಪ್ರೇಮ ವ್ಯವಹಾರ ಮನೆಯವರಿಗೆ ಗೊತ್ತಾಗುತ್ತದೆ ಎಂದು ಭಯಪಟ್ಟು ಯಾರೋ ಅಪರಿಚಿತ ಮುಸುಕುದಾರಿಗಳು ತನ್ನ ಬೈಕನ್ನು ಅಡ್ಡಗಟ್ಟಿ ಬ್ಲೇಡ್ ನಿಂದ ಹಲ್ಲೆ ಮಾಡಿರುತ್ತಾರೆ ಎಂದು ಸುಳ್ಳು ಪ್ರಕರಣ ದಾಖಲಿಸಿರುವ ಪ್ರಕರಣವನ್ನು ವಿಟ್ಲ ಪೊಲೀಸರು ಬೆಳಕಿಗೆ ತಂದಿದ್ದಾರೆ.

ಮಂಗಳವಾರ  ಸಾಲೆತ್ತೂರು ಕುಂಚಿತಡ್ಕ ನಿವಾಸಿ 19 ವರ್ಷದ  ಮಹಮದ್ ಸಫ್ವಾನ್ ಎಂಬುವರ ಮೇಲೆ ಅಪರಿಚಿತರು ಬ್ಲೇಡ್ ದಾಳಿ ಮಾಡಿರುತ್ತಾರೆ ಎಂದು  ವಿಟ್ಲ ಠಾಣೆಯಲ್ಲಿ ನೀಡಿದ ದೂರಿನಂತೆ  ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದರು. ಈ ಸಂದರ್ಭ ಪೊಲೀಸರು ಮಹಮದ್ ಸಫ್ವಾನ್ ನ ಗಾಯದ ಬಗ್ಗೆ ಅನುಮಾನಗೊಂಡು ಆತನ ಕುಟುಂಬಿಕರಲ್ಲಿ ವಿಚಾರಿಸಿದಾಗ,  ಇತ್ತೀಚಿನ ದಿನಗಳಲ್ಲಿ ಆತನ ವರ್ತನೆಯಲ್ಲಿ ಬದಲಾವಣೆ ಇರುವ ಬಗ್ಗೆ ತಿಳಿಸಿದ್ದು ಆತನನ್ನು ವಿಚಾರಣೆಗೊಳಪಡಿಸಿದರು. ಈ ಸಂದರ್ಭ ಸತ್ಯ ಬಯಲಾಯಿತು,  ದೂರುದಾರನು ಪ್ರೇಮ ವೈಫಲ್ಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ತಾನೆ ಬ್ಲೇಡ್ ಖರೀದಿಸಿ ರಾತ್ರಿ ಸುಮಾರು 8-30 ಗಂಟೆ ಸುಮಾರಿಗೆ ಮನೆ ಹತ್ತಿರದ ವಾಟರ್ ಟ್ಯಾಂಕ್ ಬಳಿ ಎಡಗೈಗೆ ಕುಯ್ದುಕೊಂಡಿರುವುದಾಗಿ ತಿಳಿದುಬಂದಿತು.  ತನಗಾದ ಗಾಯದಿಂದ ತನ್ನ ಪ್ರೇಮ ವ್ಯವಹಾರ ಮನೆಯವರಿಗೆ ಗೊತ್ತಾಗುತ್ತದೆ ಎಂದು ಭಯಪಟ್ಟು ಯಾರೋ ಅಪರಿಚಿತ ಮುಸುಕುದಾರಿಗಳು ತನ್ನ ಬೈಕನ್ನು ಅಡ್ಡಗಟ್ಟಿ ಬ್ಲೇಡ್ ನಿಂದ ಹಲ್ಲೆ ಮಾಡಿರುತ್ತಾರೆ ಎಂದು ಸುಳ್ಳು ಪ್ರಕರಣ ದಾಖಲಿಸಿರುವುದಾಗಿ ತಿಳಿಯಿತು.

ಈ ಪ್ರಕರಣ ತೀವ್ರ ಸಂಚಲನ ಮೂಡಿಸಿತ್ತು ಅಲ್ಲದೆ ಸಾಮಾಜಿಕ ಸಾಮರಸ್ಯದ ಮೇಲೂ ಪರಿಣಾಮ ಬೀರುವ ಹಂತದಲ್ಲಿತ್ತು. ಹೀಗಾಗಿ ಪೊಲೀಸರು

ಸಾಲೆತ್ತೂರು ಪರಿಸರವು ಶಾಂತಿ ಮತ್ತು ಸಾಮರಸ್ಯದಿಂದಿದ್ದು ಮಹಮದ್ ಸಫ್ವಾನ್ ತನ್ನ ವೈಯಕ್ತಿಕ ವಿಚಾರಗಳಿಗಾಗಿ ಕಾನೂನನ್ನು ದುರ್ಬಳಕೆ ಮಾಡಿಕೊಂಡು ಪೊಲೀಸ್ ಇಲಾಖೆಗೆ ತಪ್ಪು ಮಾಹಿತಿ ನೀಡಿರುವ ಬಗ್ಗೆ ಮಹಮದ್ ಸಫ್ವಾನ್ 19 ವರ್ಷ ಎಂಬುವನ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೋಹಿತ್‌ ನಗರ್‌ ಅಡಿಕೆ ಗಿಡ ಏಕೆ ರೈತರ ಫೇವರಿಟ್‌..? ಹೆಚ್ಚು ಇಳುವರಿ, ವೇಗದ ಬೆಳವಣಿಗೆ ಇದರ ವಿಶೇಷತೆ..!

ಮೋಹಿತ್‌ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…

4 hours ago

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…

13 hours ago

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

1 day ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

1 day ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

2 days ago