Advertisement
ಅಪರಾಧ

ಪ್ರೇಮ ವ್ಯವಹಾರ ಮನೆಯವರಿಗೆ ಗೊತ್ತಾಗುತ್ತದೆ ಎಂದು ಸುಳ್ಳು ಕತೆ ಕಟ್ಟಿದ….!

Share

ವಿಟ್ಲ: ಪ್ರೇಮ ವ್ಯವಹಾರ ಮನೆಯವರಿಗೆ ಗೊತ್ತಾಗುತ್ತದೆ ಎಂದು ಭಯಪಟ್ಟು ಯಾರೋ ಅಪರಿಚಿತ ಮುಸುಕುದಾರಿಗಳು ತನ್ನ ಬೈಕನ್ನು ಅಡ್ಡಗಟ್ಟಿ ಬ್ಲೇಡ್ ನಿಂದ ಹಲ್ಲೆ ಮಾಡಿರುತ್ತಾರೆ ಎಂದು ಸುಳ್ಳು ಪ್ರಕರಣ ದಾಖಲಿಸಿರುವ ಪ್ರಕರಣವನ್ನು ವಿಟ್ಲ ಪೊಲೀಸರು ಬೆಳಕಿಗೆ ತಂದಿದ್ದಾರೆ.

ಮಂಗಳವಾರ  ಸಾಲೆತ್ತೂರು ಕುಂಚಿತಡ್ಕ ನಿವಾಸಿ 19 ವರ್ಷದ  ಮಹಮದ್ ಸಫ್ವಾನ್ ಎಂಬುವರ ಮೇಲೆ ಅಪರಿಚಿತರು ಬ್ಲೇಡ್ ದಾಳಿ ಮಾಡಿರುತ್ತಾರೆ ಎಂದು  ವಿಟ್ಲ ಠಾಣೆಯಲ್ಲಿ ನೀಡಿದ ದೂರಿನಂತೆ  ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದರು. ಈ ಸಂದರ್ಭ ಪೊಲೀಸರು ಮಹಮದ್ ಸಫ್ವಾನ್ ನ ಗಾಯದ ಬಗ್ಗೆ ಅನುಮಾನಗೊಂಡು ಆತನ ಕುಟುಂಬಿಕರಲ್ಲಿ ವಿಚಾರಿಸಿದಾಗ,  ಇತ್ತೀಚಿನ ದಿನಗಳಲ್ಲಿ ಆತನ ವರ್ತನೆಯಲ್ಲಿ ಬದಲಾವಣೆ ಇರುವ ಬಗ್ಗೆ ತಿಳಿಸಿದ್ದು ಆತನನ್ನು ವಿಚಾರಣೆಗೊಳಪಡಿಸಿದರು. ಈ ಸಂದರ್ಭ ಸತ್ಯ ಬಯಲಾಯಿತು,  ದೂರುದಾರನು ಪ್ರೇಮ ವೈಫಲ್ಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ತಾನೆ ಬ್ಲೇಡ್ ಖರೀದಿಸಿ ರಾತ್ರಿ ಸುಮಾರು 8-30 ಗಂಟೆ ಸುಮಾರಿಗೆ ಮನೆ ಹತ್ತಿರದ ವಾಟರ್ ಟ್ಯಾಂಕ್ ಬಳಿ ಎಡಗೈಗೆ ಕುಯ್ದುಕೊಂಡಿರುವುದಾಗಿ ತಿಳಿದುಬಂದಿತು.  ತನಗಾದ ಗಾಯದಿಂದ ತನ್ನ ಪ್ರೇಮ ವ್ಯವಹಾರ ಮನೆಯವರಿಗೆ ಗೊತ್ತಾಗುತ್ತದೆ ಎಂದು ಭಯಪಟ್ಟು ಯಾರೋ ಅಪರಿಚಿತ ಮುಸುಕುದಾರಿಗಳು ತನ್ನ ಬೈಕನ್ನು ಅಡ್ಡಗಟ್ಟಿ ಬ್ಲೇಡ್ ನಿಂದ ಹಲ್ಲೆ ಮಾಡಿರುತ್ತಾರೆ ಎಂದು ಸುಳ್ಳು ಪ್ರಕರಣ ದಾಖಲಿಸಿರುವುದಾಗಿ ತಿಳಿಯಿತು.

ಈ ಪ್ರಕರಣ ತೀವ್ರ ಸಂಚಲನ ಮೂಡಿಸಿತ್ತು ಅಲ್ಲದೆ ಸಾಮಾಜಿಕ ಸಾಮರಸ್ಯದ ಮೇಲೂ ಪರಿಣಾಮ ಬೀರುವ ಹಂತದಲ್ಲಿತ್ತು. ಹೀಗಾಗಿ ಪೊಲೀಸರು

ಸಾಲೆತ್ತೂರು ಪರಿಸರವು ಶಾಂತಿ ಮತ್ತು ಸಾಮರಸ್ಯದಿಂದಿದ್ದು ಮಹಮದ್ ಸಫ್ವಾನ್ ತನ್ನ ವೈಯಕ್ತಿಕ ವಿಚಾರಗಳಿಗಾಗಿ ಕಾನೂನನ್ನು ದುರ್ಬಳಕೆ ಮಾಡಿಕೊಂಡು ಪೊಲೀಸ್ ಇಲಾಖೆಗೆ ತಪ್ಪು ಮಾಹಿತಿ ನೀಡಿರುವ ಬಗ್ಗೆ ಮಹಮದ್ ಸಫ್ವಾನ್ 19 ವರ್ಷ ಎಂಬುವನ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

13 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

1 day ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

2 days ago