Advertisement
ಅಪರಾಧ

ಪ್ರೇಮ ವ್ಯವಹಾರ ಮನೆಯವರಿಗೆ ಗೊತ್ತಾಗುತ್ತದೆ ಎಂದು ಸುಳ್ಳು ಕತೆ ಕಟ್ಟಿದ….!

Share

ವಿಟ್ಲ: ಪ್ರೇಮ ವ್ಯವಹಾರ ಮನೆಯವರಿಗೆ ಗೊತ್ತಾಗುತ್ತದೆ ಎಂದು ಭಯಪಟ್ಟು ಯಾರೋ ಅಪರಿಚಿತ ಮುಸುಕುದಾರಿಗಳು ತನ್ನ ಬೈಕನ್ನು ಅಡ್ಡಗಟ್ಟಿ ಬ್ಲೇಡ್ ನಿಂದ ಹಲ್ಲೆ ಮಾಡಿರುತ್ತಾರೆ ಎಂದು ಸುಳ್ಳು ಪ್ರಕರಣ ದಾಖಲಿಸಿರುವ ಪ್ರಕರಣವನ್ನು ವಿಟ್ಲ ಪೊಲೀಸರು ಬೆಳಕಿಗೆ ತಂದಿದ್ದಾರೆ.

ಮಂಗಳವಾರ  ಸಾಲೆತ್ತೂರು ಕುಂಚಿತಡ್ಕ ನಿವಾಸಿ 19 ವರ್ಷದ  ಮಹಮದ್ ಸಫ್ವಾನ್ ಎಂಬುವರ ಮೇಲೆ ಅಪರಿಚಿತರು ಬ್ಲೇಡ್ ದಾಳಿ ಮಾಡಿರುತ್ತಾರೆ ಎಂದು  ವಿಟ್ಲ ಠಾಣೆಯಲ್ಲಿ ನೀಡಿದ ದೂರಿನಂತೆ  ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದರು. ಈ ಸಂದರ್ಭ ಪೊಲೀಸರು ಮಹಮದ್ ಸಫ್ವಾನ್ ನ ಗಾಯದ ಬಗ್ಗೆ ಅನುಮಾನಗೊಂಡು ಆತನ ಕುಟುಂಬಿಕರಲ್ಲಿ ವಿಚಾರಿಸಿದಾಗ,  ಇತ್ತೀಚಿನ ದಿನಗಳಲ್ಲಿ ಆತನ ವರ್ತನೆಯಲ್ಲಿ ಬದಲಾವಣೆ ಇರುವ ಬಗ್ಗೆ ತಿಳಿಸಿದ್ದು ಆತನನ್ನು ವಿಚಾರಣೆಗೊಳಪಡಿಸಿದರು. ಈ ಸಂದರ್ಭ ಸತ್ಯ ಬಯಲಾಯಿತು,  ದೂರುದಾರನು ಪ್ರೇಮ ವೈಫಲ್ಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ತಾನೆ ಬ್ಲೇಡ್ ಖರೀದಿಸಿ ರಾತ್ರಿ ಸುಮಾರು 8-30 ಗಂಟೆ ಸುಮಾರಿಗೆ ಮನೆ ಹತ್ತಿರದ ವಾಟರ್ ಟ್ಯಾಂಕ್ ಬಳಿ ಎಡಗೈಗೆ ಕುಯ್ದುಕೊಂಡಿರುವುದಾಗಿ ತಿಳಿದುಬಂದಿತು.  ತನಗಾದ ಗಾಯದಿಂದ ತನ್ನ ಪ್ರೇಮ ವ್ಯವಹಾರ ಮನೆಯವರಿಗೆ ಗೊತ್ತಾಗುತ್ತದೆ ಎಂದು ಭಯಪಟ್ಟು ಯಾರೋ ಅಪರಿಚಿತ ಮುಸುಕುದಾರಿಗಳು ತನ್ನ ಬೈಕನ್ನು ಅಡ್ಡಗಟ್ಟಿ ಬ್ಲೇಡ್ ನಿಂದ ಹಲ್ಲೆ ಮಾಡಿರುತ್ತಾರೆ ಎಂದು ಸುಳ್ಳು ಪ್ರಕರಣ ದಾಖಲಿಸಿರುವುದಾಗಿ ತಿಳಿಯಿತು.

ಈ ಪ್ರಕರಣ ತೀವ್ರ ಸಂಚಲನ ಮೂಡಿಸಿತ್ತು ಅಲ್ಲದೆ ಸಾಮಾಜಿಕ ಸಾಮರಸ್ಯದ ಮೇಲೂ ಪರಿಣಾಮ ಬೀರುವ ಹಂತದಲ್ಲಿತ್ತು. ಹೀಗಾಗಿ ಪೊಲೀಸರು

ಸಾಲೆತ್ತೂರು ಪರಿಸರವು ಶಾಂತಿ ಮತ್ತು ಸಾಮರಸ್ಯದಿಂದಿದ್ದು ಮಹಮದ್ ಸಫ್ವಾನ್ ತನ್ನ ವೈಯಕ್ತಿಕ ವಿಚಾರಗಳಿಗಾಗಿ ಕಾನೂನನ್ನು ದುರ್ಬಳಕೆ ಮಾಡಿಕೊಂಡು ಪೊಲೀಸ್ ಇಲಾಖೆಗೆ ತಪ್ಪು ಮಾಹಿತಿ ನೀಡಿರುವ ಬಗ್ಗೆ ಮಹಮದ್ ಸಫ್ವಾನ್ 19 ವರ್ಷ ಎಂಬುವನ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

4 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

14 hours ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

14 hours ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

1 day ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

2 days ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

2 days ago