Advertisement
ಅಪರಾಧ

ಪ್ರೇಮ ವ್ಯವಹಾರ ಮನೆಯವರಿಗೆ ಗೊತ್ತಾಗುತ್ತದೆ ಎಂದು ಸುಳ್ಳು ಕತೆ ಕಟ್ಟಿದ….!

Share

ವಿಟ್ಲ: ಪ್ರೇಮ ವ್ಯವಹಾರ ಮನೆಯವರಿಗೆ ಗೊತ್ತಾಗುತ್ತದೆ ಎಂದು ಭಯಪಟ್ಟು ಯಾರೋ ಅಪರಿಚಿತ ಮುಸುಕುದಾರಿಗಳು ತನ್ನ ಬೈಕನ್ನು ಅಡ್ಡಗಟ್ಟಿ ಬ್ಲೇಡ್ ನಿಂದ ಹಲ್ಲೆ ಮಾಡಿರುತ್ತಾರೆ ಎಂದು ಸುಳ್ಳು ಪ್ರಕರಣ ದಾಖಲಿಸಿರುವ ಪ್ರಕರಣವನ್ನು ವಿಟ್ಲ ಪೊಲೀಸರು ಬೆಳಕಿಗೆ ತಂದಿದ್ದಾರೆ.

ಮಂಗಳವಾರ  ಸಾಲೆತ್ತೂರು ಕುಂಚಿತಡ್ಕ ನಿವಾಸಿ 19 ವರ್ಷದ  ಮಹಮದ್ ಸಫ್ವಾನ್ ಎಂಬುವರ ಮೇಲೆ ಅಪರಿಚಿತರು ಬ್ಲೇಡ್ ದಾಳಿ ಮಾಡಿರುತ್ತಾರೆ ಎಂದು  ವಿಟ್ಲ ಠಾಣೆಯಲ್ಲಿ ನೀಡಿದ ದೂರಿನಂತೆ  ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದರು. ಈ ಸಂದರ್ಭ ಪೊಲೀಸರು ಮಹಮದ್ ಸಫ್ವಾನ್ ನ ಗಾಯದ ಬಗ್ಗೆ ಅನುಮಾನಗೊಂಡು ಆತನ ಕುಟುಂಬಿಕರಲ್ಲಿ ವಿಚಾರಿಸಿದಾಗ,  ಇತ್ತೀಚಿನ ದಿನಗಳಲ್ಲಿ ಆತನ ವರ್ತನೆಯಲ್ಲಿ ಬದಲಾವಣೆ ಇರುವ ಬಗ್ಗೆ ತಿಳಿಸಿದ್ದು ಆತನನ್ನು ವಿಚಾರಣೆಗೊಳಪಡಿಸಿದರು. ಈ ಸಂದರ್ಭ ಸತ್ಯ ಬಯಲಾಯಿತು,  ದೂರುದಾರನು ಪ್ರೇಮ ವೈಫಲ್ಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ತಾನೆ ಬ್ಲೇಡ್ ಖರೀದಿಸಿ ರಾತ್ರಿ ಸುಮಾರು 8-30 ಗಂಟೆ ಸುಮಾರಿಗೆ ಮನೆ ಹತ್ತಿರದ ವಾಟರ್ ಟ್ಯಾಂಕ್ ಬಳಿ ಎಡಗೈಗೆ ಕುಯ್ದುಕೊಂಡಿರುವುದಾಗಿ ತಿಳಿದುಬಂದಿತು.  ತನಗಾದ ಗಾಯದಿಂದ ತನ್ನ ಪ್ರೇಮ ವ್ಯವಹಾರ ಮನೆಯವರಿಗೆ ಗೊತ್ತಾಗುತ್ತದೆ ಎಂದು ಭಯಪಟ್ಟು ಯಾರೋ ಅಪರಿಚಿತ ಮುಸುಕುದಾರಿಗಳು ತನ್ನ ಬೈಕನ್ನು ಅಡ್ಡಗಟ್ಟಿ ಬ್ಲೇಡ್ ನಿಂದ ಹಲ್ಲೆ ಮಾಡಿರುತ್ತಾರೆ ಎಂದು ಸುಳ್ಳು ಪ್ರಕರಣ ದಾಖಲಿಸಿರುವುದಾಗಿ ತಿಳಿಯಿತು.

ಈ ಪ್ರಕರಣ ತೀವ್ರ ಸಂಚಲನ ಮೂಡಿಸಿತ್ತು ಅಲ್ಲದೆ ಸಾಮಾಜಿಕ ಸಾಮರಸ್ಯದ ಮೇಲೂ ಪರಿಣಾಮ ಬೀರುವ ಹಂತದಲ್ಲಿತ್ತು. ಹೀಗಾಗಿ ಪೊಲೀಸರು

ಸಾಲೆತ್ತೂರು ಪರಿಸರವು ಶಾಂತಿ ಮತ್ತು ಸಾಮರಸ್ಯದಿಂದಿದ್ದು ಮಹಮದ್ ಸಫ್ವಾನ್ ತನ್ನ ವೈಯಕ್ತಿಕ ವಿಚಾರಗಳಿಗಾಗಿ ಕಾನೂನನ್ನು ದುರ್ಬಳಕೆ ಮಾಡಿಕೊಂಡು ಪೊಲೀಸ್ ಇಲಾಖೆಗೆ ತಪ್ಪು ಮಾಹಿತಿ ನೀಡಿರುವ ಬಗ್ಗೆ ಮಹಮದ್ ಸಫ್ವಾನ್ 19 ವರ್ಷ ಎಂಬುವನ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

12 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

12 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

12 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

22 hours ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

1 day ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

1 day ago