Advertisement
ಸುದ್ದಿಗಳು

ಪ್ರೋತ್ಸಾಹದ ಕೊರತೆಯಿಂದ ಯುವಜನ ಚಟುವಟಿಕೆ ಕುಂಠಿತ- ಯುವಜನ ಸಂಯುಕ್ತ ಮಂಡಳಿ

Share

ಸುಳ್ಯ : ಯುವಜನ ಚಟುವಟಿಕೆಗಳಿಗೆ ಸರಕಾರಗಳು ಮತ್ತು ಸ್ಥಳೀಯ ಸಂಸ್ಥೆಗಳು ನೀಡುವ ಅನುದಾನ ಮತ್ತು ಪ್ರೋತ್ಸಾಹ ಸಾಲದು. ಯುವಜನತೆಯನ್ನು ಉತ್ತೇಜಿಸು ಸಲುವಾಗಿ ಸರಕಾರಗಳು ಹೆಚ್ಚಿನ ಅನುದಾನ ನೀಡಬೇಕೆಂದು ಸುಳ್ಯ ತಾಲೂಕು ಯುವಜನ ಸಂಯುಕ್ತ ಮಂಡಳಿಯ ಗೌರವ ಸಲಹೆಗಾರ ದಿನೇಶ್ ಮಡಪ್ಪಾಡಿ ಹೇಳಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಮೊದಲು ತಾಲೂಕು ಮಟ್ಟದಲ್ಲಿ ನಡೆಯುತ್ತಿದ್ದ ಯುವಜನ ಮೇಳಗಳು ಈಗ ಜಿಲ್ಲಾ ಮಟ್ಟಕ್ಕೆ ಸೀಮಿತಗೊಂಡಿದೆ. ದಸರಾ ಕ್ರೀಡಾ ಕೂಟಗಳನ್ನು ಸಂಘಟಿಸುವಾಗ ಯುವಜನ ಸಂಯುಕ್ತ ಮಂಡಳಿಯನ್ನು, ಒಕ್ಕೂಟವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಸ್ಥಳೀಯ ಸಂಸ್ಥೆಗಳು ಹಾಗೂ ಸರಕಾರಗಳು ಯುವಜನ ಚಟುವಟಿಕೆಗಳಿಗೆ ಅತ್ಯಂತ ಅಲ್ಪ ಅನುದಾನ ನೀಡುತ್ತಿದೆ. ಇದರಿಂದಾಗಿ ಯುವಜನರ ಕಾರ್ಯಕ್ರಮಗಳಿಗೆ ಹೆಚ್ಚಿನ ಪ್ರೋತ್ಸಾಹ ಇಲ್ಲದಂತಾಗಿದೆ. ಆದರೂ ಈಗ ಯುವಕ – ಯುವತಿ ಮಂಡಲಗಳ ಸ್ವ ಪ್ರಯತ್ನದಿಂದಾಗಿಯೇ ಇಲ್ಲಿ ಹೆಚ್ಚಿನ ಕಾರ್ಯಕ್ರಮಗಳು ನಡೆಯುತ್ತಿದೆ ಎಂದು ಹೇಳಿದರು.

ಯುವಜನ ಸಂಯುಕ್ತ ಮಂಡಳಿಯಿಂದ ಟ್ರಸ್ಟ್ ಒಂದನ್ನು ಆರಂಭಿಸಿ ಆ ಮೂಲಕ ಚಟುವಟಿಕೆಗಳನ್ನು ಮುಂದುವರಿಸಲು ತೀರ್ಮಾನಿಸಲಾಗಿದೆ. ಯುವಜನ ಸಂಯುಕ್ತ ಮಂಡಳಿಯ ಮೇಲಂತಸ್ತಿನ ಕಟ್ಟಡ ಕಾಮಗಾರಿಗೆ ಸಂಸದರ ನಿಧಿಯಿಂದ ಮೂರು ಲಕ್ಷ ರೂ ಮಂಜೂರುಗೊಂಡಿದ್ದು ಅದು ಬಂದ ಕೂಡಲೇ ಕೆಲಸ ಆರಂಭಿಸಲಾಗುವುದು ಎಂದು ಹೇಳಿದರು.
ಸುಳ್ಯ ತಾಲೂಕಿನಲ್ಲಿ ಈ ಬಾರಿ ಯುವ ಸಮ್ಮೇಳನದಂತಹ ಹೊಸ ಕಾರ್ಯಕ್ರಮಗಳನ್ನು ಸಂಘಟಿಸಲಾಗಿದೆ ಎಂದು ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ದಿಲೀಪ್ ಬಾಬ್ಲುಬೆಟ್ಟು ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಮಂಡಳಿಯ ಗೌರವಾಧ್ಯಕ್ಷ ಚಂದ್ರಶೇಖರ ಪನ್ನೆ, ಗೌರವ ಸಲಹೆಗಾರರಾದ ಶೈಲೇಶ್ ಅಂಬೆಕಲ್ಲು, ದೀಪಕ್ ಕುತ್ತಮೊಟ್ಟೆ, ಲಕ್ಷ್ಮೀನಾರಾಯಣ ಕಜೆಗದ್ದೆ, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಜಯನಗರ, ಕೋಶಾಧಿಕಾರಿ ತೇಜಸ್ವಿ ಕಡಪಳ, ಜತೆ ಕಾರ್ಯದರ್ಶಿಗಳಾದ ವಿಜಯ ಕುಮಾರ್ ಉಬರಡ್ಕ, ಶಂಕರ ಪೆರಾಜೆ, ನಿರ್ದೇಶಕರುಗಳಾದ ದಯಾನಂದ ಕೇರ್ಪಳ, ಆರ್.ಕೆ.ಮಹಮ್ಮದ್, ಚರಣ್ ಕಾಯರ, ವಿಖ್ಯಾತ್ ಬಾರ್ಪಣೆ, ಪವನ್ ಜಿ.ಟಿ. ಪಲ್ಲತಡ್ಕ,  ರಶ್ಮಿ ರಜನಿಕಾಂತ್, ಶ್ರೀಮತಿ ರಾಜೀವಿ ಲಾವಂತಡ್ಕ, ಪೂರ್ವಾಧ್ಯಕ್ಷರಾದ ಪಿ.ಎಸ್.ಗಂಗಾಧರ್, ಕೆ.ಆರ್. ಪದ್ಮನಾಭ, ಹರೀಶ್ ಪೂಜಾರಿಮನೆ, ರಂಜಿತ್ ಕುಕ್ಕೆಟ್ಟಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

17 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

18 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

18 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

21 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 day ago