Advertisement

ಪ್ಲಾಸ್ಟಿಕ್ ನಿಷೇಧ ಯಶಸ್ವಿ ಅನುಷ್ಠಾನ- ಏನು ಮಾಡಬಹುದು..?

Share

ಸುಳ್ಯ ನಗರದಲ್ಲಿ ಆ.15 ರಿಂದ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಚಿಂತನೆ ನಡೆದಿದೆ. ಹೀಗೊಂದು ಯೋಚನೆ ತಾಲೂಕು ಆಡಳಿತ ಮಾಡಿದ ತಕ್ಷಣವೇ ಇದು ಸಾಧ್ಯವಾ ? ಅಂತ ನೆಗೆಟಿವ್ ಮಾತನಾಡುವ ಬದಲಾಗಿ ಇದನ್ನು ಹೇಗೆ ಅನುಷ್ಠಾನ ಮಾಡಬಹುದು ಎಂಬ ಸಲಹೆ ನೀಡಿದರೆ ಯಶಸ್ವಿಯಾಗಿ ಈ ಯೋಜನೆ ಜಾರಿಯಾಗಲು ಸಾಧ್ಯವಿದೆ. ಪ್ಲಾಸ್ಟಿಕ್ ಬಳಕೆ ಕಡಿಮೆಯಾಗಬೇಕು ಎಂಬುದನ್ನು ಮತ್ತೆ ಮತ್ತೆ ಹೇಳಬೇಕಾಗಿಲ್ಲ. ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವ ಬಗ್ಗೆ ಗ್ರಾಮೀಣ ಭಾಗದಲ್ಲೂ ಯೋಚನೆ ಹೆಚ್ಚಾಗಬೇಕಿದೆ. ಹೀಗಾಗಿ ಈ ಬಗ್ಗೆ ಯಾವುದೇ ಸಲಹೆ, ಮಾಹಿತಿ ಇದ್ದರೆ ಸುಳ್ಯನ್ಯೂಸ್.ಕಾಂ ಗೆ ಬರೆದು ಕಳುಹಿಸಿ. 


ಎಂ ಡಿ ವಿಜಯ ಕುಮಾರ್

ಮಡಪ್ಪಾಡಿ ಮಹತ್ಮಾಗಾಂಧಿ ಗ್ರಾಮ ಸೇವಾ ತಂಡದ  ಸಂಚಾಲಕ ಎಂ.ಡಿ.ವಿಜಯಕುಮಾರ್ ಹೀಗೆ ಹೇಳುತ್ತಾರೆ,

ಸ್ವಚ್ಛ ನಗರ ಸುಳ್ಯ ಕಲ್ಪನೆಯ ಸಾಕಾರಕ್ಕಾಗಿ ಚಿಂತನೆ, ಯೋಜನೆ, ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ವಿಚಾರ. ಪ್ಲಾಸ್ಟಿಕ್ ನಿಷೇದದ ಬಗ್ಗೆ ಪರಿಣಾಮಕಾರೀ ರೀತಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ತೀರ್ಮಾನ ಮಾಡಿರುವುದು ಸಂತಸ ತಂದಿದೆ. ಈ ನಿಟ್ಟಿನಲ್ಲಿ ತಾಲೂಕಿನಾದ್ಯಂತ ಮುಂದಿನ ಸ್ವಾತಂತ್ರ ದಿನಾಚರಣೆ ಸಮಾರಂಭ ಗಳಲ್ಲಿ ಪ್ಲಾಸ್ಟಿಕ್ ನಿಷೇದ ವಿಚಾರ ಅತ್ಯಂತ ಪ್ರಮುಖ ವಿಷಯವಾಗಿ ಹೊರಹೊಮ್ಮಬೇಕು.

ಸರಕಾರಿ ಕಚೇರಿಗಳು, ವಿದ್ಯಾಸಂಸ್ಥೆ ಗಳು, ಸಂಘಸಂಸ್ಥೆಗಳು, ಇತರ ಬೇರೆ ಬೇರೆ ಸಂಘಟನೆಗಳು ತಾಲ್ಲೂಕಿನ ಆದ್ಯಂತ ನೂರಾರು ಕಡೆ ಧ್ವಜಾರೋಹಣ ಕಾರ್ಯಕ್ರಮ ನಡೆಸುತ್ತಿರುವುದು ನಮಗೆಲ್ಲ ತಿಳಿದ ಸಂಗತಿ. ಈ ಎಲ್ಲಾ ಕಡೆ ಪ್ಲಾಸ್ಟಿಕ್ ಚೀಲಗಳ ಬಳಕೆಯನ್ನು ನಿಲ್ಲಿಸುವ ಪ್ರತಿಜ್ಞಾ ಕಾರ್ಯಕ್ರಮ ನಡೆಸಿ ಆಯಾ ಸಂಘಟನೆಗಳ ಆರ್ಥಿಕ ಸಹಕಾರದೊಂದಿಗೆ ಉತ್ತಮ ದರ್ಜೆಯ ಒಂದಷ್ಟು ಬಟ್ಟೆಯ ಚೀಲಗಳನ್ನು (ಸ್ವಚ್ಛ ಸುಳ್ಯ ಲಾಂಛನದೊಂದಿಗೆ )ಅವರವರು ವಿತರಿಸುವ ಬಗ್ಗೆ ಮುಂದಾಗಬೇಕು. ವಸ್ತುಗಳ ಖರೀದಿಗಾಗಿ ಅಂಗಡಿಗಳಿಗೆ ಹೋಗುವಾಗ ಈ ಕೈ ಚೀಲಗಳನ್ನು ಜೊತೆಗೆ ಒಯ್ಯುವ ಪರಿಪಾಠ ರೂಡಿಸಿಕೊಳ್ಳಬೇಕು. ಮೊದಲು ಸಂಘ ಸಂಸ್ಥೆಗಳ ಮುಖ್ಯಸ್ಥರು, ಪಧಾದಿಕಾರಿಗಳು, ಸದಸ್ಯರು ತಪ್ಪದೇ ಇದನ್ನು ಪಾಲಿಸಬೇಕು. ತಾಲ್ಲೂಕಿನ ಎಲ್ಲಾ ಸಂಘ ಸಂಸ್ಥೆಗಳ ಪಟ್ಟಿ ಮಾಡಿ ಅವರನ್ನು ಸಂಪರ್ಕಿಸಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡರೆ ಪ್ಲಾಸ್ಟಿಕ್ ನಿಷೇದ ಕಾರ್ಯಕ್ರಮ ಇನ್ನಷ್ಟು ಪರಿಣಾಮಕಾರಿಯಾಗಬಹುದು ಎಂದು ನನ್ನ ಅಭಿಮತ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

8 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

8 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

9 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

9 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

19 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

20 hours ago