Advertisement
ಸುದ್ದಿಗಳು

ಪ.ಜಾತಿ ಮಹಿಳೆಯ ಕೃಷಿ ಜಾಗವನ್ನು ಘನತ್ಯಾಜ್ಯ ವಿಲೇವಾರಿಗೆ ಗುರುತಿಸದಂತೆ ಮನವಿ

Share

ಸುಳ್ಯ:ಅಜ್ಜಾವರ ಗ್ರಾಮದ ನೆಲ್ಯಡ್ಕ ಎಂಬಲ್ಲಿ ಪ.ಜಾತಿ ಮಹಿಳೆಯೊಬ್ಬರು ರಬ್ಬರ್ ಕೃಷಿ ಮಾಡಿಕೊಂಡು ಬಂದ ಜಾಗವನ್ನು ಇದೀಗ ಅಜ್ಜಾವರ ಗ್ರಾ.ಪಂ. ಘನತ್ಯಾಜ್ಯ ವಿಲೇವಾರಿ ಮಾಡಲು ಗುರುತಿಸಿದೆ. ಗ್ರಾ.ಪಂ.ನವರು ಕೈಗೊಂಡಿರುವ ಈ ನಿರ್ಧಾರವನ್ನು ಕೈ ಬಿಟ್ಟು ಆ ಜಾಗವನ್ನು ಆ ಮಹಿಳೆಗೇ ಬಿಟ್ಟು ಕೊಡಬೇಕೆಂದು ಮನವಿ ಮಾಡುತ್ತೇವೆ ಎಂದು ಆದಿದ್ರಾವಿಡ ಸಮುದಾಯದ ಪ್ರಮುಖರಾದ ಕೆ.ಎಂ.ಬಾಬು ಜಾಲ್ಸೂರು ಪತ್ರಿಕಾ ಗೋಷ್ಠಿಯಲ್ಲಿ ಹೇಳಿದರು.

ನೇಲ್ಯಡ್ಕದಲ್ಲಿ ಸುಶೀಲರವರು ೨ ಎಕ್ರೆ ಜಾಗದಲ್ಲಿ ೬೦೦ ರಬ್ಬರ್ ಕೃಷಿ ಮಾಡಿದ್ದು, ಅದರಲ್ಲಿ ೪೫೦ ಗಿಡಗಳು ಈಗ ಹಾಲು ಟ್ಯಾಪಿಂಗ್ ಮಾಡಲಾಗುತ್ತಿದೆ. ಇದು ಸರಕಾರಿ ಜಮೀನು. ಇದನ್ನು ಅಕ್ರಮ ಸಕ್ರಮದಲ್ಲಿ ಮಾಡಿಕೊಳ್ಳಲು ಅವರು ಅರ್ಜಿಯನ್ನು ಹಾಕಿದ್ದಾರೆ.

ಇದೀಗ ಈ ಜಾಗವನ್ನು ಗ್ರಾ.ಪಂ. ಘನತ್ಯಾಜ್ಯ ವಿಲೇವಾರಿಗೆ ಗುರಿತಿಸಿದ್ದು ಇದರಿಂದ ಇವರಿಗೆ ತೊಂದರೆಯಾಗುತ್ತದೆ. ಆದ್ದರಿಂದ ಘನತ್ಯಾಜ್ಯಕ್ಕೆ ಬೇರೆ ಜಾಗ ಗುರುತಿಸುವಂತೆ ವಿನಂತಿಸಿದ ಅವರು ಇದೇ ಸರ್ವೆ ನಂಬರ್‌ನಲ್ಲಿ ಒಟ್ಟು ೭.೭೩ ಎಕ್ರೆ ಸರಕಾರಿ ಜಮೀನು ಇದೆ. ಅದರಲ್ಲಿ ೨ ಎಕ್ರೆ ಸುಶೀಲರು ಕೃಷಿ ಮಾಡಿದರೆ ಉಳಿದ ಜಾಗವೂ ಒತ್ತುವರಿಯಾಗಿದೆ. ಅದೆಲ್ಲವನ್ನು ಬಿಟ್ಟು ಇವರ ಜಾಗ ಮಾತ್ರ ಘನತ್ಯಾಜ್ಯ ವಿಲೇವಾರಿಗೆ ಗುರಿತಿಸಿರುವುದು ಸರಿಯಲ್ಲ. ಇದಕ್ಕೆ ನಾವು ಅವಕಾಶವನ್ನು ನೀಡುವುದಿಲ್ಲ. ಜಿಲ್ಲಾಧಿಕಾರಿ ಸೇರಿದಂತೆ ಹಲವರಿಗೆ ಮನವಿ ಮಾಡಿಕೊಂಡಿದ್ದೇವೆ ಎಂದು ಕೆ.ಎಂ.ಬಾಬು ಹೇಳಿದರು.

ಸುಶೀಲಾ ಮಾತನಾಡಿ ಅಕ್ರಮ ಸಕ್ರಮದಡಿಯಲ್ಲಿ ಅರ್ಜಿ ಅಲ್ಲಿಸಲಾಗಿದ್ದು ಕೃಷಿ ಮಾಡಿದ ಆ ಜಾಗವನ್ನು ತನ್ನ ಹೆಸರಿಗೆ ನೀಡಬೇಕೆಂದು ವಿನಂತಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರತ್ನಾವತಿ ಉದ್ದಂತಡ್ಕ, ವಿಶ್ವನಾಥ ಉದ್ದಂತಡ್ಕ, ಸತೀಶ್ ನೆಲ್ಯಡ್ಕ, ರವಿ ಪಿಲಿಕೋಡಿ, ಮಂಜುನಾಥ ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ

ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…

3 hours ago

ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ

ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…

4 hours ago

ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು

ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್‌ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…

4 hours ago

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ

ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…

12 hours ago

ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ

ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…

13 hours ago

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ | ಲೀಟರ್‌ಗೆ ₹2 ಹೆಚ್ಚಳ ಘೋಷಿಸಿದ ಕೋಮುಲ್

ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್‌ಗೆ ₹2 ಹೆಚ್ಚಳ ಮಾಡಲಾಗಿದೆ.…

13 hours ago